ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳದಲ್ಲಿ ಎಬಿವಿಪಿ ಸದಸ್ಯನ ಕೊಲೆ, ಎಸ್‌ಡಿಪಿಐ ಸದಸ್ಯರ ಬಂಧನ

By Manjunatha
|
Google Oneindia Kannada News

ಕಣ್ಣೂರು, ಜನವರಿ 20: ಕೇರಳದ ಕಣ್ಣೂರಿನಲ್ಲಿ ಮತ್ತೆ ಮತೀಯ ದ್ವೇಷಕ್ಕೆ ಕೊಲೆಯೊಂದು ನಡೆದಿದೆ. ಎರಡು ತಿಂಗಳ ಅವಧಿಯಲ್ಲಿ ಕಣ್ಣೂರಿನಲ್ಲಿ ನಡೆದ ಎರಡನೇ ಕೊಲೆ ಇದಾಗಿದೆ.

ಶುಕ್ರವಾರ ಎಬಿವಿಪಿ ಸಂಘಟನೆಯ ಸದಸ್ಯ ಶ್ಯಾಮ್ ಪ್ರಸಾದ್ ಎಂಬುವನನ್ನು ದುಷ್ಕರ್ಮಿಗಳು ಕೊಲೆಗೈದಿದ್ದು, ಈ ಸಂಬಂಧ ಎಸ್‌ಡಿಪಿಐ ಸಂಘಟನೆಯ ನಾಲ್ಕು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಕಣ್ಣೂರಿನಲ್ಲಿ ಮಚ್ಚಿನಿಂದ ಕೊಚ್ಚಿ ಎಬಿವಿಪಿ ಕಾರ್ಯಕರ್ತನ ಕೊಲೆಕಣ್ಣೂರಿನಲ್ಲಿ ಮಚ್ಚಿನಿಂದ ಕೊಚ್ಚಿ ಎಬಿವಿಪಿ ಕಾರ್ಯಕರ್ತನ ಕೊಲೆ

ಕಣ್ಣೂರಿನ ಪೆರವೂರ್ ಎಂಬಲ್ಲಿ ಹತ್ಯೆ ನಡೆದಿದ್ದು, ಬೈಕ್‌ನಲ್ಲಿ ತನ್ನ ಪಾಡಿಗೆ ಬರುತ್ತಿದ್ದ ಶ್ಯಾಮ್‌ನನ್ನು ಅಡ್ಡಗಟ್ಟಿದ ಮುಖಕ್ಕೆ ಬಟ್ಟೆ ಸುತ್ತಿಕೊಂಡಿದ್ದ 3 ಜನ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ, ಈ ಸಂದರ್ಭ ಶ್ಯಾಮ್ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟಿದ್ದಾರಾದರೂ ದುಷ್ಕರ್ಮಿಗಳು ಆತನನ್ನು ಅಟ್ಟಾಸಿಸಿಕೊಂಡು ಆಯುಧಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ABVP activist hacked to death in Kerala

ಶ್ಯಾಮ್ ಕೊಲೆಯನ್ನು ಎಬಿವಿಪಿ ಮತ್ತು ಕೇರಳ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಇಂದು ಕೇರಳದ ಹಲವೆಡೆ ಪ್ರತಿಭಟನೆ ಮಾಡುತ್ತಿದೆ. ಪಿಎಫ್‌ಐ ಮತ್ತು ಎಸ್‌ಡಿಪಿಐ ನಂತಹಾ ಉಗ್ರ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಅವು ಒತ್ತಾಯಿಸಿವೆ.

English summary
ABVP activist Shyam Prasad hacked to death in Kerala's Kannur. Police arrested 4 SDPI members regarding to this case. BJP and ABVP call for protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X