ಬಾಲಿವುಡ್ ನಟ ಸುನಿಲ್ ಶೆಟ್ಟಿಗೆ ಪಿತೃವಿಯೋಗ
ದೀರ್ಘಕಾಲದಿಂದ ವಯೋಸಹಜ ದೈಹಿಕ ಸಮಸ್ಯೆಗಳಿಂದ ನರಳುತ್ತಿದ್ದ ಸುನಿಲ್ ಶೆಟ್ಟಿ ತಂದೆ ವೀರಪ್ಪ ಶೆಟ್ಟಿ; ಮುಂಬೈನ ಬ್ರೀಜ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನ
ಮುಂಬೈ, ಮಾರ್ಚ್ 1: ಬಾಲಿವುಡ್ ನಟ ಸುನಿಲ್ ಶೆಟ್ಟಿಯವರ ತಂದೆ ವೀರಪ್ಪ ಶೆಟ್ಟಿ (93) ಬುಧವಾರ ನಿಧನರಾಗಿದ್ದಾರೆ. ವಯೋ ಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಮುಂಬೈನಲ್ಲಿ ಇಹಲೋಕ ತ್ಯಜಿಸಿದರು.
ತುಂಬಾ ದಿನಗಳಿಂದಲೂ ಹಲವಾರು ದೈಹಿಕ ಸಮಸ್ಯೆಗಳಿಂದ ನರಳುತ್ತಿದ್ದ ಅವರನ್ನು ಮುಂಬೈನ ಬ್ರೀಜ್ ಕ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುಂಬಾ ದಿನಗಳಿಂದ ಅಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅವರು, ಗುರುವಾರ ನಿಧನರಾಗಿದ್ದಾರೆಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ವೀರಪ್ಪ ಅವರು, ತಮ್ಮ ಪತ್ನಿ, ಮಗ ಸುನಿಲ್ ಶೆಟ್ಟಿ ಹಾಗೂ ಮಗಳು ಸುಜಾತಾ ಅವರನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯು ಬುಧವಾರ ನಡೆಯಲಿದೆ ಎಂದು ಸುನಿಲ್ ಶೆಟ್ಟಿ ಕುಟುಂಬದ ಮೂಲಗಳು ಹೇಳಿವೆ.
2013ರಲ್ಲಿ ವೀರಪ್ಪ ಶೆಟ್ಟಿಯವರು ಪಾರ್ಶ್ವವಾಯುವಿಗೆ ತುತ್ತಾಗಿದ್ದರು. ಆಗ, ಅವರ ಚಿಕಿತ್ಸೆಗಾಗಿ ದಕ್ಷಿಣ ಮುಂಬೈನಲ್ಲಿರುವ ಅವರ ನಿವಾಸದಲ್ಲಿನ ವೀರಪ್ಪ ಅವರ ಕೊಠಡಿಯನ್ನು ಸಂಪೂರ್ಣವಾಗಿ ಐಸಿಯು ಆಗಿ ಪರಿವರ್ತಿಸಿದ್ದ ಸುನಿಲ್ ಶೆಟ್ಟಿ ತಂದೆಯ ಶುಶ್ರೂಷೆಯಲ್ಲಿ ತೊಡಗಿಸಿಕೊಂಡರು.

ಅಲ್ಲಿಂದ ಮೂರು ವರ್ಷಗಳ ಕಾಲ ತಂದೆಯ ಸೇವೆಯನ್ನು ಮಾಡಿದ ಅವರು, ಯಾವುದೇ ಚಿತ್ರಗಳನ್ನೂ ಒಪ್ಪಿಕೊಳ್ಳದೇ ಹಿಂದೆ ಸರಿದಿದ್ದರು. ಆಗೊಮ್ಮೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಅವರು, ತಮ್ಮ ತಂದೆ ತಮ್ಮ ಪಾಲಿಗೆ ಹೀರೋ ಆಗಿದ್ದು, ಅವರ ಸೇವೆಯೇ ತಮ್ಮ ಪರಮ ಗುರಿಯೆಂದು ತಿಳಿಸಿದ್ದರು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications