ನಟಿ ಸೊನಾಲಿ ಬೇಂದ್ರೆಗೆ ಕ್ಯಾನ್ಸರ್: ನ್ಯೂಯಾರ್ಕ್ನಲ್ಲಿ ಚಿಕಿತ್ಸೆ
ಮುಂಬೈ, ಜುಲೈ 4: ಬಾಲಿವುಡ್ ತಾರೆ ಸೊನಾಲಿ ಬೇಂದ್ರೆ ಅವರು ತಾವು ಕ್ಯಾನ್ಸರ್ಗೆ ತುತ್ತಾಗಿರುವುದಾಗಿ ಬಹಿರಂಗಪಡಿಸಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಈ ಬಗ್ಗೆ ಹೇಳಿಕೆ ನೀಡಿರುವ ಸೊನಾಲಿ ಬೇಂದ್ರೆ, 'ನನ್ನ ದಾರಿಯಲ್ಲಿ ಎದುರಾಗುವ ಪ್ರತಿ ಸಂಕಷ್ಟದ ವಿರುದ್ಧವೂ ಹೋರಾಟ ನಡೆಸಲು ದೃಢನಿಶ್ಚಯ ಮಾಡಿದ್ದೇನೆ' ಎಂದು ತಿಳಿಸಿದ್ದಾರೆ.
ಕೆಲವೊಮ್ಮೆ ಅನಿರೀಕ್ಷಿತ ಸಂದರ್ಭಗಳಲ್ಲಿ ಜೀವನ ನಮ್ಮನ್ನು ಸಂಕಷ್ಟಕ್ಕೆ ನೂಕುತ್ತವೆ. ನಾನು ಅಪಾಯಕಾರಿ ಪ್ರಮಾಣದ ಕ್ಯಾನ್ಸರ್ಗೆ ತುತ್ತಾಗಿರುವುದು ಇತ್ತೀಚೆಗೆ ಪತ್ತೆಯಾಗಿದೆ. ನಿಜಕ್ಕೂ ಇದು ಆವರಿಸಿದ್ದು ನನಗೆ ಗೊತ್ತೇ ಆಗಿರಲಿಲ್ಲ. ಸಣ್ಣಪುಟ್ಟ ನೋವಿನ ಕಾರಣ ಕೆಲವು ಪರೀಕ್ಷೆಗೆ ಒಳಗಾಗಬೇಕಾಯಿತು. ಅದರಿಂದ ಈ ಅನಿರೀಕ್ಷಿತ ರೋಗದ ಪತ್ತೆಯಾಗಿದೆ ಎಂದು 43 ವರ್ಷದ ಸೊನಾಲಿ ಬೇಂದ್ರೆ ತಮಗಾಗಿರುವ ಆಘಾತ ಹಂಚಿಕೊಂಡಿದ್ದಾರೆ.

ತಮಗೆ ಬೆಂಬಲವಾಗಿ ನಿಂತಿರುವ ಕುಟುಂಬ ಹಾಗೂ ಸ್ನೇಹಿತರಿಗೆ ಅವರು ಕೃತಜ್ಞತೆ ಹೇಳಿದ್ದಾರೆ. ನ್ಯೂಯಾರ್ಕ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
Bollywood actress Sonali Bendre releases statement, says has been diagnosed with high-grade cancer that has metastised. Bendre is currently undergoing treatment for the same in New York. pic.twitter.com/NpJ1V649sz
— ANI (@ANI) 4 July 2018
ನನ್ನ ಕುಟುಂಬ ಮತ್ತು ಆಪ್ತ ಸ್ನೇಹಿತರು ನನ್ನ ಸುತ್ತಲೂ ಇದ್ದಾರೆ. ಯಾವುದನ್ನು ಕೇಳಿದರೂ ಒದಗಿಸುವ ಬೆಂಬಲ ಸಿಗುತ್ತಿದೆ. ನಾನು ಅದೃಷ್ಟವಂತೆ. ಪ್ರತಿಯೊಬ್ಬರಿಗೂ ನಾನು ಋಣಿಯಾಗಿರುತ್ತೇನೆ. ಪರಿಣಾಮಕಾರಿ ಮತ್ತು ತಕ್ಷಣದ ಕ್ರಮ ತೆಗೆದುಕೊಳ್ಳದರ ಹೊರತಾಗಿ ಇದನ್ನು ಗುಣಪಡಿಸಲು ಬೇರೆ ಮಾರ್ಗವಿಲ್ಲ.
ನನ್ನ ವೈದ್ಯರ ಸಲಹೆಯಂತೆ ನಾನು ಪ್ರಸ್ತುತ ನ್ಯೂಯಾರ್ಕ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಸೊನಾಲಿ ತಿಳಿಸಿದ್ದಾರೆ.
ನಾವು ಆಶಾವಾದಿಯಾಗಿರುತ್ತೇವೆ ಮತ್ತು ದಾರಿಯ ಪ್ರತಿ ಹೆಜ್ಜೆಯಲ್ಲಿಯೂ ಹೋರಾಡಲು ನಾನು ದೃಢನಿಶ್ಚಯ ಮಾಡಿದ್ದೇನೆ. ಕಳೆದ ಕೆಲವು ದಿನಗಳಿಂದ ನನಗೆ ಸಿಗುತ್ತಿರುವ ಅಗಾಧ ಪ್ರಮಾಣದ ಪ್ರೀತಿ ನನಗೆ ಸಹಾಯ ಮಾಡುತ್ತಿದೆ. ಅದಕ್ಕೆ ನಾನು ಕೃತಜ್ಞಳಾಗಿರುತ್ತೇನೆ.
ನನ್ನ ಕುಟುಂಬ ಮತ್ತು ಸ್ನೇಹಿತರ ಬಲ ನನ್ನ ಹಿಂದಿದೆ ಎಂಬ ಅರಿವಿನೊಂದಿಗೆ ಯುದ್ಧಕ್ಕೆ ಮುನ್ನಡಿಯಿಡುತ್ತಿದ್ದೇನೆ ಎಂದು ಸೊನಾಲಿ ಹೇಳಿದ್ದಾರೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications