Adipurush: ದೇಶದ ಕ್ಷಮೆಯಾಚಿಸಿ- ಆದಿಪುರುಷ್ ಚಿತ್ರದ ಕೀಳು ಸಂಭಾಷಣೆಗೆ ಶಿವಸೇನಾ ಕೆಂಡಾಮಂಡಲ
ಮುಂಬೈ, ಜೂನ್ 17: ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಸಂಸದೆ ಪ್ರಿಯಾಂಕಾ ಚತುರ್ವೇದಿ ಶನಿವಾರ 'ಆದಿಪುರುಷ' ನಿರ್ಮಾಪಕರ ವಿರುದ್ಧ ಸಿಡಿದೆದ್ದಿದ್ದಾರೆ. ಮಹಾಕಾವ್ಯ ರಾಮಾಯಣವನ್ನು ಆಧರಿಸಿದ ಪೌರಾಣಿಕ ಆಕ್ಷನ್ ಚಿತ್ರದಲ್ಲಿ ಬಳಸಲಾದ ಕೀಳು ಸಂಭಾಷಣೆಗಾಗಿ ನಿರ್ದೇಶಕರು, ನಿರ್ಮಾಪಕರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಚಿತ್ರದಲ್ಲಿ ಬರುವ ಹನುಮಾನ್ ದೇವರಿಗಾಗಿ ಬರೆದ ಕೀಳು ಸಂಭಾಷಣೆಗಳಿಗಾಗಿ ರಾಷ್ಟ್ರದ ಕ್ಷಮೆಯಾಚಿಸಬೇಕು ಎಂದು ಚತುರ್ವೇದಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಈ ಚಿತ್ರವನ್ನು ಆನ್ಲೈನ್ನಲ್ಲಿ ಟ್ರೋಲ್ ಮಾಡಿ ಟೀಕಿಸಲಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಹನುಮಂತನ ಸಂಭಾಷಣೆಗಳು ಕೀಳು ಮಟ್ಟದಲ್ಲಿವೆ ಎಂದು ಆರೋಪಿಸಲಾಗಿದೆ.

ಲಂಕಾ ರಾಜ ರಾವಣನ ಮಗ ಹನುಮಂತನ ಬಾಲಕ್ಕೆ ಬೆಂಕಿ ಹಚ್ಚುವ ದೃಶ್ಯವು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. 'ಕಪಡಾ ತೇರೆ ಬಾಪ್ ಕಾ, ತೇಲ್ ತೇರೆ ಬಾಪ್ ಕಾ, ಆಗ್ ಭೀ ತೇರೆ ಬಾಪ್ ಕಿ, ತೋ ಜಲೇಗಿ ಭೀ ತೇರೆ ಬಾಪ್ ಕಿ ( ಬಟ್ಟೆ ನಿಮ್ಮಪ್ಪಂದು, ಎಣ್ಣೆ ನಿಮ್ಮಪ್ಪಂದು, ಬೆಂಕಿ ನಿಮ್ಮಪ್ಪಂದು, ಉರಿಯುವುದು ನಿಮ್ಮಪ್ಪಂದು ) ಎಂಬ ಸಂಭಾಷಣೆಯು ಹನುಮ ಭಕ್ತರನ್ನು ಕೆರಳಿಸಿದೆ.
ಈ ಸಂಭಾಷಣೆಗಳಿಗೆ ಪ್ರತಿಕ್ರಿಯಿಸಿರುವ ಚತುರ್ವೇದಿ, 'ಮನರಂಜನೆಯ ಹೆಸರಿನಲ್ಲಿ ನಮ್ಮ ಪೂಜ್ಯ ದೇವರುಗಳಿಗೆ ಈ ರೀತಿಯ ಸಂಭಾಷಣೆಯನ್ನು ಬಳಸಿರುವುದು ಪ್ರತಿಯೊಬ್ಬ ಭಾರತೀಯನ ಸಂವೇದನೆಗಳಿಗೆ ನೋವುಂಟುಮಾಡುತ್ತದೆ' ಎಂದು ಬರೆದಿದ್ದಾರೆ.
'ನೀವು ಮರ್ಯಾದಾ ಪುರುಷೋತ್ತಮ ರಾಮ ಅವರ ಮೇಲೆ ಚಲನಚಿತ್ರವನ್ನು ನಿರ್ಮಿಸುತ್ತೀರಿ. ಬಾಕ್ಸ್ ಆಫೀಸ್ ಯಶಸ್ಸಿಗಾಗಿ ಮರ್ಯಾದೆಯ ಎಲ್ಲಾ ಗಡಿಗಳನ್ನು ದಾಟುವುದು ಸ್ವೀಕಾರಾರ್ಹವಲ್ಲ' ಎಂದು ಅವರು ಹೇಳಿದ್ದಾರೆ.
ಏತನ್ಮಧ್ಯೆ, ಬಲಪಂಥೀಯ ಸಂಘಟನೆಯಾದ ಹಿಂದೂ ಸೇನೆಯು 'ಆದಿಪುರುಷ' ಚಿತ್ರಕ್ಕೆ ಸಾರ್ವಜನಿಕ ಪ್ರದರ್ಶನಕ್ಕೆ ಪ್ರಮಾಣಪತ್ರ ನೀಡದಂತೆ ಒತ್ತಾಯಿಸಿ ದೆಹಲಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ಈ ಚಿತ್ರವು ಧಾರ್ಮಿಕ ಮುಖಂಡರು/ಪಾತ್ರಗಳು/ಆಕೃತಿಗಳನ್ನು ಅಸಮರ್ಪಕವಾಗಿ ಮತ್ತು ಅನುಚಿತವಾಗಿ ಚಿತ್ರಿಸುವ ಮೂಲಕ ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಇದನ್ನು ಓಂ ರಾವುತ್ ನಿರ್ದೇಶಿಸಿದ್ದಾರೆ ಮತ್ತು ಭೂಷಣ್ ಕುಮಾರ್ ನಿರ್ಮಿಸಿದ್ದಾರೆ, ಆದಿಪುರುಷ ಹಿಂದೂ ಮಹಾಕಾವ್ಯ ರಾಮಾಯಣವನ್ನು ಆಧರಿಸಿದೆ. ಬಾಹುಬಲಿ ಖ್ಯಾತಿಯ ಪ್ರಭಾಸ್ ಭಗವಾನ್ ರಾಮನಾಗಿ, ಕೃತಿ ಸನೋನ್ ಸೀತೆಯಾಗಿ ಮತ್ತು ಸನ್ನಿ ಸಿಂಗ್ ಲಕ್ಷ್ಮಣನಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಸೈಫ್ ಅಲಿ ಖಾನ್ ರಾವಣನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಬಿಡುಗಡೆಗೂ ಮುನ್ನ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ಹಲವು ಬಿಜೆಪಿ ನಾಯಕರು ಚಿತ್ರದ ಯಶಸ್ಸಿಗೆ ಹರಸಿದ್ದರು.
-
ಶೂಟಿಂಗ್ ವೇಳೆ ನನ್ನ ಖಾಸಗಿ ಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ನಟಿ ಮೊನಾಲಿಸಾ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications