ನಟಿ ಮೇಲಿನ ದೌರ್ಜನ್ಯ: ದಿಲೀಪ್ ವಿರುದ್ಧ ಚಾರ್ಜ್ ಶೀಟ್
ತಿರುವನಂತಪುರಂ, ನವೆಂಬರ್ 22: ಕೇರಳ ಮೂಲದ ಬಹುಭಾಷಾ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತನಾಗಿರುವ ಜನಪ್ರಿಯ ನಟ ದಿಲೀಪ್ ಅವರ ವಿರುದ್ಧ ಬುಧವಾರದಂದು ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಈ ಪ್ರಕರಣದಲ್ಲಿ 8ನೇ ಆರೋಪಿಯಾಗಿ ಹೆಸರಿಸಲಾಗಿದೆ.
ಸುಮಾರು 1452 ಪುಟಗಳ ದೋಷರೋಪಣ ಪಟ್ಟಿಯಲ್ಲಿ 345 ಸಾಕ್ಷಿಗಳು, 164 ಹೇಳಿಕೆಗಳನ್ನು ದಾಖಲಿಸಲಾಗಿದೆ. ಒಟ್ಟು 12 ಮಂದಿ ಆರೋಪಿಗಳಿದ್ದು, ದಿಲೀಪ್ ಅವರು 8ನೇ ಆರೋಪಿಯಾಗಿದ್ದು, ದಿಲೀಪ್ ಅವರ ಮಾಜಿ ಪತ್ನಿ, ನಟಿ ಮಂಜು ವಾರಿಯರ್ ಅವರು ಈ ಪ್ರಕರಣದಲ್ಲಿ ಸಾಕ್ಷಿಯಾಗಿದ್ದಾರೆ.

ಫೆಬ್ರವರಿ 17ರಂದು ಎರ್ನಾಕುಲಂ ನಿಂದ ತ್ರಿಶೂರ್ ಮಾರ್ಗದಲ್ಲಿ ನಟಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 10ರಂದು ಕೇರಳ ಪೊಲೀಸರು, ಮಲೆಯಾಳಂ ನಟ ದಿಲೀಪ್ ನನ್ನು ಬಂಧಿಸಿ, ಆಳುವ ಉಪ ಕಾರಾಗೃಹದಲ್ಲಿರಿಸಲಾಗಿದೆ. ದಿಲೀಪ್ ಅವರ ಜಾಮೀನು ಅರ್ಜಿಯು ನಾಲ್ಕನೇ ಬಾರಿಗೆ ತಿರಸ್ಕೃತಗೊಂಡಿದೆ.
ನಟಿ ಅಪಹರಣ, ಲೈಂಗಿಕ ಕಿರುಕುಳದ ಸಂಚು ರೂಪಿಸಿದ್ದು, ಪಲ್ಸರ್ ಸುನಿ ಎಂಬಾತನನ್ನು ಬಳಸಿಕೊಂಡು ಯೋಜನೆಯನ್ನು ಕಾರ್ಯಗತಗೊಳಿಸಿದ ಆರೋಪ ನಟ ದಿಲೀಪ್ ಮೇಲಿದೆ.
ಒಮ್ಮೆ ಮಾತ್ರ ಕುಟುಂಬದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಜೈಲಿನಿಂದ ದಿಲೀಪ್ ಹೊರಕ್ಕೆ ಬಂದಿದ್ದರು. ಸದ್ಯ ಷರತ್ತುಬದ್ಧ ಜಾಮೀನು ಪಡೆದಿರುವ ದಿಲೀಪ್ ಅವರು ದುಬೈಗೆ ತೆರಳಲು ಅನುಮತಿ ನೀಡಲಾಗಿದೆ. ದುಬೈನಲ್ಲಿ ತಮ್ಮ ಹೋಟೆಲ್ 'ದೆ ಪುಟ್ಟು' ಹೊಸ ಬ್ರ್ಯಾಂಚ್ ಆರಂಭಿಸಲು 6 ದಿನಗಳ ಮಟ್ಟಿಗೆ ದಿಲೀಪ್ ಗೆ ಅಂಗಮಲೆ ಜೆಎಫ್ ಸಿಎಂ ಕೋರ್ಟ್ ಅನುಮತಿ ನೀಡಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications