ಐಪಿಎಲ್ ಬೆಟ್ಟಿಂಗ್ ಮಾಡಿದ್ದು ನಿಜ: ತಪ್ಪೊಪ್ಪಿಕೊಂಡ ಅರ್ಬಾಜ್ ಖಾನ್
ಮುಂಬೈ, ಜೂನ್ 02: ಐಪಿಎಲ್ ಬೆಟ್ಟಿಂಗ್ನಲ್ಲಿ ಭಾಗಿಯಾಗಿದ್ದು ನಿಜ ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಸಹೋದರ, ನಟ ನಿರ್ಮಾಪಕ ಅರ್ಬಾಜ್ ಖಾನ್ ತಪ್ಪೊಪ್ಪಿಕೊಂಡಿದ್ದಾರೆ.
ಐಪಿಎಲ್ ಬೆಟ್ಟಿಂಗ್ ಆರೋಪದಡಿ ಥಾಣೆ ಪೊಲೀಸರಿಂದ ಸಮನ್ಸ್ ಬಂದ ಹಿನ್ನೆಲೆಯಲ್ಲಿ ಇಂದು ಪೊಲೀಸ್ ಠಾಣೆಗೆ ಬಂದು ಅರ್ಬಾಜ್ ಖಾನ್ ಅವರು ಹೇಳಿಕೆ ದಾಖಲಿಸಿದ್ದು, ಐಪಿಎಲ್ ಬೆಟ್ಟಿಂಗ್ನಲ್ಲಿ ಭಾಗಿ ಆಗಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ.
ಪೊಲೀಸರ ವಿಚಾರಣೆ ವೇಳೆ ಐದು ವರ್ಷದಿಂದಲೂ ಬೆಟ್ಟಿಂಗ್ ಆಡುತ್ತಿದ್ದಾಗಿ ಹೇಳಿರುವ ಅರ್ಬಾಜ್ ಖಾನ್, ಬುಕ್ಕಿ ಸೋನು ಜುಲನ್ ಜೊತೆಗೂ ಬಹಳ ವರ್ಷದಿಂದ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ.

ಬೆಟ್ಟಿಂಗ್ಗೆ ಮನೆಯರ ವಿರೋಧವಿತ್ತು ಆದರೂ ಬೆಟ್ಟಿಂಗ್ ಆಡುತ್ತಿದ್ದಾಗಿ ಹೇಳಿರುವ ಅರ್ಬಾಜ್ ಖಾನ್, ಐಪಿಎಲ್ ಸೇರಿದಂತೆ ಹಲವು ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ಮಾಡಿದ್ದಾಗಿ ಹೇಳಿಕೆ ದಾಖಲಿಸಿದ್ದಾರೆ.
ಬೆಟ್ಟಿಂಗ್ನಿಂದಾಗಿ ಸುಮಾರಿ ಮೂರು ಕೋಟಿ ರೂಪಾಯಿ ಕಳೆದುಕೊಂಡಿದ್ದಾಗಿಯೂ ಹೇಳಿರುವ ಅರ್ಬಾಜ್ ಖಾನ್ ಅವರು, ಇದೇ ಕಾರಣಕ್ಕೆ ಬುಕ್ಕಿ ಸೋನು ಜಲಾನ್ ತನ್ನನ್ನು ಬೆದರಿಸುತ್ತಿದ್ದಾಗಿಯೂ ಪೊಲೀಸರ ಮುಂದೆ ಹೇಳಿದ್ದಾರೆ.
ಐಪಿಎಲ್ ಬೆಟ್ಟಿಂಗ್: ಸಲ್ಮಾನ್ ಸೋದರ ಅರ್ಬಾಜ್ ಗೆ ಪೊಲೀಸರಿಂದ ಸಮನ್ಸ್
ಥಾಣೆ ಪೊಲೀಸರು ಅರ್ಬಾಜ್ ಖಾನ್ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದು, ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.
ಮೇ 16ರಂದು ಥಾಣೆ ಕ್ರೈಂ ಬ್ರಾಂಚ್ ಪೊಲೀಸರು ಹೊಟೆಲ್ ಒಂದರ ಮೇಲೆ ದಾಳಿ ನಡೆಸಿ ಬುಕ್ಕಿಗಳನ್ನು ಬಂಧಿಸಿದ್ದರು ಅದರಲ್ಲಿ ಸೋನು ಜಲಾನ್ ಕೂಡ ಒಬ್ಬನಾಗಿದ್ದ. ಆತನೇ ಅರ್ಬಾಜ್ ಖಾನ್ ಬಗ್ಗೆ ಮಾಹಿತಿ ನೀಡಿದ್ದ.
ಬಂಧಿತ ಸೋನು ಜಲಾನ್, ದಾವೂದ್ ಗ್ಯಾಂಗ್ನ ಅನಿಲ್ ತುಂಡಾ, ರಯೀಸ್ ಫರೂಕಿ ಅವರುಗಳೊಂದಿಗೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಸೋನು ಜಲಾನ್ನೊಂದಿಗೆ ಅರ್ಬಾಜ್ ಖಾನ್ ಇರುವ ಚಿತ್ರಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications