ಕೇರಳದಲ್ಲಿ ಎಬಿವಿಪಿ ಸದಸ್ಯನ ಕೊಲೆ, ಎಸ್ಡಿಪಿಐ ಸದಸ್ಯರ ಬಂಧನ
ಕಣ್ಣೂರು, ಜನವರಿ 20: ಕೇರಳದ ಕಣ್ಣೂರಿನಲ್ಲಿ ಮತ್ತೆ ಮತೀಯ ದ್ವೇಷಕ್ಕೆ ಕೊಲೆಯೊಂದು ನಡೆದಿದೆ. ಎರಡು ತಿಂಗಳ ಅವಧಿಯಲ್ಲಿ ಕಣ್ಣೂರಿನಲ್ಲಿ ನಡೆದ ಎರಡನೇ ಕೊಲೆ ಇದಾಗಿದೆ.
ಶುಕ್ರವಾರ ಎಬಿವಿಪಿ ಸಂಘಟನೆಯ ಸದಸ್ಯ ಶ್ಯಾಮ್ ಪ್ರಸಾದ್ ಎಂಬುವನನ್ನು ದುಷ್ಕರ್ಮಿಗಳು ಕೊಲೆಗೈದಿದ್ದು, ಈ ಸಂಬಂಧ ಎಸ್ಡಿಪಿಐ ಸಂಘಟನೆಯ ನಾಲ್ಕು ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಕಣ್ಣೂರಿನ ಪೆರವೂರ್ ಎಂಬಲ್ಲಿ ಹತ್ಯೆ ನಡೆದಿದ್ದು, ಬೈಕ್ನಲ್ಲಿ ತನ್ನ ಪಾಡಿಗೆ ಬರುತ್ತಿದ್ದ ಶ್ಯಾಮ್ನನ್ನು ಅಡ್ಡಗಟ್ಟಿದ ಮುಖಕ್ಕೆ ಬಟ್ಟೆ ಸುತ್ತಿಕೊಂಡಿದ್ದ 3 ಜನ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ, ಈ ಸಂದರ್ಭ ಶ್ಯಾಮ್ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟಿದ್ದಾರಾದರೂ ದುಷ್ಕರ್ಮಿಗಳು ಆತನನ್ನು ಅಟ್ಟಾಸಿಸಿಕೊಂಡು ಆಯುಧಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಶ್ಯಾಮ್ ಕೊಲೆಯನ್ನು ಎಬಿವಿಪಿ ಮತ್ತು ಕೇರಳ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಇಂದು ಕೇರಳದ ಹಲವೆಡೆ ಪ್ರತಿಭಟನೆ ಮಾಡುತ್ತಿದೆ. ಪಿಎಫ್ಐ ಮತ್ತು ಎಸ್ಡಿಪಿಐ ನಂತಹಾ ಉಗ್ರ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಅವು ಒತ್ತಾಯಿಸಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications