ಯುಪಿಎಸ್ಸಿ ಅಂತಿಮ ಫಲಿತಾಂಶ ಪ್ರಕಟ: ಆದಿತ್ಯ ಶ್ರೀವಾಸ್ತವ ಟಾಪರ್
ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್ಸಿ) 2023 ರ ನಾಗರಿಕ ಸೇವಾ ಪರೀಕ್ಷೆ (CSE) ಅಂತಿಮ ಫಲಿತಾಂಶಗಳನ್ನು ಪ್ರಕಟಿಸಿದೆ. ಆದಿತ್ಯ ಶ್ರೀವಾಸ್ತವ ಅಖಿಲ ಭಾರತೀಯ ಮೊದಲ ರ್ಯಾಂಕ್ ಗಳಿಸಿದ್ದಾರೆ, ಅನಿಮೇಶ್ ಪ್ರಧಾನ್ ಎರಡನೇ ರ್ಯಾಂಕ್ ಗಳಿಸಿದ್ದು, ಅನನ್ಯಾ ರೆಡ್ಡಿ 3ನೇ ರ್ಯಾಂಕ್ ಗಳಿಸಿದ್ದಾರೆ.
ಒಟ್ಟು 1016 ಅಭ್ಯರ್ಥಿಗಳ ನೇಮಕಕ್ಕೆ ಶಿಫಾರಸ್ಸು ಮಾಡಲಾಗಿದೆ. 347 ಮಂದಿ ಸಾಮಾನ್ಯ ವರ್ಗದವರಾಗಿದ್ದು, 115 ಮಂದಿ ಆರ್ಥಿಕ ದುರ್ಬಲ ವರ್ಗ (EWS) ಕ್ಕೆ ಸೇರಿದವರಾಗಿದ್ದಾರೆ. ಒಬಿಸಿ ರ್ವದ 303 ಮಂದಿ ಆಯ್ಕೆಯಾಗಿದ್ದರೆ, 165 ಎಸ್ಸಿ ಮತ್ತು 86 ಮಂದಿ ಎಸ್ಟಿ ವರ್ಗದಿಂದ ಬಂದವರಾಗಿದ್ದಾರೆ.

ಯುಪಿಎಸ್ಸಿ ಒಟ್ಟು 1143 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಶಿಫಾರಸು ಮಾಡಿದ 355 ಅಭ್ಯರ್ಥಿಗಳ ಉಮೇದುವಾರಿಕೆಯನ್ನು ತಾತ್ಕಾಲಿಕವಾಗಿ ಇರಿಸಲಾಗಿದೆ ಎಂದು ಆಯೋಗವು ಅಧಿಕೃತ ಸೂಚನೆಯಲ್ಲಿ ತಿಳಿಸಿದೆ.
ಒಟ್ಟು 180 ಅಭ್ಯರ್ಥಿಗಳು ಐಎಎಸ್ಗೆ ಆಯ್ಕೆಯಾಗಿದ್ದಾರೆ; ಐಪಿಎಸ್ಗೆ 200 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಮತ್ತು ಐಎಫ್ಎಸ್ಗೆ 37 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಈ ಪರೀಕ್ಷೆಗಳ ಮೂಲಕ ಕೇಂದ್ರ ಸರ್ಕಾರದ ವಿವಿಧ ಗ್ರೇಡ್ ಎ ಹುದ್ದೆಗಳಿಗೆ 613 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಗ್ರೇಡ್ ಬಿ ಹುದ್ದೆಗಳಿಗೆ ಒಟ್ಟು 113 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
IAS Topper AIR-1
— Aashutosh pathak (@spathak81317822) April 16, 2024
Aditya Srivastava
Reaction after result#UPSC2023 #UPSC#UPSC2024 pic.twitter.com/pyvPEtPxbX
ಯುಪಿಎಸ್ಸಿ 2023 ಅಗ್ರ ರ್ಯಾಂಕ್ ಪಡೆದವರ ಪಟ್ಟಿ
ಮೊದಲನೇ ರ್ಯಾಂಕ್ - ಆದಿತ್ಯ ಶ್ರೀವಾಸ್ತವ
ಎರಡನೇ ರ್ಯಾಂಕ್ - ಅನಿಮೇಶ್ ಪ್ರಧಾನ್
ಮೂರನೇ ರ್ಯಾಂಕ್ - ಡೋಣೂರು ಅನನ್ಯಾ ರೆಡ್ಡಿ
ನಾಲ್ಕನೇ ರ್ಯಾಂಕ್ - ಪಿ ಕೆ ಸಿದ್ಧಾರ್ಥ್ ರಾಮ್ಕುಮಾರ್
ಐದನೇ ರ್ಯಾಂಕ್ - ರುಹಾನಿ
ಆರನೇ ರ್ಯಾಂಕ್ - ಸೃಷ್ಟಿ ದಾಬಾಸ್
ಏಳನೇ ರ್ಯಾಂಕ್ - ಅನ್ಮೋಲ್ ರಾಥೋರ್
ಎಂಟನೇ ರ್ಯಾಂಕ್ - ಆಶಿಶ್ ಕುಮಾರ್
ಒಂಭತ್ತನೇ ರ್ಯಾಂಕ್ - ನೌಶೀನ್
10ನೇ ರ್ಯಾಂಕ್ - ಐಶ್ವರ್ಯಂ ಪ್ರಜಾಪ್ರತಿ
ಲಕ್ನೋದ ಆದಿತ್ಯ ಶ್ರೀವಾಸ್ತವ ಮೊದಲ ಸ್ಥಾನ
ಆದಿತ್ಯ ಶ್ರೀವಾಸ್ತವ ಲಕ್ನೋದವರಾಗಿದ್ದಾರೆ. ಅಕ್ಟೋಬರ್ 2017ರಲ್ಲಿ ನಾಗರಿಕ ಸೇವಾ ಪರೀಕ್ಷೆ (CSE) ತಯಾರಿ ಆರಂಭಿಸಿದರು. 2022 ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಐಪಿಎಸ್ಗೆ ಆಯ್ಕೆಯಾದರು. 2022ರಲ್ಲಿ ಅವರು 216 ನೇ ಸ್ಥಾನದಲ್ಲಿದ್ದರು. ಪ್ರಸ್ತುತ, ಶ್ರೀವಾಸ್ತವ ಅವರು ಬಂಗಾಳ ಕೇಡರ್ಗೆ ಸೇರಿದ ಐಪಿಎಸ್ ಅಧಿಕಾರಿಯಾಗಲು ತರಬೇತಿ ಪಡೆಯುತ್ತಿದ್ದಾರೆ.
ಯುಪಿಎಸ್ಸಿ ಪರೀಕ್ಷೆ ಫಲಿತಾಂಶ ನೋಡುವುದೇಗೆ?
ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಆಯೋಗದ ಅಧಿಕೃತ ವೆಬ್ಸೈಟ್ upsc.gov.in ನಲ್ಲಿ ಫಲಿತಾಂಶಗಳನ್ನು ನೋಡಬಹುದು. ಅರ್ಹತೆ ಪಡೆದ ಅಭ್ಯರ್ಥಿಗಳ ಪಿಡಿಎಫ್ ಫೈಲ್ ಮತ್ತು ಅವರ ನೋಂದಣಿ ಸಂಖ್ಯೆಗಳನ್ನು ಒಳಗೊಂಡಿದೆ.
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications