ನಟಿ ಮೇಲೆ ಲೈಂಗಿಕ ದೌರ್ಜನ್ಯ: ನಟ ದಿಲೀಪ್ ಗೆ ಜೈಲೇ ಗತಿ
ತಿರುವನಂತಪುರಂ, ಸೆ. 18: ಕೇರಳ ಮೂಲದ ಬಹುಭಾಷಾ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತನಾಗಿರುವ ಜನಪ್ರಿಯ ನಟ ದಿಲೀಪ್ ಅವರು ಇನ್ನಷ್ಟು ಕಾಲ ಜೈಲಿನಲ್ಲೇ ನೆಲೆಸಬೇಕಾಗುತ್ತದೆ. ಅಂಗಮಲೆ ಜೆಎಂಎಫ್ ನ್ಯಾಯಾಲಯವು ದಿಲೀಪ್ ಅವರ ಜಾಮೀನು ಅರ್ಜಿಯನ್ನು ಸೋಮವಾರ(ಸೆ. 18) ದಂದು ತಿರಸ್ಕರಿಸಿದೆ.
ನಟ ದಿಲೀಪ್ ಅವರ ಜಾಮೀನು ಅರ್ಜಿಯು ನಾಲ್ಕನೇ ಬಾರಿಗೆ ತಿರಸ್ಕೃತಗೊಂಡಿದೆ. ಅಂಗಮಲೆ ಕೋರ್ಟ್ ಅಲ್ಲದೆ, ಕೇರಳ ಹೈಕೋರ್ಟ್ ಕೂಡಾ ಎರಡು ಬಾರಿ ಅರ್ಜಿಯನ್ನು ತಿರಸ್ಕರಿಸಿದೆ.

ಫೆಬ್ರವರಿ 17ರ ನಟಿ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 10ರಂದು ಕೇರಳ ಪೊಲೀಸರು, ಮಲೆಯಾಳಂ ನಟ ದಿಲೀಪ್ ನನ್ನು ಬಂಧಿಸಿ, ಆಳುವ ಉಪ ಕಾರಾಗೃಹದಲ್ಲಿರಿಸಲಾಗಿದೆ.
ಬಂಧನದ ನಂತರ ದಿಲೀಪ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಕೇಸಿನ ಸಾಕ್ಷಿಗಳ ಮೇಲೆ ನಟ ಪ್ರಭಾವ ಬೀರಿರುವ ಸಾಧ್ಯತೆಯಿದೆ ಎಂದು ದಿಲೀಪ್ಗೆ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.
ನಟಿ ಅಪಹರಣ, ಲೈಂಗಿಕ ಕಿರುಕುಳದ ಸಂಚು ರೂಪಿಸಿದ್ದು, ಪಲ್ಸರ್ ಸುನಿ ಎಂಬಾತನನ್ನು ಬಳಸಿಕೊಂಡು ಯೋಜನೆಯನ್ನು ಕಾರ್ಯಗತಗೊಳಿಸಿದ ಆರೋಪ ನಟ ದಿಲೀಪ್ ಮೇಲಿದೆ. ಕಳೆದ 60 ದಿನಗಳಲ್ಲಿ ಒಮ್ಮೆ ಮಾತ್ರ ಕುಟುಂಬದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಜೈಲಿನಿಂದ ದಿಲೀಪ್ ಹೊರಕ್ಕೆ ಬಂದಿದ್ದರು.
ಈ ನಡುವೆ ದಿಲೀಪ್ ಅವರ ಪತ್ನಿ ನಟಿ ಕಾವ್ಯ ಮಾಧವನ್ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟಿನಲ್ಲಿ ಅರ್ಜಿ ಹಾಕಿದ್ದಾರೆ. ಅರ್ಜಿ ವಿಚಾರಣೆ ಜಾರಿಯಲ್ಲಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications