ಅದಾನಿ ಸಂಸ್ಥೆ ಷೇರುಗಳಿಗೆ ಮತ್ತೆ ಸಂಕಷ್ಟ, ಬೆಳಗ್ಗೆಯೇ ಮತ್ತಷ್ಟು ಕುಸಿದ ಷೇರುಗಳು!
ಭಾರತದ ಶ್ರೀಮಂತ ಉದ್ಯಮಿ ಅದಾನಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಈ ಸಮಯದಲ್ಲಿ ದೂರದ ಅಮೆರಿಕ ಗೌತಮ್ ಅದಾನಿ ಸಂಸ್ಥೆಗಳ ಮೇಲೆ ದಾಳಿ ನಡೆಸಿ, ಅರೆಸ್ಟ್ ಮಾಡಲು ಪ್ರಯತ್ನ ನಡೆಸುತ್ತಿದ್ದರೆ. ಮತ್ತೊಂದು ಕಡೆ ಸಂಚಲನ ಸೃಷ್ಟಿಸುವ ಘಟನೆಗಳು ಈಗ ಷೇರು ಮಾರುಕಟ್ಟೆಯಲ್ಲಿ ನಡೆಯುತ್ತಿವೆ. ಅದರಲ್ಲೂ ಇಂದು ಬೆಳಗ್ಗೆಯೇ ಅದಾನಿ ಸಂಸ್ಥೆಯ ಷೇರುಗಳ ಮೌಲ್ಯ ಭಾರಿ ಪ್ರಮಾಣದಲ್ಲಿ ಇಳಿಕೆ ಕಂಡಿತ್ತು. ಹಾಗಿದ್ರೆ ಹೇಗಿತ್ತು ಇವತ್ತಿನ ಆರಂಭ? ಈ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.
ಅದಾನಿ ಸಂಸ್ಥೆ ಷೇರು ಅಂದ್ರೆ ಒಂದು ಕಾಲದಲ್ಲಿ ಖರೀದಿ ಮಾಡುವುದು ಕೂಡ ಕಷ್ಟ, ಕಷ್ಟ ಎನ್ನುವ ಸ್ಥಿತಿ ಇತ್ತು. ಆದರೆ ಯಾವಾಗ ಹಿಂಡನ್ ಬರ್ಗ್ ವರದಿ ಹೊರಗೆ ಬಿತ್ತೋ, ಅಲ್ಲಿಂದ ಮುಂದೆ ಪರಿಸ್ಥಿತಿ ಬದಲಾಗಿ ಹೋಗಿತ್ತು. ಅದಾನಿ ಸಂಸ್ಥೆ ಷೇರುಗಳು ತೀವ್ರವಾಗಿ ಕುಸಿತ ಕಂಡು ಕೊನೆಗೆ ತಲ್ಲಣ ಸೃಷ್ಟಿಯಾಗಿತ್ತು. ಇಂತಹ ಸಮಯದಲ್ಲೇ ಮತ್ತೆ ಅದಾನಿ ಸಂಸ್ಥೆ ಷೇರುಗಳಿಗೆ ಇದೀಗ ಗಂಡಾಂತರ ಎದುರಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಅದಾನಿ ಸಂಸ್ಥೆ ಷೇರುಗಳಿಗೆ ಆಘಾತ!
ಭಾರತದ ಷೇರು ಮಾರುಕಟ್ಟೆ ಆರಂಭದಲ್ಲೇ ಅದಾನಿ ಸಂಸ್ಥೆ ಷೇರುಗಳು ಕುಸಿತ ಕಂಡವು. ಅದರಲ್ಲೂ ಅದಾನಿ ಸಮೂಹದ 10 ಕಂಪನಿಗಳ ಷೇರುಗಳಲ್ಲಿ 8 ಷೇರುಗಳ ಮೌಲ್ಯವು ಇಳಿಕೆ ಕಂಡು ಭಾರಿ ಆತಂಕ ಮೂಡಿತ್ತು.
ಅದಾನಿ ಗ್ರೀನ್ ಎನರ್ಜಿ, ಅದಾನಿ ಎನರ್ಜಿ ಸಲ್ಯೂಷನ್ಸ್, ಸೇರಿದಂತೆ ಅದಾನಿ ಎಂಟರ್ಪ್ರೈಸಸ್ ಮತ್ತು ಇನ್ನಿತರ ಷೇರು ವಹಿವಾಟು ಕುಸಿತದಿಂದಲೇ ಶುರುವಾಗಿತ್ತು. ಹೀಗಾಗಿ ಹೂಡಿಕೆದಾರರಿಗೆ ಕೂಡ ಒಂದಷ್ಟು ಟೆನ್ಷನ್ ಶುರುವಾಗಿತ್ತು. ಈ ಕಾರಣಕ್ಕೆ ಮಾರಾಟ ಒತ್ತಡ ಕೂಡ ಹೆಚ್ಚಾಯಿತು ಎನ್ನಲಾಗಿದೆ.
ಸಂಚಲನ ಸೃಷ್ಟಿಯಾಗಿದ್ದು ಹೇಗೆ?
ಅದಾನಿ ಸಂಸ್ಥೆ ಷೇರುಗಳು ತೀವ್ರವಾಗಿ ಕುಸಿತ ಕಂಡ ನಂತರ ಒಂದಷ್ಟು ಚೇತರಿಕೆ ಕಂಡಿವೆ. ಆದರೆ ಹೀಗೆ ಆಗಿದ್ದು ಯಾಕೆ? ಎಂಬ ಪ್ರಶ್ನೆಗೆ ಉತ್ತರ, ಅಮೆರಿಕದ ನ್ಯಾಯಾಲಯದ ತೀರ್ಪು. ಅಷ್ಟಕ್ಕೂ ಸೌರ ಶಕ್ತಿ ಗುತ್ತಿಗೆ ಒಪ್ಪಂದ ಸಂಬಂಧ, ಭಾರತದ ಉದ್ಯಮಿ ಗೌತಮ್ ಅದಾನಿ ಅವರ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ.
ಅದಾನಿ ಅವರ ಸಂಸ್ಥೆ ವಿರುದ್ಧ ಈ ಆರೋಪ ಕೇಳಿ ಬಂದ ಬಳಿಕ ಸಂಚಲನ ಸೃಷ್ಟಿ ಆಗಿದೆ. ಈ ಪ್ರಕರಣದಲ್ಲಿ ಉದ್ಯಮಿ ಗೌತಮ್ ಅದಾನಿ & ಅವರ ಸೋದರಳಿಯ ಸಾಗರ್ ಅದಾನಿ ಅವರ ವಿರುದ್ಧ ಅಮೆರಿಕದ ಕೋರ್ಟ್ ಅರೆಸ್ಟ್ ವಾರೆಂಟ್ ಕೂಡ ಹೊರಡಿಸಿದೆ. ಇದೇ ವಿಚಾರ ಇದೀಗ ಭಾರತದ ಷೇರು ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿ ಮಾಡಿಬಿಟ್ಟಿದೆ!
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications