Rishab Shetty wishes Modi: ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿಗೆ ಶುಭ ಕೋರಿದ ರಿಷಬ್ ಶೆಟ್ಟಿ!
ದೆಹಲಿ ಜೂನ್ 9: ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಸ್ಯಾಂಡಲ್ವುಡ್ ನಟ ರಿಷಬ್ ಶೆಟ್ಟಿ ಶುಭಾಶಯ ತಿಳಿಸಿದ್ದಾರೆ.
ದೆಹಲಿಯ ರಾಜಭವನದಲ್ಲಿಂದು ಸಂಜೆ 7.15ಕ್ಕೆ ನರೇಂದ್ರ ಮೋದಿ ಅವರಿಗೆ ಪಟ್ಟಾಭಿಷೇಕವಾಗಲಿದೆ. ಈ ಸಮಾರಂಭದಲ್ಲಿ ದೇಶ ವಿದೇಶದ ಗಣ್ಯರಿಗೆ ಆಹ್ವಾನಿಸಲಾಗಿದ್ದು, ಈಗಾಗಲೇ ಸಭೆಯಲ್ಲಿ ಆಹ್ವಾನಿತರು ಪಾಲ್ಗೊಂಡಿದ್ದಾರೆ.

ದೇಶದ ರಾಜಕೀಯ ಗಣ್ಯರು, ಸೆಲೆಬ್ರಿಟಿಗಳು ಹಾಗೂ ಉದ್ಯಮಿಗಳಿಗೂ ಈ ಸಮಾರಂಭಕ್ಕೆ ಆಹ್ವಾನಿಸಲಾಗಿದ್ದು, ಕಾಂತಾರ ಖ್ಯಾತಿಯ ನಟ ರಿಷಬ್ ಶೆಟ್ಟಿ ಮೋದಿ ಅವರಿಗೆ ವಿಶ್ ಮಾಡಿದ್ದಾರೆ.
ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು, ಕೌಶಲ್ಯ, ಅಭಿವೃದ್ಧಿ, ಶಿಕ್ಷಣ ಮತ್ತು ದೇಶದ ಸುರಕ್ಷತೆಯ ಕಡೆಗಿನ ನಿಮ್ಮ ಬದ್ಧತೆಗೆ ನಾವು ಧನ್ಯರು ಎಂದು ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಬರೆದಿದ್ದಾರೆ.
ಕಳೆದ ವರ್ಷ ಏರ್ ಇಂಡಿಯಾ ಶೋಗೆ ಆಗಮಿಸಿದ್ದ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸ್ಯಾಂಡಲ್ವುಡ್ ನಟರು ಮಾತನಾಡಿದ್ದರು. ಯಶ್, ರಿಷಬ್, ಹಾಗೂ ವಿಜಯ್ ಕಿರಂಗದೂರು, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಡಿಜಿಸಲ್ ಕ್ರಿಯೇಟರ್ ಶ್ರದ್ಧಾ ಜೈನ್ ಅವರನ್ನು ಭೇಟಿಯಾಗಿ ಕೆಲ ಕಾಲ ಮಾತನಾಡಿದ್ದರು. ಅಲ್ಲದೆ ಮಹಾ ನಾಯಕ ಮೋದಿ ಅವರನ್ನು ಭೇಟಿ ಮಾಡಿದ್ದ ನನ್ನ ಅದೃಷ್ಟ ಎಂದು ರಿಷಬ್ ಹೇಳಿಕೊಂಡಿದ್ದರು.
ಈಗ ಮೋದಿ ಅವರ ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಅವರಿಗೆ ಮನಪೂರ್ತಿಯಾಗಿ ರಿಷಬ್ ಶುಭಾಶಯಗಳನ್ನು ತಿಳಿಸಿದ್ದಾರೆ.

ಅಲ್ಲದೇ ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಮೋದಿ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. 'ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವುದು ಬಹಳ ದೊಡ್ಡ ಸಾಧನೆ. ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ' ಎಂದು ಹೇಳಿದರು.
Chennai, Tamil Nadu: Actor Rajinikanth leaves for Delhi to attend the swearing-in ceremony of PM-designate Narendra Modi.
— ANI (@ANI) June 9, 2024
He says, "Narendra Modi will be sworn in as PM consecutively for the third time. This is a very big achievement. My wishes to him. People have also elected a… pic.twitter.com/ENxlk3I440
ಜೊತೆಗೆ ಇಂದು ನಡೆಯುವ ಸಮಾರಂಭದಲ್ಲಿ ರಜನಿಕಾಂತ ಕೂಡ ಭಾಗಿಯಾಗಲಿದ್ದು, ಈ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ. 'ಇದೊಂದು ಐತಿಹಾಸಿಕ ಇವೆಂಟ್. ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಅವರು ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ. ಅವರಿಗೆ ನಾನು ಮತ್ತೊಮ್ಮೆ ಅಭಿನಂದಿಸುತ್ತೇನೆ' ಎಂದು ರಜನಿಕಾಂತ್ ಖುಷಿ ಹಂಚಿಕೊಂಡಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications