Tirupathi Laddu: ತಿರುಪತಿ ಲಾಡು ಬಗ್ಗೆ ಹೇಳಿಕೆ; ಕ್ಷಮೆ ಕೇಳಿದ ನಟ ಕಾರ್ತಿಗೆ ಪವನ್ ಕಲ್ಯಾಣ್ ಹೇಳಿದ್ದೇನು?
ತಿರುಪತಿ ಲಾಡು ಬಗ್ಗೆ ನಟ ಕಾರ್ತಿ ಆಡಿದ್ದ ಮಾತುಗಳು ವಿವಾದಕ್ಕೆ ಕಾರಣವಾದ ಬಳಿಕ, ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಎಚ್ಚರಿಕೆ ಕೊಟ್ಟಿದ್ದರು. ಬಳಿಕ ತಮ್ಮ ಮಾತುಗಳಿಗೆ ವಿಷಾದ ವ್ಯಕ್ತಪಡಿಸಿರುವ ನಟ ಕಾರ್ತಿ ಕ್ಷಮೆ ಕೇಳಿದ್ದಾರೆ. ಕಾರ್ತಿ ಮಾತ್ರವಲ್ಲದೆ ಅವರ ಸಹೋದರ ನಟ ಸೂರ್ಯ ಕೂಡ ವಿಷಾದ ವ್ಯಕ್ತಪಡಿಸಿದ್ದಾರೆ. ಕಾರ್ತಿ ಕ್ಷಮೆ ಕೇಳಿದ ಬಳಿಕ ಪವನ್ ಕಲ್ಯಾಣ್ ಪ್ರತಿಕ್ರಿಯೆ ನೀಡಿದ್ದು ಬುದ್ದಿವಾದ ಹೇಳಿದ್ದಾರೆ.
ಕಾರ್ತಿ ನಟಿಸಿರುವ ತಮಿಳು ಸಿನಿಮಾ 'ವೆಯಿಳಾಗನ್' ಸೆಪ್ಟೆಂಬರ್ 27ರಂದು ಬಿಡುಗಡೆಯಾಗಲಿದೆ. ತೆಲುಗಿನಲ್ಲಿ 'ಸತ್ಯಂ-ಸುಂದರಂ' ಹೆಸರಿನಲ್ಲಿ ಡಬ್ ಆಗಿದ್ದು ಬಿಡುಗಡೆಯಾಗಲಿದೆ. ಸಿನಿಮಾ ಪ್ರಚಾರಕ್ಕಾಗಿ ಹೈದರಾಬಾದ್ಗೆ ಬಂದಿದ್ದ ಕಾರ್ತಿ ಕಾರ್ಯಕ್ರಮದ ವೇಳೆ 'ಲಾಡು' ಹೇಳಿಕೆಯಿಂದ ಎಡವಟ್ಟು ಮಾಡಿಕೊಂಡಿದ್ದಾರೆ.

ಕಾರ್ಯಕ್ರಮದ ನಿರೂಪಕಿ ಲಾಡು ಬೇಕಾ? ಎಂದು ತಮಾಷೆಯಾಗಿ ಕೇಳಿದ್ದಾರೆ, ಇದಕ್ಕೆ ಪ್ರತಿಕ್ರಿಯೆ ನೀಡಿ ಕಾರ್ತಿ 'ಲಾಡು ವಿಚಾರ ಈಗ ಬೇಡ, ಅದು ತುಂಬಾ ಸೂಕ್ಷ್ಮ ವಿಚಾರವಾಗಿದೆ, ಈಗ ಲಾಡು ಬೇಡ' ಎಂದು ನಗುತ್ತಾ ಪ್ರತಿಕ್ರಿಯೆ ನೀಡಿದ್ದಾರೆ. ಇದಕ್ಕೆ ನಿರೂಪಕಿ 'ನಿಮಗಾಗಿ ಮೋತಿಚೂರ್ ಲಾಡು ತರಿಸಿಕೊಡುತ್ತೇವೆ' ಎಂದು ಕೇಳಿದರು, ಆಗ ಕಾರ್ತಿ ಈಗ ಲಾಡು ಬೇಡ ಎಂದು ಹೇಳಿದರು.
ಪವನ್ ಕಲ್ಯಾಣ್ ಆಕ್ಷೇಪ
ಕಾರ್ತಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಡಿಸಿಎಂ ಪವನ್ ಕಲ್ಯಾಣ್, ಸಿನಿಮಾ ಮಂದಿಗೆ ಎಚ್ಚರಿಕೆ ನೀಡುತ್ತಿದ್ದೇನೆ, ಲಾಡು ಬಗ್ಗೆ ಮಾತನಾಡುವುದಾದರೆ ಗಂಭೀರವಾಗಿ ಮಾತನಾಡಿ, ಇಲ್ಲ ಸುಮ್ಮನಿದ್ದುಬಿಡಿ, ಇದು ಸೂಕ್ಷ್ಮವಾದ ವಿಷಯ, ನಟರಾಗಿ ನಾನು ನಿಮ್ಮನ್ನು ಗೌರವಿಸುತ್ತೇನೆ, ಆದರೆ ಸನಾತನ ಧರ್ಮದ ವಿಚಾರ ಬಂದಾಗ ಮಾತನಾಡುವ ಮುನ್ನ ಸಾವಿರ ಬಾರಿ ಯೋಚಿಸಿ ಎಂದಿದ್ದರು.
ಇದಕ್ಕೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾರ್ತಿ, "ತುಂಬಾ ಗೌರವದೊಂದಿಗೆ, ನನ್ನಿಂದ ಆಗಿರುವ ಯಾವುದೇ ಉದ್ದೇಶಪೂರ್ವ ತಪ್ಪು ಗ್ರಹಿಕೆಗೆ ಕ್ಷಮೆ ಯಾಚಿಸುತ್ತೇನೆ. ನಾನು ಕೂಡ ವೆಂಕಟೇಶ್ವರನ ಭಕ್ತನಾಗಿದ್ದೇನೆ. ನಾನು ಯಾವಾಗಲೂ ನಮ್ಮ ಸಂಪ್ರದಾಯಗಳನ್ನು ಗೌರವಿಸುತ್ತೇನೆ" ಎಂದಿದ್ದಾರೆ.
ಕಾರ್ತಿ ಕ್ಷಮೆ ಕೇಳಿದ ಬಳಿಕ ಪವನ್ ಕಲ್ಯಾಣ್ ಪ್ರತಿಕ್ರಿಯೆ ನೀಡಿದ್ದು, ನಿಮ್ಮ ವರ್ತನೆ ಮತ್ತು ಪ್ರತಿಕ್ರಿಯೆಯನ್ನು ನಾನು ಪ್ರಶಂಸಿಸುತ್ತೇನೆ. ನಮ್ಮ ಸಂಪ್ರದಾಯಗಳ ಬಗ್ಗೆ ನೀವು ತೋರಿಸಿದ ಗೌರವವನ್ನು ಪ್ರಾಮಾಣಿಕವಾಗಿ ಪ್ರಶಂಸಿಸುತ್ತೇನೆ. ತಿರುಪತಿ ಮತ್ತು ಪೂಜ್ಯವಾದ ಲಾಡುಗಳಂತಹ ವಿಚಾರಗಳು ಲಕ್ಷಾಂತರ ಭಕ್ತರಿಗೆ ಭಾವನಾತ್ಮಕ ವಿಚಾರವಾಗಿದ್ದು, ಅಂತಹ ವಿಷಯಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವುದು ಅಗತ್ಯ ಎಂದಿದ್ದಾರೆ.
ಉದ್ದೇಶಪೂರ್ವಕವಾಗಿ ನೀವು ಮಾತನಾಡಿಲ್ಲ ಎಂದು ನಾನು ಅರ್ಥ ಮಾಡಿಕೊಂಡಿದ್ದೇನೆ. ಸಾರ್ವಜನಿಕ ವ್ಯಕ್ತಿಗಳಾಗಿ ಏಕತೆ ಮತ್ತು ಗೌರವವ ಬೆಳೆಸುವುದು ನಮ್ಮ ಜವಾಬ್ದಾರಿಯಾಗಿದೆ. ನಮ್ಮ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಮೌಲ್ಯಗಳ ಬಗ್ಗೆ ಸಿನಿಮಾ ಮೂಲಕ ಸ್ಪೂರ್ತಿ ನೀಡುತ್ತಲೇ ಮೌಲ್ಯಗಳನ್ನು ಎತ್ತಿ ಹಿಡಿಯಲು ಶ್ರಮಿಸೋಣ ಎಂದು ಹೇಳಿದ್ದಾರೆ. ಕಾರ್ತಿ ಅವರ ಮುಂದಿನ ಸಿನಿಮಾ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications