ರೀಲ್ನಲ್ಲಿ ಕೇಸರಿ ಧ್ವಜಕ್ಕೆ ಅವಮಾನ ಆರೋಪ: ತೆಲಂಗಾಣ ಮುಸ್ಲಿಂ ವ್ಯಕ್ತಿಗೆ ಬೆತ್ತಲೆಗೊಳಿಸಿ ಮೆರವಣಿಗೆ
ತೆಲಂಗಾಣ ಜನವರಿ 25: ಮುಸ್ಲಿಂ ವ್ಯಕ್ತಿಯೊಬ್ಬ ರೀಲ್ನಲ್ಲಿ ಕೇಸರಿ ಧ್ವಜವನ್ನು ಅವಮಾನಿಸಿದ್ದಾನೆಂದು ಆರೋಪಿಸಿ ಆತನಿಗೆ ಥಳಿಸಿ, ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.
ತೆಲಂಗಾಣದ ಸಂಗಾರೆಡ್ಡಿಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಕೇಸರಿ ಧ್ವಜವನ್ನು ಅವಮಾನಿಸುವ ರೀಲ್ ಅನ್ನು ಅಪ್ಲೋಡ್ ಮಾಡಿದ ನಂತರ ಗುಂಪೊಂದು ಆತನನ್ನು ಥಳಿಸಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದೆ. ರೀಲ್ನಲ್ಲಿ ಮುಸ್ಲಿಂ ಯುವಕ ಕೇಸರಿ ಧ್ವಜವನ್ನು ಹಿಡಿದಿದ್ದು ಅದರ ಮೇಲೆ ಹಿಂದೂ ಧಾರ್ಮಿಕ ಚಿಹ್ನೆ 'ಓಂ' ಎಂದು ಬರೆಯಲಾಗಿದೆ. ಅವನ ಪ್ಯಾಂಟ್ನೊಳಗೆ ಅವಮಾನಕರ ರೀತಿಯಲ್ಲಿ ಅದನ್ನು ಇಟ್ಟುಕೊಳ್ಳುತ್ತಾನೆ.

ರೀಲ್ನಿಂದ ಕೋಪಗೊಂಡ ಜನರು ಮೇದಕ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಅವರನ್ನು ಕಂಡು ಥಳಿಸಿದ್ದಾರೆ. ಇದನ್ನು ವಿಡಿಯೋ ಕೂಡ ಮಾಡಲಾಗಿದೆ. ವೀಡಿಯೋದಲ್ಲಿ ಗುಂಪು ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗುತ್ತಾ ಮುಸ್ಲಿಂ ಯುವಕನನ್ನು ಥಳಿಸಿ, ಆತನನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಮತ್ತು ಅವನ ಖಾಸಗಿ ಅಂಗಗಳಿಗೆ ಬೆಂಕಿ ಹಚ್ಚಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.
ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಯ ವಿರುದ್ಧ ಗ್ರಾಮಸ್ಥರು ದೂರು ದಾಖಲಿಸಿದ್ದರು. ಆತನ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 153(ಎ), 295-ಎ, 505(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನ್ನ ಮೇಲೆ ಹಲ್ಲೆ ನಡೆಸಿದ ಗ್ರಾಮಸ್ಥರ ವಿರುದ್ಧ ಮುಸ್ಲಿಂ ಯುವಕ ದೂರು ದಾಖಲಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯರ ವಿರುದ್ಧ ಐಪಿಸಿ ಸೆಕ್ಷನ್ 341, 323, 505(2), ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ಕರ್ನಾಟದ ರಾಯಚೂರಿನಲ್ಲಿ ಇಂಥಹದ್ದೇ ಘಟನೆ
ರಾಮ ಮಂದಿರ ಬಗ್ಗೆ ಅವಹೇಳನ ಸ್ಟೇಟಸ್ ಹಾಕಿಕೊಂಡ ಯುವಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ರೊಚ್ಚಿಗೆದ್ದ ಹಿಂದೂ ಕಾರ್ಯಕರ್ತರಿಂದ ಪೊಲೀಸ್ ಠಾಣೆ ಮುಂದೆ ಭಜನೆ ಮಾಡಿದ ಘಟನೆ ಬುಧವಾರ ಕರ್ನಾಟಕದ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕು ಗಬ್ಬೂರಿನಲ್ಲಿ ನಡೆದಿದೆ.

ದೇವದುರ್ಗ ತಾಲೂಕಿನ ಮಸರಕಲ್ ಗ್ರಾಮದ ಯುವಕ ಸೈಯದ್ ಇಸಾರ್ ನಿಂದ ಈ ಕೃತ್ಯ ನಡೆದಿದೆ. ಈತ ರಾಮ ಮಂದಿರ ಮೇಲೆ ಪವರ್ ಆಫ್ ಇಸ್ಲಾಂ ಎಂದು ಬರಹವನ್ನು ಎಡಿಟ್ ಮಾಡಿದ್ದಾನೆ. ಬಳಿಕ ವಾಟ್ಸಾಪ್, ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ವೀಡಿಯೋ ಹರಿಬಿಟ್ಟಿದ್ದಾನೆ. ವಿಡಿಯೋ ವೈರಲ್ ಆದ ನಂತರ ಸ್ಟೇಟಸ್ ಡಿಲೀಟ್ ಮಾಡಿದ್ದಾನೆ. ಕೆರಳಿದ ಹಿಂದೂ ಕಾರ್ಯಕರ್ತರು ಗಬ್ಬೂರು ಠಾಣೆ ಮುಂದೆ ಭಜನೆ ಮಾಡಿ ಆಕ್ರೋಶಗೊಂಡರು.
ಅಯೋಧ್ಯದಲ್ಲಿ ರಾಮಮಂದಿರ ಉದ್ಘಾಟನೆಯೊಂದಿದೆ. ಸೈಯದ್ ಇಸಾರ್ ಎಂಬ ಮುಸ್ಲಿಂ ಯುವಕ ಲೋಕಾರ್ಪಣೆಯಾದ ರಾಮಮಂದಿರ ಮೇಲೆ ಪಾಕಿಸ್ತಾನ ಧ್ವಜ ಹಾರಾಡುವ ಸ್ಟೇಟಸ್ ಹಾಕಿಕೊಂಡಿದ್ದಾನೆ. ಪಾಕಿಸ್ತಾನ ಧ್ವಜ ಎಡಿಟ್ ಮಾಡಿ ಸ್ಟೇಟಸ್ ಹಾಕಿ ಕೋಮುಸೌಹಾರ್ದತೆ ಕದಡುವ ಯತ್ನ ಮಾಡಿದ್ದಾನೆ. ಈತನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಪೊಲೀಸ್ ಠಾಣೆಯ ಮುಂದೆ ಹಿಂದೂ ಕಾರ್ಯಕರ್ತರು ಭಜನೆ ಮಾಡಿದರು.
ಪರಸ್ಥಿತಿ ಗಂಭೀರತೆ ಪಡೆಯುತ್ತಿದ್ದಂತೆ ಯುವಕ ಸೈಯದ್ ಇಸಾರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications