ಟೈಮ್ಸ್ ಆಫ್ ಇಂಡಿಯಾ ವಿರುದ್ಧ ತಿರುಗಿ ಬಿದ್ದ ಮಲ್ಲು ಸ್ಟಾರ್
ಕೊಚ್ಚಿ, ಜ.5: ಜನಪ್ರಿಯ ದಿನ ಪತ್ರಿಕೆ ಟೈಮ್ಸ್ ಆಫ್ ಇಂಡಿಯಾ ವಿರುದ್ಧ ಕೇರಳದ ಸೂಪರ್ ಸ್ಟಾರ್ ದಿಲೀಪ್ ತಿರುಗಿ ಬಿದ್ದಿದ್ದಾರೆ. ದಿನಪತ್ರಿಕೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದು, 50 ಕೋಟಿ ಪರಿಹಾರ ಕೇಳಿದ್ದಾರೆ.
'ಕೊಚ್ಚಿನ್ ಮಹಾರಾಜರ ಸ್ವತ್ತನ್ನು ನಟ ದಿಲೀಪ್ ಕಬಳಿಸಿದ್ದಾರೆ' ಎಂದು ಜನವರಿ 1 ರಂದು ಟೈಮ್ಸ್ ಆಫ್ ಇಂಡಿಯಾದ ಕೇರಳ ಅವೃತ್ತಿಯಲ್ಲಿ ಪ್ರಕಟಿಸಲಾಗಿತ್ತು. ಈ ಬಗ್ಗೆ ದಿಲೀಪ್ ಸ್ಪಷ್ಟನೆ ನೀಡಿದರೂ ದಿನಪತ್ರಿಕೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಬೇಸತ್ತ ನಟ ದಿಲೀಪ್ ಅವರು ಸುಳ್ಳು ಸುದ್ದಿ ಪ್ರಕಟಿಸಿ ಮಾನ ಹರಾಜು ಹಾಕುತ್ತಿರುವ ದಿನಪತ್ರಿಕೆಯ ಕ್ರಮವನ್ನು ಖಂಡಿಸಿ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ.

2006ರಲ್ಲಿ ಅಗಸ್ಟಿನ್ ಪಾಲ್ ಹಾಗೂ ಶಾಬಿ ಎಂಬುವರಿಂದ ಶೇ92.9 ರಷ್ಟು ಭಾಗದ ಸ್ವತ್ತನ್ನು ಪಡೆದುಕೊಂಡಿರುವ ಬಗ್ಗೆ ದಿಲೀಪ್ ದಾಖಲೆ ಒದಗಿಸಿದ್ದಾರೆ. ತ್ರಿಸ್ಸೂರು ಜಿಲ್ಲಾಧಿಕಾರಿಗಳಿಗೆ 2013ರಲ್ಲೇ ಈ ಬಗ್ಗೆ ದಾಖಲೆ ಒದಗಿಸಿರುವುದಾಗಿ ದಿಲೀಪ್ ಹೇಳಿದ್ದಾರೆ. ಈ ಸ್ವತ್ತಿನಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಅನುಮತಿಯನ್ನು ಪಡೆದುಕೊಂಡಿದ್ದಾರೆ.
ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗೆ ಕಳಿಸಿರುವ ನೋಟಿಸ್ ಗೆ ಉತ್ತರಿಸಲು 10 ದಿನಗಳ ಕಾಲಾವಕಾಶವಿದೆ. ಇಲ್ಲದಿದ್ದರೆ ಕಾನೂನು ರೀತಿ ಹೋರಾಟ ಮುಂದುವರೆಸುವುದಾಗಿ ದಿಲೀಪ್ ಹೇಳಿದ್ದಾರೆ. ದಿನಪತ್ರಿಕೆಯ ವರದಿಯಿಂದ ನನ್ನ ಕಕ್ಷಿದಾರ ದಿಲೀಪ್ ಅವರ ಮಾನನಷ್ಟವಾಗಿದೆ. ವ್ಯವಹಾರಗಳು ಕುಂಠಿತವಾಗಿವೆ ಎಂದು ಕೇರಳ ಹೈಕೋರ್ಟಿನ ಹಿರಿಯ ವಕೀಲ ಕೆ ರಾಮ್ ಕುಮಾರ್ ಹೇಳಿದ್ದಾರೆ. (ಫಿಲ್ಮಿಬೀಟ್)
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications