ಜುಲೈನಲ್ಲಿ ಬಹುಕಾಲದ ಗೆಳೆಯನನ್ನು ಮದುವೆಯಾಗಲಿದ್ದಾರೆ ಶರ್ಮಿಳಾ
ಹೋರಾಟಗಾರ್ತಿ, ಮಣಿಪುರದ ಇರೋಮ್ ಶರ್ಮಿಳಾ ತಮ್ಮ ಬಹುಕಾಲದ ಗೆಳೆಯ, ಬ್ರಿಟಿಷ್ ಮೂಲದ ಡೆಸ್ಮಂಡ್ ಕುಠಿನೋ ಅವರನ್ನು ಜುಲೈನಲ್ಲಿ, ತಮಿಳುನಾಡಿನಲ್ಲಿ ಮದುವೆಯಾಗಲಿದ್ದಾರೆ. ಈ ಬಗ್ಗೆ ಅವರ ಕುಟುಂಬದವರಿಗೇ ಇನ್ನೂ ವಿಷಯ ತಿಳಿಸಿಲ್ಲವಂತೆ
ಇಂಫಾಲ್, ಮೇ 8: ಹೋರಾಟಗಾರ್ತಿ ಇರೋಮ್ ಶರ್ಮಿಳಾ ಚಾನು ತಮ್ಮ ಬಹುಕಾಲದ ಗೆಳೆಯ ಬ್ರಿಟಿಷ್ ಮೂಲದ ಡೆಸ್ಮಂಡ್ ಕುಟಿನ್ಹೋ ಅವರನ್ನು ಜುಲೈನಲ್ಲಿ ಮದುವೆಯಾಗಲಿದ್ದಾರೆ. "ನಾವು ಮದುವೆ ದಿನವನ್ನು ನಿಗದಿ ಮಾಡಿಕೊಂಡಿಲ್ಲ. ಆದರೆ ಜುಲೈ ಕೊನೆಯಲ್ಲಿ, ತಮಿಳುನಾಡಿನಲ್ಲಿ ಅಂತ ಅಂದುಕೊಂಡಿದ್ದೀವಿ" ಎಂದು ಶರ್ಮಿಳಾ ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.
ಮಣಿಪುರದಲ್ಲಿ ಜಾರಿಯಲ್ಲಿರುವ ವಿವಾದಿತ ಕಾಯ್ದೆ ವಿರುದ್ಧ ಹದಿನಾರು ವರ್ಷಗಳ ಉಪವಾಸ ಸತ್ಯಾಗ್ರಹ ನಡೆಸಿದ ನಂತರ ಇರೋಮ್ ಶರ್ಮಿಳಾ ಪೀಪಲ್ಸ್ ರಿಸರ್ಜೆನ್ಸ್ ಅಂಡ್ ಜಸ್ಟೀಸ್ ಅಲಯನ್ಸ್ ಎಂಬ ಪಕ್ಷವನ್ನು ಸ್ಥಾಪಿಸಿದ್ದರು. ಆ ನಂತರ ಮಣಿಪುರ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿಯಾಗಿದ್ದ ಒಕ್ರಾಂ ಇಬೋಬಿ ಸಿಂಗ್ ವಿರುದ್ಧ ತೌಬಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ತೊಂಬತ್ತು ಚಿಲ್ಲರೆ ಮತಗಳನ್ನು ಪಡೆಯಲಷ್ಟೇ ಸಾಧ್ಯವಾಯಿತು.[ಕೇವಲ 90 ವೋಟು ಪಡೆದ ಶರ್ಮಿಳಾ ರಾಜಕೀಯಕ್ಕೆ ಗುಡ್ ಬೈ]

ಹೀನಾಯ ಸೋಲಿನ ನಂತರ ಸ್ವಲ್ಪ ಸಮಯ ಬಿಡುವು ತೆಗೆದುಕೊಂಡ ಅವರು, ದಕ್ಷಿಣ ಭಾರತ ರಾಜ್ಯಗಳ ಪ್ರವಾಸದಲ್ಲಿದ್ದಾರೆ. "ನಾನು ನಾಗರಿಕ ಹೋರಾಟಗಾರ್ತಿಯಾಗಿ ಮುಂದುವರಿಯುತ್ತೇನೆ. ಆದರೆ ರಾಜಕಾರಣಿಯಾಗಿ ಅಲ್ಲ. ಮುಂದೆ ಚುನಾವಣೆಗಳಿಗೆ ಸ್ಪರ್ಧಿಸಬಾರದು ಎಂದು ನಿರ್ಧರಿಸಿದ್ದೇನೆ. ನನ್ನ ಮದುವೆ ನಂತರ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮೇಲೆ ಒತ್ತಡ ಹಾಕಿಸುತ್ತೇನೆ.[ಹಣ, ತೋಳ್ಬಲ ಬಹಿರಂಗವಾಗಿಯೇ ಬಳಕೆ: ಇರೋಮ್ ಶರ್ಮಿಳಾ]
"ವಿವಾದಿತ ಕಾನೂನನ್ನು ಸರಕಾರ ಹಿಂಪಡೆಯುವುದಕ್ಕೆ ಒತ್ತಡ ಹಾಕಿಸುತ್ತೇನೆ" ಎಂದು ಅವರು ಹೇಳಿದ್ದಾರೆ. ಆಕೆ ಮದುವೆಯಾಗುತ್ತಿರುವ ಡೆಸ್ಮಂಡ್ ಕುಟುಂಬದವರು ಮೂಲತಃ ಗೋವಾದವರು. ತಾಂಜೇನಿಯಾದಲ್ಲಿ ಜನಿಸಿದ ಅವರು, ಆ ನಂತರ ಬ್ರಿಟಿಷ್ ನಾಗರಿಕರಾದರು. ಈವರೆಗೆ ನನ್ನ ಕುಟುಂಬಕ್ಕೆ ಈ ವಿಷಯ ತಿಳಿಸಿಲ್ಲ. ಅದರಲ್ಲೂ ನನ್ನ ತಾಯಿಗೆ ತಿಳಿಸಿಲ್ಲ. ಸದ್ಯದಲ್ಲೇ ಆವರಿಗೆ ತಿಳಿಸ್ತೀನಿ" ಎಂದು ಶರ್ಮಿಳಾ ಹೇಳಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications