ಮೇ ಮಧ್ಯದಲ್ಲಿ ಗರಿಷ್ಠ ಮಟ್ಟ ಮುಟ್ಟಲಿದೆ ಕೊರೊನಾ; ಎಷ್ಟು ಪ್ರಕರಣ ದಾಖಲಾಗಬಹುದು?
ನವದೆಹಲಿ, ಏಪ್ರಿಲ್ 27: ದೇಶದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟ ಮೇ ಮಧ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ಮೇ 4ರಿಂದ 8ರವರೆಗೆ ದಿನನಿತ್ಯದ ಪ್ರಕರಣಗಳು ನಾಲ್ಕು ಲಕ್ಷದವರೆಗೂ ದಾಖಲಾಗುತ್ತವೆ ಎಂದು ಐಐಟಿ ವಿಜ್ಞಾನಿಗಳು ಅಂದಾಜು ಮಾಡಿದ್ದಾರೆ.
ಕಾನ್ಪುರ ಹಾಗೂ ಹೈದರಾಬಾದ್ನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿಜ್ಞಾನಿಗಳು "ಸೂತ್ರ" (SUTRA)- suspectible, undetected, tested and removed approach ಮಾದರಿ ಮೂಲಕ ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಕುರಿತು ಅಂದಾಜು ಮಾಡಿದ್ದಾರೆ. ಅವರ ಈ ಅಂದಾಜಿನ ಪ್ರಕಾರ ಭಾರತದಲ್ಲಿ ಮೇ ಮಧ್ಯ ಭಾಗದ ಹೊತ್ತಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 10 ಲಕ್ಷ ಮೀರಲಿದೆ. ಮುಂದೆ ಓದಿ...

ಮೇ ಮಧ್ಯ ಭಾಗದಲ್ಲಿ ಗರಿಷ್ಠ ಪ್ರಕರಣ ದಾಖಲು
ಮೇ ಮಧ್ಯಭಾಗದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗರಿಷ್ಠ ಮಟ್ಟ ತಲುಪಬಹುದು. ಈ ಸಮಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 38-48 ಲಕ್ಷ ಆಗಬಹುದು. ದಿನನಿತ್ಯದ ಕೊರೊನಾ ಪ್ರಕರಣಗಳ ಸಂಖ್ಯೆ ನಾಲ್ಕು ಲಕ್ಷವನ್ನು ಮೀರಬಹುದು ಎಂದು ವಿಜ್ಞಾನಿಗಳು ಅಂದಾಜು ಮಾಡಿದ್ದಾರೆ. ಈ ಅವಧಿ ಮುಗಿದ ನಂತರ ಕೊರೊನಾ ಪ್ರಕರಣಗಳು ಕ್ರಮೇಣ ಇಳಿಕೆಯಾಗುತ್ತವೆ ಎಂದು ತಿಳಿಸಿದ್ದಾರೆ.

ವರದಿ ಪರಿಷ್ಕೃತಗೊಳಿಸಿದ ವಿಜ್ಞಾನಿಗಳು
ಕಳೆದ ವಾರ ಐಐಟಿ ವಿಜ್ಞಾನಿಗಳು ವರದಿಯೊಂದನ್ನು ಸಿದ್ಧಪಡಿಸಿ ಮೇ 11ರಿಂದ 15ರವರೆಗೆ ಅತಿ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತವೆ. ಈ ಅವಧಿಯಲ್ಲಿ 33ರಿಂದ 35 ಲಕ್ಷದವೆಗೂ ಸಕ್ರಿಯ ಪ್ರಕರಣಗಳು ದಾಖಲಾಗಿ, ಮೇ ಅಂತ್ಯಕ್ಕೆ ಇಳಿಮುಖವಾಗುತ್ತವೆ ಎಂದು ಹೇಳಿದ್ದರು. ಇದೀಗ ಆ ವರದಿಯನ್ನು ಪರಿಷ್ಕೃತಗೊಳಿಸಿದ್ದಾರೆ. ಮೇ4ರಿಂದಲೇ ಹೆಚ್ಚಿನ ಮಟ್ಟದಲ್ಲಿ ಪ್ರಕರಣಗಳು ದಾಖಲಾಗುವುದು ಗೋಚರಿಸುತ್ತದೆ ಎಂದಿದ್ದಾರೆ.

ಮೇ 14-18 ಸಕ್ರಿಯ ಪ್ರಕರಣಗಳಲ್ಲಿ ಏರಿಕೆ
ಮೇ 14-18 ಸಕ್ರಿಯ ಪ್ರಕರಣಗಳು ಹೆಚ್ಚಾಗುವ ಅವಧಿಯಾಗುತ್ತದೆ. ಮೇ 4ರಿಂದ 8 ಹೊಸ ಪ್ರಕರಣಗಳು ಅತಿ ಹೆಚ್ಚಿನ ಮಟ್ಟದಲ್ಲಿ ದಾಖಲಾಗುವ ಸಮಯ. ದಿನನಿತ್ಯದ ಪ್ರಕರಣಗಳಲ್ಲಿ ಏರಿಕೆ ಕಂಡು ಹತ್ತು ದಿನದಲ್ಲಿ ಸಕ್ರಿಯ ಪ್ರಕರಣಗಳು ಗರಿಷ್ಠ ಮಟ್ಟಕ್ಕೆ ಮುಟ್ಟುತ್ತವೆ ಎಂದಿದ್ದಾರೆ. ಮೂರು ಮುಖ್ಯ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸೂತ್ರ ಮಾದರಿ ಸಿದ್ಧಪಡಿಸಲಾಗಿದೆ. ಸೋಂಕಿತರ ಸಂಪರ್ಕಿಸಿದವರ ಪ್ರಮಾಣ, ಜನರು ಸೋಂಕಿಗೆ ತೆರೆದುಕೊಂಡಿರುವ ಪ್ರಮಾಣ ಹಾಗೂ ಸದ್ಯದ ಕೊರೊನಾ ಅಂಕಿ ಸಂಖ್ಯೆಗಳ ಆಧಾರದಲ್ಲಿ ಸೋಂಕು ಯಾವಾಗ ಗರಿಷ್ಠ ಮಟ್ಟ ತಲುಪುತ್ತದೆ ಎಂದು ಅಂದಾಜಿಸಿರುವುದಾಗಿ ಕಾನ್ಪುರದ ಐಐಟಿ ಪ್ರಾಧ್ಯಾಪಕ ಮನಿಂದರ್ ಅಗರ್ ವಾಲ್ ತಿಳಿಸಿದ್ದಾರೆ.

ಭಾರತದಲ್ಲಿ ಮೂರೂವರೆ ಲಕ್ಷ ಮೀರಿದ ಕೊರೊನಾ ಪ್ರಕರಣ
ಭಾರತದಲ್ಲಿ ಸೋಮವಾರ 3,52,991 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಒಂದೇ ದಿನ 2812 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 2,19,272 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ದಾಖಲಾದ ಈ ಪ್ರಕರಣಗಳೊಂದಿಗೆ ದೇಶದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,73,13,163ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 28,13,658 ಆಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications