ತಮಿಳುನಾಡಿನಲ್ಲೂ ಶುರುವಾಯ್ತು ಅದಾನಿ ಗದ್ದಲ; ಎಂ.ಕೆ ಸ್ಟಾಲಿನ್ ಡಬಲ್ ಡ್ರಾಮಾ ಎಂದ ಕೆ. ಅಣ್ಣಾಮಲೈ!
ಗೌತಮ್ ಅದಾನಿ ವಿಚಾರವು ಇದೀಗ ದೇಶದಾದ್ಯಂತ ಸುದ್ದಿಯಾಗುತ್ತಿದೆ. ಸೌರಶಕ್ತಿ ಗುತ್ತಿಗೆ ಪಡೆದುಕೊಳ್ಳಲು ಅವರು ಭಾರತದ ಅಧಿಕಾರಿಗಳಿಗೆ ಲಂಚ ನೀಡಿದ್ದರು ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಹಾಗೂ ಅದಾನಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೇಳಿ ಬಂದಿರುವ ಆರೋಪಗಳ ಬಗ್ಗೆ ತನಿಖೆ ನಡೆಸುವುದಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹೇಳಿದ್ದಾರೆ. ಇದೀಗ ತಮಿಳುನಾಡಿನ ಡಿಎಂಕೆ ಸರ್ಕಾರ ಹಾಗೂ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರಿಗೂ ಈ ವಿಚಾರದಲ್ಲಿ ಸಂಕಷ್ಟ ಎದುರಾಗುವ ಸಾಧ್ಯತೆ ಕಾಣಿಸುತ್ತಿದೆ.
ಉದ್ಯಮಿ ಹಾಗೂ ಬಿಲೆನಿಯರ್ ಗೌತಮ್ ಅದಾನಿ ಅವರಿಗೆ ಅಮೆರಿಕದಿಂದ ವಾರೆಂಟ್ ಜಾರಿಯಾಗಿದೆ. ಇದರ ಬೆನ್ನಲ್ಲೇ ಭಾರತದ ವಿವಿಧ ರಾಜ್ಯಗಳ ಸರ್ಕಾರದೊಂದಿಗೆ ಅವರು ನಡೆಸಿರುವ ವ್ಯವಹಾರಗಳ ಬಗ್ಗೆಯೂ ಭಾರೀ ಚರ್ಚೆ ನಡೆದಿದೆ. ಗುತ್ತಿಗೆಯನ್ನು ಪಡೆದುಕೊಳ್ಳುವ ಉದ್ದೇಶದಿಂದ ಅದಾನಿ ಸಮೂಹವು ಭಾರತದ ಅಧಿಕಾರಿಗಳಿಗೆ ಭಾರೀ ಮೊತ್ತದ ಹಣ (ಲಂಚ) ನೀಡಿದೆ ಎನ್ನುವ ಆರೋಪ ಇದೆ. ಇನ್ನು ಈಗಾಗಲೇ ಈ ಬಗ್ಗೆ ಭಾರೀ ಆರೋಪಗಳು ಕೇಳಿ ಬರುತ್ತಿವೆ.

ಇದೀಗ ತಮಿಳುನಾಡಿನಲ್ಲೂ ಈ ವಿಷಯ ಭಾರೀ ಗದ್ದಲಕ್ಕೆ ಕಾರಣವಾಗಿದೆ. ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಟ್ವೀಟ್ ಮಾಡಿ ತಮಿಳುನಾಡು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಮ್ಮ ಆಡಳಿತ ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಜನರಿಂದ ಮರೆಮಾಚುವುದಕ್ಕೆ ಅಂಬಾನಿ & ಅದಾನಿ ಎಂದು ಡಿಎಂಕೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿತ್ತು. ಇದೀಗ ಡಿಎಂಕೆ ಸರಕಾರ ಹಾಗೂ ಕುಟುಂಬ ಅದಾನಿ ಕಂಪನಿ ಜತೆಗಿನ ಸಂಪರ್ಕದ ಸುದ್ದಿ ಹೊರಬಿದ್ದಿದೆ.
ಈಗ ಡಿಎಂಕೆ ಉಲ್ಟಾ ಹೊಡೆದಿದ್ದು, ಈ ವಿಷಯವನ್ನು ಮರೆಮಾಚಲು ಪ್ರಯತ್ನಿಸುತ್ತಿದೆ. ಈ ವಿಷಯದ ಬಗ್ಗೆ ತಮಿಳುನಾಡಿನ ಹಿರಿಯ ರಾಜಕೀಯ ನಾಯಕರರಾದ ಪಾಟಲಿ ಪೀಪಲ್ಸ್ ಪಾರ್ಟಿಯ (Pattali Makkal Katchi) ಸಂಸ್ಥಾಪಕ ಡಾ.ಎಸ್ ರಾಮ್ದಾಸ್ ಅವರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪ್ರತಿಕ್ರಿಯೆಯು ಸಂಪೂರ್ಣವಾಗಿ ಖಂಡನೀಯವಾಗಿದೆ ಎಂದಿದ್ದಾರೆ.
ಸ್ಟಾಲಿನ್ ಅವರು ಮರೆತಿರಬಹುದು. ಅವರ ಇಂದಿನ ಟೀಕೆಯನ್ನು ಸ್ಟಾಲಿನ್ ಹೇಗೆ ಎದುರಿಸುತ್ತಿದ್ದರು ಎಂದು ಅಂತ ಅಣ್ಣಾಮಲೈ ಹೇಳಿದ್ದಾರೆ. ರಾಜಕೀಯದಲ್ಲಿ ಡಿಎಂಕೆಯ ದ್ವಿಪಾತ್ರವನ್ನು (ಇಬ್ಭಗೆಯ ನೀತಿ) ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ಅದರಲ್ಲೂ ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ರಾಮ್ದಾಸ್ ಅವರು ಕೇಳಿದ ಪ್ರಶ್ನೆಯ ಸತ್ಯಾಸತ್ಯತೆಯನ್ನು ಎದುರಿಸಲಾಗದೆ. ಈ ರೀತಿ ಉಡಾಫೆಯ ಉತ್ತರವನ್ನು ನೀಡುವುದು ಮುಖ್ಯಮಂತ್ರಿಯ ಅಸಮರ್ಥತೆಯನ್ನು ತೋರಿಸುತ್ತದೆ. ತಮಿಳುನಾಡಿನ ಮುಖ್ಯಮಂತ್ರಿ ಹುದ್ದೆಯಲ್ಲಿ ಇರುವವರಿಗೆ ಸೂಕ್ತವಲ್ಲ ಎಂದಿದ್ದಾರೆ.
ಅವರಿಗೆ ಮಾಡೋಕೆ ಕೆಲಸ ಇಲ್ಲ
ಇನ್ನು ಅದಾನಿ ವಿಚಾರವಾಗಿ ಕೇಳಿ ಬಂದಿರುವ ಆರೋಪದ ಬಗ್ಗೆ ತಮಿಳುನಾಡಿನ ಹಿರಿಯ ರಾಜಕಾರಣಿ ರಾಮ್ದಾಸ್ ಅವರು ಪ್ರಶ್ನೆ ಮಾಡಿದ್ದಾರೆ. ಆದರೆ, ಈ ಪ್ರಶ್ನೆಗೆ ಉತ್ತರಿಸುವುದಿರಲಿ ಆ ಪ್ರಶ್ನೆಯ ಬಗ್ಗೆ ತಮಿಳುನಾಡಿನ ಸಿ.ಎಂ ಸ್ಟಾಲಿನ್ ಅವರು ವ್ಯಂಗ್ಯವಾಗಿ ಉತ್ತರಿಸಿದ್ದಾರೆ. ರಾಮ್ದಾಸ್ ಅವರಿಗೆ ಮಾಡುವುದಕ್ಕೆ ಕೆಲಸ ಇಲ್ಲ. ದಿನಾ ಒಂದಿಲ್ಲೊಂದು ಏನಾದರೂ ಮಾತನಾಡುತ್ತಾರೆ ಎಲ್ಲದಕ್ಕೂ ನನಗೆ ಉತ್ತರಿಸೋಕೆ ಆಗಲ್ಲ ಎಂದಿದ್ದಾರೆ ಎಂ.ಕೆ ಸ್ಟಾಲಿನ್.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications