Actress Namitha: ಮಧುರೈ ಮೀನಾಕ್ಷಿ ದೇಗುಲ ಪ್ರವೇಶ ವೇಳೆ 'ಹಿಂದೂ' ಎಂಬುದಕ್ಕೆ ಸಾಕ್ಷಿ ಕೇಳಿದರು: ನಟಿ ಆರೋಪ
ಮಧುರೈ, ಆಗಸ್ಟ್ 27: ಬಹುಭಾಷಾ ನಟಿ ನಮಿತಾ ಅವರು ತಮಿಳುನಾಡಿನ ಪ್ರಸಿದ್ಧ ಮಧುರೈ ಮೀನಾಕ್ಷಿ ದೇವಸ್ಥಾನಕ್ಕೆ ತೆರಳಿದಾಗ ಅಹಿತಕರ ಅನುಭವ ಎದುರಿಸಿದ್ದಾಗಿ ಹೇಳಿಕೊಂಡಿದ್ದಾರೆ. ಪತಿಯೊಂದಿಗೆ ದೇವಸ್ಥಾನಕ್ಕೆ ತೆರಳಿದ್ದ ವೇಳೆ ನಟಿಯನ್ನು ಒಳಪ್ರವೇಶಿಸದಂತೆ ತಡೆದಿರುವ ಘಟನೆ ನಡೆದಿದೆ. ಈ ಕುರಿತು ಅವರು ಅಸಮಾಧಾನ ಮತ್ತು ಆಕ್ರೋಶ ಹೊರಹಾಕಿದ್ದಾರೆ.
ನಟಿ ನಮಿತಾ ಅವರು ಕ್ರೇಜಿಸ್ಟಾರ್ ರವಿಚಂದ್ರನ್ ಅವರೊಂದಿಗೆ 'ನೀಲಕಂಠ', ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆಗೆ 'ಇಂದ್ರ' ಕನ್ನಡ ಸಿನಿಮಾ ಸೇರಿದಮತೆ ತಮಿಳು ಹಾಗೂ ತಲುಗಿನಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇವರು ಮಧುರೈ ಮೀನಾಕ್ಷಿ ದೇವಾಲಯಕ್ಕೆ ದರ್ಶನಕ್ಕೆಂದು ತೆರಳಿದಾಗ ನೀವು ಹಿಂದೂನಾ ಎಂದು ಪ್ರವೇಶದ್ವಾರದಲ್ಲಿ ಕುಳಿತಿದ್ದ ದೇಗುಲ ಆಡಳಿತ ಮಂಡಳಿಯ ಸಿಬ್ಬಂದಿ ನನ್ನನ್ನು ತಡೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ನಾನು ಹಿಂದೂ ಎಂದು ತಿಳಿಸಿದರೂ ಸಹ, ನೀವು ಹಿಂದೂ ಧರ್ಮದವರು ಎಂಬುದನ್ನು ಪ್ರಮಾಣ ಪತ್ರ ತೋರಿಸಿ, ಸಾಬೀತು ಪಡಿಸಿ ಎಂದೆಲ್ಲ ಸಿಬ್ಬಂದಿ ಕೇಳಿದ್ದಾರೆ.
ದೇವಸ್ಥಾನ ಸಿಬ್ಬಂದಿ ವಿರುದ್ಧ ನಟಿ ಅಸಮಾಧಾನ
ದೇವಸ್ಥಾನ ಒಳಪ್ರವೇಶಿಸಲು ಬಿಡದಂತೆ ತಡೆ ನೀಡಿದ್ದಾರೆ ಎಂದು ನಟಿ ತಮಗಾದ ಕಹಿ ಅನುಭವ ಕುರಿತು ಹೇಳಿಕೊಂಡಿದ್ದಾರೆ. ಆಡಳಿತ ಮಂಡಳಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಈವರೆಗೆ ನನ್ನ ಜೀವನದಲ್ಲಿ ಇಂಥಹ ಸನ್ನಿವೇಶ ಎದುರಿಸಿರಲಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.
ಕೊನೆಗೆ ನಾವು ಹಿಂದೂ ಎಂದು ಸ್ಪಷ್ಟನೆ ನೀಡಿದ ನಂತರವೇ ಹಣೆಗೆ ಕುಂಕುಮ ಹಚ್ಚಿಕೊಂಡ ನಂತರ ನಮ್ಮನ್ನು ದೇವಸ್ಥಾನ ಒಳ ಪ್ರವೇಶಿಸಲು ಅನುಮತಿ ನೀಡಿದರು ಎಂದು ನಟಿ ನಮಿತಾ ತಿಳಿಸಿದ್ದಾರೆ.
ನಟಿ ಆರೋಪಕ್ಕೆ ದೇವಸ್ಥಾನ ಮುಖ್ಯಸ್ಥರು ಹೇಳಿದ್ದೇನು?
ಆದರೆ ಈ ಕುರಿತು ಮಧುರೈ ಮೀನಾಕ್ಷಿ ದೇವಸ್ಥಾನದ ಆಡಳಿತ ಮಂಡಳಿಯು ನಟಿ ನಮಿತಾ ಅವರ ಆರೋಪವನ್ನು ನಿರಾಕರಿಸಿದೆ. ಅಲ್ಲದೇ ನಮೀತಾ ದೇವಾಲಯ ಪ್ರವೇಶಿಸುವಾಗ ಅವರು ಮಾಸ್ಕ್ ಧರಿಸಿದ್ದರು. ಹೀಗಾವಿ ಅವರನ್ನು ತಡೆದು ನೀವು ಹಿಂದೂವಾ? ಎಂದು ಕೇಳಲಾಗಿದೆ. ನಂತರ ಅವರಿಂದ ಸ್ಪಷ್ಟನೆ ಪಡೆದು, ಕುಂಕುಮ ಹಚ್ಚಿ ಅವರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಮುಖ್ಯಸ್ಥರೊಬ್ಬರು ತಿಳಿಸಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications