Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು
ಚೆನ್ನೈ: ತಮಿಳಿಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮತ್ತು ಖ್ಯಾತ ತಮಿಳು ನಟ ವಿಜಯ್ ದಳಪತಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದಕ್ಕಾಗಿ ಅವರ ವಿರುದ್ಧ ಚೆನ್ನೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿಜಯ್ ಸೋಮವಾರ (ಮಾ.30) ಚುನಾವಣಾ ಪ್ರಚಾರ ಅಭಿಯಾನ ನಡೆಸಿದ್ದರು. ಇದರಿಂದ ಚುನಾವಣಾ ನಿಯಮ ಉಲ್ಲಂಘನೆ ಆಗಿದೆ ಎಂದು ವಿಜಯ್ ವಿರುದ್ಧ ದೂರು ನೀಡಲಾಗಿದೆ.
ವಿಜಯ್ ಅವರು ತಮಿಳುನಾಡಿನ ಪೆರಂಬೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಈ ಸಂಬಂಧ ಸೋಮವಾರ ನಾಮಪತ್ರ ಸಹ ಸಲ್ಲಿಸಿದರು. ಕ್ಷೇತ್ರದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು ಹೆಚ್ಚು ಜನ ಸೇರಿಸಿ ಕ್ಯಾಂಪೇನ್ ಮಾಡಿದ್ದಕ್ಕಾಗಿ ಅವರ ವಿರುದ್ಧ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಕುಮಾರ್ ದೂರು ನೀಡಿದ್ದಾರೆ. ಅದರ ಆಧಾರದಲ್ಲಿ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಸೇರಿದಂತೆ ಐದು ವಿಭಾಗಗಳ ಅಡಿಯಲ್ಲಿ ವಿಜಯ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲಾಗುತ್ತಿದ್ದಂತೆ ಭದ್ರತಾ ಸಮಸ್ಯೆ ಉಂಟಾಗಬಹುದೆಂಬ ಕಾರಣಕ್ಕೆ ವಿಜಯ್ ಅವರು ಪೂರ್ವ ನಿಗದಿಯಂತೆ ಈಗಾಗಲೇ ಆಯೋಜಿಸಲಾಗಿದ್ದ ಎರಡು ಕಡೆಗೆ ನಡೆಯಬೇಕಿದ್ದ ಚುನಾವಣೆ ಪ್ರಚಾರ ಕಾರ್ಯವನ್ನು ರದ್ದುಗೊಳಿಸಿದ್ದಾರೆ.
ನಿಯಮ ಉಲ್ಲಂಘನೆ ಆಗಿದ್ದೇಗೆ?
ಸೋಮವಾರ ವಿಜಯ್ ಅವರು ರ್ಯಾಲಿ ವೇಳೆ 30 ಧ್ವನಿವರ್ಧಕ ಬಳಸಿದ್ದಾರೆ. ಆಂಬುಲೆನ್ಸ್ಗೆ ದಾರಿ ಬಿಡದೇ ಬ್ಲಾಕ್ ಮಾಡಿದ್ದಾರೆ. 5000ಕ್ಕೂ ಹೆಚ್ಚು ಜನರನ್ನು ಗುಂಪುಗೂಡಿಸಿ ಕಾರ್ಯಕ್ರಮ ಮಾಡಿದ್ದಾರೆ. ಇದರಿಂದ ಸಾರ್ವಜನಿಕ ಸಂಚಾರಕ್ಕೆ ಸಮಸ್ಯೆ ಉಂಟು ಮಾಡಿದ್ದಾರೆ. ಒಟ್ಟಾರೆ ಚುನಾವಣಾ ಮಾದರಿ ನೀತಿ ಸಂಹಿತಿ ಉಲ್ಲಂಘಿಸಿದ್ದಾರೆಂದು ಆರೋಪಿಸಿ ದೂರು ನೀಡಲಾಯಿತು.
ಸೂಕ್ತ ಭದ್ರತೆಗೆ ಕೋರಿದ್ದ ಟಿವಿಕೆ ಪಕ್ಷ
ಈ ಹಿಂದೆ ಕರೂರು ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿ ಸುಮಾರು 40 ಮಂದಿ ಮೃತಪಟ್ಟಿದ್ದರು. ಅಂತಹ ಮತ್ತೊಂದು ಘಟನೆ ಆಗದಂತೆ ಎಚ್ಚರ ವಹಿಸಿದ್ದ ಟಿವಿಕೆ ಪಕ್ಷವು ಇತ್ತೀಚೆಗಷ್ಟೆ ಚುನಾವಣೆ ಆಯೋಗದ ಮುಖ್ಯ ಆಯುಕ್ತರಾದ ಅರ್ಚನಾ ಪಾಟ್ನಾಯಕ್ ಅವರನ್ನು ಭೇಟಿ ಮಾಡಿ, ಚುನಾವಣಾ ಪ್ರಚಾರದಲ್ಲಿ ಅಗತ್ಯ ಭದ್ರತೆ ಒದಗಿಸುವಂತೆ ಕೋರಿತ್ತು. ಅದಾಗಿ ಒಂದೇ ದಿನದ ಅಂತರದಲ್ಲಿ ವಿಜಯ್ ಅವರ ಮೇಲೆ ದೂರು ದಾಖಲಾಗಿದೆ. ಇದರ ಹಿಂದೆ ರಾಜಕೀಯ ತಂತ್ರವು ಇದೆ ಎಂದು ಟಿವಿಕೆ ಪಕ್ಷದ ಸದಸ್ಯರು, ವಿಜಯ್ ಬೆಂಬಲಿಗರು ದೂರಿದ್ದಾರೆ.
ಡಿಎಂಕೆ ವಿರುದ್ಧ ಗುಡುಗಿದ ವಿಜಯ್
ಸೋಮವಾರ ನಾಮಪತ್ರ ಸಲ್ಲಿಕೆ ವೇಳೆ ಸಾಕಷ್ಟು ಜನರ ಸೇರಿದ್ದರು. ಈ ಬಾರಿ ತಮಿಳು ನಾಡು ಜನರ ಸೇವೆ ಮಾಡಲು ಟಿವಿಕೆ ಪಕ್ಷಕ್ಕೆ ಆಶೀರ್ವದಿಸುವಂತೆ ಕೋರಿದ್ದರು. ಜೊತೆಗೆ ಹಾಲಿ ಆಡಳಿತ ಪಕ್ಷ ಡಿಎಂಕೆ ಅಭಿವೃದ್ಧಿ ಮಾಡಿಲ್ಲ, ಭ್ರಷ್ಟಾಚಾರದಲ್ಲಿ ತೊಡಗಿದೆ. ಟಿವಿಕೆ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಯಾವುದೇ ಭ್ರಷ್ಟಾಚಾರದಲ್ಲಿ ತೊಡಗುವುದಿಲ್ಲ ಎಂದು ಅವರು ಜನರಿಗೆ ಭರವಸೆ ನೀಡಿದ್ದಾರೆ. ನಾಮಪತ್ರದಲ್ಲಿ ತಾವು 645 ಕೋಟಿ ರೂಪಾಯಿ ಆಸ್ತಿ ಒಡೆಯನೆಂದು ಅವರು ಘೋಷಿಸಿದ್ದಾರೆ. ಇದು ರಾಜ್ಯದಲ್ಲಿ ಭಾರೀ ಚರ್ಚೆ ಆಗುತ್ತಿದೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ













Click it and Unblock the Notifications