ಬಿಹಾರದಲ್ಲಿ 1600 ಕೋಟಿ ರೂ. ಹೂಡಿಕೆಗೆ ಮುಂದಾದ ಅದಾನಿ ಗ್ರೂಪ್
ಭಾರತದ ಅತಿ ದೊಡ್ಡ ಉದ್ಯಮಿಗಳಲ್ಲಿ ಒಬ್ಬರಾಗಿರುವ ಗೌತಮ್ ಅದಾನಿ ಮುಂದಾಳತ್ವದ ಅದಾನಿ ಗ್ರೂಪ್ ಈಗ ಬಿಹಾರದಲ್ಲಿ ಗ್ರ್ಯಾಂಡ್ ಎಂಟ್ರಿ ನೀಡಲು ಸಿದ್ಧತೆ ನಡೆಸಿದೆ. ಅದಾನಿ ಗ್ರೂಪ್ ನವಾಡ ಜಿಲ್ಲೆಯ ವಾರಿಸಲಿಗಂಜ್ನಲ್ಲಿ ಸುಮಾರು 1600 ಕೋಟಿ ರೂಪಾಯಿ ಹೂಡಲು ಮುಂದಾಗಿದೆ. ಅಂದಾನಿ ಗ್ರೂಪ್ನ ಅಡಿಯಲ್ಲಿ ಅಂಬುಜಾ ಸಿಮೆಂಟ್ ಲಿಮಿಟೆಡ್ ಇಲ್ಲಿ ಕೆಲಸವನ್ನು ಮಾಡಲಿದೆ.
ಅದಾನಿ ಗ್ರೂಪ್ 6 MTPA ನ ಸಿಮೆಂಟ್ ಮಿಶ್ರಣ ಘಟಕವನ್ನು ಬಿಹಾರದ ನವಾಡ ಜಿಲ್ಲೆಯ ಸ್ಥಾಪಿಸಲು ಯೋಜನೆ ರೂಪಿಸಿಕೊಂಡಿದೆ. ಉದ್ಯಮಿ ಗೌತಮ್ ಅದಾನಿ ಈ ಬಗ್ಗೆ ಶನಿವಾರ ಘೋಷಣೆ ಮಾಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.

ಕೇಂದ್ರ ಸರ್ಕಾರ ಬಜೆಟ್ನಲ್ಲಿ ಬಿಹಾರ ಹಾಗೂ ಆಂಧ್ರಪ್ರದೇಶಗಳಿಗೆ ಅತಿ ಹೆಚ್ಚಿನ ನೆರವನ್ನು ನೀಡಿತ್ತು. ಈಗ ಅದಾನಿ ಕಂಪನಿ ಸಹ ಬಿಹಾರದಲ್ಲಿ ಹಣ ಹೂಡಲು ಮುಂದಾಗಿದೆ. ಇಲ್ಲಿ ಈ ಘಟಕವನ್ನು ಸ್ಥಾಪನೆ ಮಾಡುವುದರಿಂದ ರಾಜ್ಯ ಸರ್ಕಾರಕ್ಕೆ 250 ಕೋಟಿ ರೂಪಾಯಿ ಆದಾಯ ನಿರೀಕ್ಷಿಸಬಹುದಾಗಿದೆ. ಅಲ್ಲದೆ ಉದ್ಯೋಗವಕಾಶಗಳು ಹೆಚ್ಚಾಗಲಿವೆ. ಈ ಬಗ್ಗೆ ಮಾತನಾಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಅದಾನಿ ಗ್ರೂಪ್ನ ಹೂಡಿಕೆ ರಾಜ್ಯದಲ್ಲಿ ಅಭಿವೃದ್ಧಿಗೆ ಪೂರಕವಾಗಿದೆ ಎಂದು ತಿಳಿಸಿದ್ದಾರೆ.
ಬಿಹಾರ ರಾಜ್ಯದ ನಾವಡದಲ್ಲಿ ಅದಾನಿ ಗ್ರೂಪ್ ಸಿಮೆಂಟ್ ಕಾರ್ಖಾನೆ ಸ್ಥಾಪನೆ ಮಾಡುವುದರಿಂದ ಈ ಪ್ರದೇಶದಲ್ಲಿ ಹೆಚ್ಚಿನ ಅಭಿವೃದ್ಧಿಗೆ ಸಾಧ್ಯ. ಈ ಕಾರ್ಖಾನೆಯನ್ನು ಆರಂಭಿಸುವುದರಿಂದ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ. ಇದರಿಂದ ಕಾರ್ಮಿಕರು ಕೆಲಸಕ್ಕಾಗಿ ಬೇರೆ ಪ್ರದೇಶಗಳಿಗೆ ಹೋಗುವ ಅವಶ್ಯಕತೆ ಇಲ್ಲವೇ ಇಲ್ಲ. ಇದರಿಂದ ರಾಜ್ಯದಲ್ಲಿ ಉದ್ಯೋಗ ಕ್ರಾಂತಿ ಆಗುವ ಸಾಧ್ಯತೆ ಇದೆ.
ಅದಾನಿ ಗ್ರೂಪ್ ಉದ್ದೇಶಿಸಲು ಹೊರಟಿರುವ ಈ ಸಿಮೆಂಟ್ ಕಾರ್ಖಾನೆಯನ್ನು ಮೂರು ಹಂತಗಳಲ್ಲಿ ಪೂರ್ಣಗೊಳ್ಳಲಿದೆ. ಈ ಕಾರ್ಖಾನೆಯ ಸ್ಥಾಪನೆಗೆ ಮೊದಲ ಹಂತದಲ್ಲಿ ಕಂಪನಿ 1100 ಕೋಟಿ ರೂಗಳನ್ನು ಹೂಡಿಕೆ ಮಾಡಲಿದೆ. ಈ ಯೋಜನೆ ಎಲ್ಲವೂ ಅಂದುಕೊಂಡಂತೆ ನಡೆದಿದ್ದೆ ಆದಲ್ಲಿ ಡಿಸೆಂಬರ್ 2025ರ ಒಳಗೆ ಪೂರ್ತಿ ಆಗುವ ಸಾಧ್ಯತೆ ಇದೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications