ಕಾಶ್ಮೀರ ಕಣಿವೆಯಲ್ಲಿನ ಟಾಪ್ 5 ಉಗ್ರರ ಪಟ್ಟಿ
ನವದೆಹಲಿ, ಸೆಪ್ಟೆಂಬರ್ 15 : ಅಮರನಾಥ ಯಾತ್ರಿಗಳ ಮೇಲೆ ನಡೆದ ಉಗ್ರರ ದಾಳಿಯ ಸಂಚು ರೂಪಿಸಿದ್ದ ಅಬು ಇಸ್ಮಾಯಿಲ್ನನ್ನು ಭದ್ರತಾ ಪಡೆಗಳು ಕೊಂದು ಹಾಕಿವೆ. ಲಷ್ಕರ್ ಏ ತೋಯ್ಬಾದ ಕಮಾಂಡರ್ ಆಗಿದ್ದ ಇಸ್ಮಾಯಿಲ್ ಹತ್ಯೆಯಿಂದ ಕಾಶ್ಮೀರ ಕಣಿವೆಯಲ್ಲಿ ಮತ್ತೊಬ್ಬ ಭಯೋತ್ಪಾದಕ ನಾಯಕನ ಹತ್ಯೆ ನಡೆದಂತಾಗಿದೆ.
ಇತ್ತೀಚೆಗೆ ನಡೆದ ಎನ್ ಕೌಂಟರ್ಗಳಲ್ಲಿ ಲಷ್ಕರ್ ಏ ತೋಯ್ಬಾದ ಕಮಾಂಡರ್ ಅಬು ದುಜಾನ್, ಸಬ್ ಜಾರ್ ಭಟ್, ಬುರ್ಹಾನ್ ವಾನಿಯನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದವು. ಪ್ರಮುಖ ಉಗ್ರರ ಹತ್ಯೆ ಮೂಲಕ ಕಾಶ್ಮೀರ ಕಣಿವೆಯಲ್ಲಿ ಉಗ್ರರ ಚಟುವಟಿಕೆಗೆ ತಡೆ ಉಂಟಾಗಿದೆ.
ಭದ್ರತಾ ಪಡೆಗಳು ಕೆಲವು ದಿನಗಳ ಹಿಂದೆ ಗ್ರೇಡ್ A++ ಭಯೋತ್ಪಾದಕರ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದೇ ಪಟ್ಟಿಯಲ್ಲಿದ್ದ ಅಬು ಇಸ್ಮಾಯಿಲ್ನನ್ನು ಗುರುವಾರ ನಡೆದ ಮೂರು ನಿಮಿಷಗಳ ಎನ್ ಕೌಂಟರ್ನಲ್ಲಿ ಹತ್ಯೆ ಮಾಡಲಾಗಿದೆ.
ಕಣಿವೆ ರಾಜ್ಯದಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಸಂಚು ರೂಪಿಸುತ್ತಿದ್ದ ಪ್ರಮುಖ ಉಗ್ರರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ. ಪಟ್ಟಿಯಲ್ಲಿರುವ ಬಾಕಿ ಉಳಿದಿರುವ ಉಗ್ರರ ಮಾಹಿತಿ ಇಲ್ಲಿದೆ....

ಅಲ್ ಕೈದಾ ಸ್ಥಾಪಕ ಝಾಕೀರ್
ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯಲ್ಲಿದ್ದ ಉಗ್ರ ಝಾಕೀರ್ ಮೂಸಾ ಅದರಿಂದ ಹೊರಬಂದು ಕಾಶ್ಮೀರ ಕಣಿವೆಯಲ್ಲಿ ಅಲ್ ಖೈದಾ ಸ್ಥಾಪನೆ ಮಾಡಿದ. ಸದಾ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಈತ, ಕಣಿವೆ ರಾಜ್ಯದ ಜನರಿಗೆ ಚಿರಪರಿಚಿತನಾಗಿದ್ದಾನೆ. ಭದ್ರತಾ ಪಡೆಗಳ ಪಟ್ಟಿಯಲ್ಲಿ ಈತನ ಹೆಸರಿದೆ.

ಮುಂದಿನ ಲಷ್ಕರ್ ಕಮಾಂಡರ್
ಅಬು ಇಸ್ಮಾಯಿಲ್ ಹತ್ಯೆ ಬಳಿಕ ಕಣಿವೆ ರಾಜ್ಯದಲ್ಲಿ ಲಷ್ಕರ್ ಮುನ್ನಡೆಸುವ ಜವಾಬ್ದಾರಿ ಜೀನತ್ ಉಲ್ ಇಸ್ಲಾಂ ತೆಗೆದುಕೊಳ್ಳಲಿದ್ದಾನೆ. 28 ವರ್ಷದ ಜೀನತ್ 2015ರಿಂದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾನೆ. ಬಾಂಬ್ ತಯಾರು ಮಾಡುವುದರಲ್ಲಿ ಈತ ಪಳಗಿದವನು.

ಜೈಷ್ ಎ ಮೊಹಮದ್ ಉಗ್ರ
ಖಾಲಿದ್ ಮತ್ತು ಅಬು ಹಮಾಸ್ ಹೆಸರಿನಿಂದ ಕರೆಯಲ್ಪಡುವ ಜೈಷ್ ಎ ಮೊಹಮದ್ ಸಂಘಟನೆಯ ಉಗ್ರ ನೀತ. 2016ರಿಂದ ಕಾಶ್ಮೀರ ಕಣಿವೆಯಲ್ಲಿ ಸಕ್ರಿಯನಾಗಿರುವ ಈತ ಪಾಕಿಸ್ತಾನ ಮೂಲದವನು. ದಕ್ಷಿಣ ಕಾಶ್ಮೀರದಲ್ಲಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿಯ ರೂವಾರಿ ಈತ. ಈ ದಾಳಿಯಲ್ಲಿ 8 ಜನರು, 4 ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದರು.

ಅಪಾಯಕಾರಿ ಉಗ್ರ
ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ನೂತನ ಮುಖ್ಯಸ್ಥ ರಿಯಾಜ್ ನಾಯ್ಕೂ ಅಪಾಯಕಾರಿ ಉಗ್ರ. 20 ವರ್ಷದ ಈತ ಭದ್ರತಾ ಪಡೆಗಳ ಕೈಗೆ ಸಿಗದೆ ಹಲವು ಬಾರಿ ತಪ್ಪಿಸಿಕೊಂಡಿದ್ದಾನೆ.

ಹಿಜ್ಬುಲ್ ಮುಜಾಹಿದ್ದೀನ್ ಉಗ್ರ
ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಜಿಲ್ಲಾ ಕಮಾಂಡರ್ ಸಲೀಂ ಪದ್ದಾರ್. ಶೋಪಿಯಾನ್ ಪ್ರಾಂತ್ಯದ ನಿವಾಸಿಯಾದ ಈತನನ್ನು 2015ರಲ್ಲಿ ಸಂಘಟನೆಗೆ ಸೇರಿಸಿಕೊಳ್ಳಲಾಗಿದೆ. ಎನ್ ಕೌಂಟರ್ನಲ್ಲಿ ಹತ್ಯೆಯಾದ ಬುರ್ಹಾನ್ ವಾನಿ ಕ್ಯಾಂಪ್ನ ಸದಸ್ಯನಾಗಿದ್ದ.
-
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications