ಕಲಂ 370 ರದ್ದು ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಮೊದಲ ಅರ್ಜಿ
ನವದೆಹಲಿ, ಆಗಸ್ಟ್ 07: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುವ ಸಂವಿಧಾನದ 370ನೇ ವಿಧಿ ರದ್ದುಪಡಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಪಿಟೀಷನ್ ಹಾಕಲಾಗಿದೆ.
ಈ ಕಲಂ ರದ್ದುಪಡಿಸುವ ಅಧಿಕಾರ ರಾಷ್ಟಪತಿಗಿದೆ ಈ ನಿಬಂಧನೆಯು ಕೇವಲ ತಾತ್ಕಾಲಿಕವಾಗಿರುವ ಕಾರಣ ಯಾವುದೇ ಸಂದರ್ಭದಲ್ಲಿ ರದ್ದುಪಡಿಸಬಹುದು. ಈ ವಿಧಿ ರಚಿಸುವಾಗಲೇ ಇದೊಂದು ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ಯಾವಾಗ ಬೇಕಾದರೂ ರದ್ದುಪಡಿಸಬಹುದು ಎಂದು ಸ್ಪಷ್ಟಪಡಿಸಲಾಗಿದೆ. ಭಾರತದ ರಾಷ್ಟ್ರಪತಿಯವರು ಒಂದು ಸಾರ್ವಜನಿಕ ಅಧಿಸೂಚನೆ ಹೊರಡಿಸುವ ಮೂಲಕ ರದ್ದುಪಡಿಸುವ ಅಧಿಕಾರ ಹೊಂದಿದ್ದಾರೆ.
ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಪರಿಚ್ಛೇದ ತಿದ್ದುಪಡಿಗಾಗಿ ಸಂಸತ್ ಮಾರ್ಗವನ್ನು ಕೇಂದ್ರ ಸರ್ಕಾರ ಅನುಸರಿಸಿದ್ದು ಸರಿಯಲ್ಲ ಎಂದು ವಕೀಲ ಎಂಎಲ್ ಶರ್ಮ ಅವರು ಸುಪ್ರೀಂಕೋರ್ಟಿನಲ್ಲಿ ಅರ್ಜಿ ಹಾಕಿದ್ದಾರೆ. ರಾಷ್ಟ್ರಪತಿಗಳಿಗೆ ಇರುವ ಪರಮಾಧಿಕಾರವನ್ನು ಸರ್ಕಾರ ತನ್ನ ಅನುಕೂಲಕ್ಕೆ ದುರುಪಯೋಗ ಪಡಿಸಿಕೊಂಡು ಅಸಂವಿಧಾನಿಕ ಕ್ರಮಗಳ ಮೂಲಕ ಕಣಿವೆ ರಾಜ್ಯದ ಅಧಿಕಾರ ಕಿತ್ತುಕೊಂಡಿದೆ ಎಂದು ಅರ್ಜಿಯಲ್ಲಿ ವಕೀಲರು ಹೇಳಿದ್ದಾರೆ.

ಆರ್ಟಿಕಲ್ 370ರದ್ದು ಪಡಿಸಲು ಅರ್ಜಿಗಳು :
ರಾಷ್ಟ್ರಪತಿಗಳನ್ನು ಉದ್ದೇಶಿಸಿ ಬರೆದಿರುವ 'ಕಾಂಪೈನ್ ಟು ಅಬಾಲಿಷ್ ಆರ್ಟಿಕಲ್ 370' ಅರ್ಜಿಗೆ ಆನ್ ಲೈನ್ ಅರ್ಜಿಗೆ 3 ಲಕ್ಷದ ತನಕ ಸಹಿ ಬಿದ್ದಿತ್ತು. 'ಜಮ್ಮು ಕಾಶ್ಮೀರದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ. ಅತ್ಯಂತ ಹಿಂದುಳಿದಿದೆ. ಇದಕ್ಕೆ 370ನೇ ವಿಧಿಯೇ ಕಾರಣ ಎಂದು ಈ ವಿಧಿ ರದ್ದುಪಡಿಸಲು ಆಗ್ರಹಿಸುತ್ತಿರುವವರು ವಾದ ಮಂಡಿಸುತ್ತಾರೆ' ಎಂದು ಬಿಜೆಪಿ ಮುಖಂಡ ಅಶ್ವಿನಿ ಉಪಾಧ್ಯಾಯ್ ಅವರು ಈ ಹಿಂದೆ ಅರ್ಜಿ ಸಲ್ಲಿಸಿದ್ದರು.
ಒಂದು ರಾಷ್ಟ್ರ, ಒಂದು ಸಂವಿಧಾನ, ಒಂದು ರಾಷ್ಟ್ರಗೀತೆ ಹಾಗೂ ಒಂದು ರಾಷ್ಟ್ರಧ್ವಜ ಎಂಬ ಪರಿಕಲ್ಪನೆಗೆ ವ್ಯತಿರಿಕ್ತವಾದ ಪರಿಸ್ಥಿತಿಯನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಣಬಹುದಾಗಿತ್ತು. ಇತರೆ ರಾಜ್ಯಗಳಿಗಿಂತ ಹೆಚ್ಚಿನ ಅನುದಾನ ಹಾಗೂ ಕಾಳಜಿ ಕಣಿವೆ ರಾಜ್ಯದ ಮೇಲೆ ಎಲ್ಲಾ ಸರ್ಕಾರಗಳು ನೀಡುತ್ತಾ ಬಂದರೂ ಅಲ್ಲಿನ ಪರಿಸ್ಥಿತಿ ಸುಧಾರಿಸಿರಲಿಲ್ಲ. ಹೀಗಾಗಿ, ತಾತ್ಕಾಲಿಕವಾಗಿ ಜಾರಿಗೆ ಬಂದ ಪರಿಚ್ಛೇದ 370(3) ರ ಅಗತ್ಯ ಈಗ ಇಲ್ಲ ಎಂದು ಸರ್ಕಾರ ಕ್ರಮ ಜರುಗಿಸಿದ್ದು, ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಒಂದು ಸಾರ್ವಜನಿಕ ಅಧಿಸೂಚನೆ ಹೊರಡಿಸುವ ಮೂಲಕ ರದ್ದುಪಡಿಸುವ ಪ್ರಕ್ರಿಯೆ ಪೂರ್ಣಗೊಳಿಸಿದರು.
ವಿವಾಹ, ಆಸ್ತಿ ಖರೀದಿ, ಸರ್ಕಾರಿ ಸೌಲಭ್ಯಗಳನ್ನು ಪಡೆಯುವ ವಿಚಾರದಲ್ಲಿ ತಾರತಮ್ಯವಿದೆ. ಆದ್ದರಿಂದ, ಕಲಂ 35-ಎ ಸಿಂಧುತ್ವ ಪ್ರಶ್ನಿಸಿ, ಕಲಂ 35-ಎ ಅನ್ವಯ ಕಣಿವೆ ರಾಜ್ಯದಲ್ಲಿನ ಕೆಲವು ಜನರಿಗೆ ಆ ಹಕ್ಕುಗಳು ಸಿಗುತ್ತಿಲ್ಲ ಎಂದು ಆರೋಪಿಸಿದ ಸುಪ್ರೀಂಕೋರ್ಟಿನಲ್ಲಿ ಸಾರ್ವಜಿನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications