ನಟಿ ಮೇಲೆ ಲೈಂಗಿಕ ದೌರ್ಜನ್ಯ: ನಟ ದಿಲೀಪ್ ಗೆ ಜೈಲೇ ಗತಿ
ತಿರುವನಂತಪುರಂ, ಸೆ. 18: ಕೇರಳ ಮೂಲದ ಬಹುಭಾಷಾ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತನಾಗಿರುವ ಜನಪ್ರಿಯ ನಟ ದಿಲೀಪ್ ಅವರು ಇನ್ನಷ್ಟು ಕಾಲ ಜೈಲಿನಲ್ಲೇ ನೆಲೆಸಬೇಕಾಗುತ್ತದೆ. ಅಂಗಮಲೆ ಜೆಎಂಎಫ್ ನ್ಯಾಯಾಲಯವು ದಿಲೀಪ್ ಅವರ ಜಾಮೀನು ಅರ್ಜಿಯನ್ನು ಸೋಮವಾರ(ಸೆ. 18) ದಂದು ತಿರಸ್ಕರಿಸಿದೆ.
ನಟ ದಿಲೀಪ್ ಅವರ ಜಾಮೀನು ಅರ್ಜಿಯು ನಾಲ್ಕನೇ ಬಾರಿಗೆ ತಿರಸ್ಕೃತಗೊಂಡಿದೆ. ಅಂಗಮಲೆ ಕೋರ್ಟ್ ಅಲ್ಲದೆ, ಕೇರಳ ಹೈಕೋರ್ಟ್ ಕೂಡಾ ಎರಡು ಬಾರಿ ಅರ್ಜಿಯನ್ನು ತಿರಸ್ಕರಿಸಿದೆ.

ಫೆಬ್ರವರಿ 17ರ ನಟಿ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 10ರಂದು ಕೇರಳ ಪೊಲೀಸರು, ಮಲೆಯಾಳಂ ನಟ ದಿಲೀಪ್ ನನ್ನು ಬಂಧಿಸಿ, ಆಳುವ ಉಪ ಕಾರಾಗೃಹದಲ್ಲಿರಿಸಲಾಗಿದೆ.
ಬಂಧನದ ನಂತರ ದಿಲೀಪ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಕೇಸಿನ ಸಾಕ್ಷಿಗಳ ಮೇಲೆ ನಟ ಪ್ರಭಾವ ಬೀರಿರುವ ಸಾಧ್ಯತೆಯಿದೆ ಎಂದು ದಿಲೀಪ್ಗೆ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.
ನಟಿ ಅಪಹರಣ, ಲೈಂಗಿಕ ಕಿರುಕುಳದ ಸಂಚು ರೂಪಿಸಿದ್ದು, ಪಲ್ಸರ್ ಸುನಿ ಎಂಬಾತನನ್ನು ಬಳಸಿಕೊಂಡು ಯೋಜನೆಯನ್ನು ಕಾರ್ಯಗತಗೊಳಿಸಿದ ಆರೋಪ ನಟ ದಿಲೀಪ್ ಮೇಲಿದೆ. ಕಳೆದ 60 ದಿನಗಳಲ್ಲಿ ಒಮ್ಮೆ ಮಾತ್ರ ಕುಟುಂಬದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಜೈಲಿನಿಂದ ದಿಲೀಪ್ ಹೊರಕ್ಕೆ ಬಂದಿದ್ದರು.
ಈ ನಡುವೆ ದಿಲೀಪ್ ಅವರ ಪತ್ನಿ ನಟಿ ಕಾವ್ಯ ಮಾಧವನ್ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟಿನಲ್ಲಿ ಅರ್ಜಿ ಹಾಕಿದ್ದಾರೆ. ಅರ್ಜಿ ವಿಚಾರಣೆ ಜಾರಿಯಲ್ಲಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications