ಶನಿವಾರ ಭಾರತ್ ಜೋಡೋ ಯಾತ್ರೆಯಲ್ಲಿ ಕಮಲ್ ಹಾಸನ್, ಸ್ವಾತಂತ್ರ್ಯ ಹೋರಾಟಗಾರ ಕುಟುಂಬಗಳ ಭಾಗಿ ಸಾಧ್ಯತೆ
ನವದೆಹಲಿ, ಡಿ. 23: ನಟ, ರಾಜಕಾರಣಿ ಕಮಲ್ ಹಾಸನ್, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸದಸ್ಯರು ಮತ್ತು ಕಾಂಗ್ರೆಸ್ ಹಿರಿಯ ನಾಯಕರು ಶನಿವಾರ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ
ಶನಿವಾರ ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆಯು ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರವೇಶಿಸಲಿದ್ದು, ಕಮಲ್ ಹಾಸನ್ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
"ಹಿರಿಯ ಕಾಂಗ್ರೆಸ್ ನಾಯಕರು ಮತ್ತು ಸಂಸದರು, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳು ಮತ್ತು ಮಕ್ಕಳ್ ನೀಧಿ ಮೈಯಂ (ಎಂಕೆಎಂ) ಅಧ್ಯಕ್ಷ ಕಮಲ್ ಹಾಸನ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ" ಎಂದು ಕಾಂಗ್ರೆಸ್ ಪಕ್ಷದ ಮೂಲವೊಂದು ಶುಕ್ರವಾರ ಪಿಟಿಐಗೆ ತಿಳಿಸಿದೆ.

ಕಳೆದ ವಾರ ಎಂಕೆಎಂ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಕಮಲ್ ಹಾಸನ್, ರಾಹುಲ್ ಗಾಂಧಿಯವರು ತಮ್ಮನ್ನು ಭಾರತ್ ಜೋಡೋ ಯಾತ್ರೆಗೆ ಆಹ್ವಾನಿಸಿದ್ದಾರೆ. ಹೀಗಾಗಿ ಡಿಸೆಂಬರ್ 24 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವುದಾಗಿ ಹೇಳಿದ್ದರು.
ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಯಾತ್ರೆಯಲ್ಲಿ ಕನಿಷ್ಠ 40,000 ರಿಂದ 50,000 ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಚೌಧರಿ ಹೇಳಿದ್ದಾರೆ.
"ಬೆಳಗ್ಗೆ 6 ಗಂಟೆಗೆ ಬಾದರ್ಪುರ ಗಡಿಯನ್ನು ಪ್ರವೇಶಿಸುವ ಯಾತ್ರೆಯಲ್ಲಿ ವಿವಿಧ ಕ್ಷೇತ್ರಗಳ ಜನರು ಸೇರಲಿದ್ದಾರೆ. ನಾವು ನಂತರ ಅಪೋಲೋ ಆಸ್ಪತ್ರೆಯ ಮೂಲಕ ಆಶ್ರಮದ ಕಡೆಗೆ ತೆರಳಿ ವಿಶ್ರಾಂತಿ ಪಡೆಯುತ್ತೇವೆ. ಆಶ್ರಮದಿಂದ ಮಧ್ಯಾಹ್ನ 1 ಗಂಟೆಗೆ ನಮ್ಮ ಯಾತ್ರೆಯನ್ನು ಪುನರಾರಂಭಿಸುತ್ತೇವೆ" ಎಂದು ಅನಿಲ್ ಚೌಧರಿ ತಿಳಿಸಿದ್ದಾರೆ.

ಆಶ್ರಮದಿಂದ ಮಥುರಾ ರಸ್ತೆ - ಜಾಕಿರ್ ಹುಸೇನ್ ಮಾರ್ಗ - ಇಂಡಿಯಾ ಗೇಟ್ - ತಿಲಕ್ ಮಾರ್ಗ - ಐಟಿಒ - ಬಹದ್ದೂರ್ ಷಾ ಜಾಫರ್ ಮಾರ್ಗ - ನೇತಾಜಿ ಸುಭಾಷ್ ಮಾರ್ಗ ಮತ್ತು ಅನಗ್ಪಾಲ್ ಥಾಮಸ್ ವೃತ್ತಗಳ ಮೂಲಕ ಪಾದಯಾತ್ರೆ ಸಾಗಲಿದೆ.
ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಲ್ಲಿ ಆರಂಭವಾದ ಯಾತ್ರೆಯು ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳ ಮೂಲಕ ಹರಿಯಾಣ ತಲುಪಿದ್ದು, ಶನಿವಾರ ದೆಹಲಿ ತಲುಪಲಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications