ಆಡಳಿತಾಧಿಕಾರಿ ಲಕ್ಷದ್ವೀಪ ಸಂಸ್ಕೃತಿ ಅರಿಯುವ ಕೆಲಸ ಎಂದಿಗೂ ಮಾಡಿಲ್ಲ: ಸಂಸದ
ನವದೆಹಲಿ, ಮೇ 31: ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಖೋಡೆ ಪಟೇಲ್ ಎಂದಿಗೂ ಲಲಕ್ಷದ್ವೀಪದ ಸಂಸ್ಕೃತಿಯನ್ನು ಅರಿಯುವ ಕೆಲಸ ಎಂದಿಗೂ ಮಾಡಲೇ ಇಲ್ಲ ಎಂದು ಸಂಸದ ಮೊಹಮ್ಮದ್ ಫೈಜಲ್ ಅಸಾಮಾಧಾನ ವ್ಯಕ್ತಪಡಿಸಿದ್ದಾರೆ.
ಲಕ್ಷದ್ವೀಪದ ಆಡಳಿತಾಧಿಕಾರಿಕಳೆದ ಐದು ತಿಂಗಳಿನಿಂದ 15-20 ದಿನವಷ್ಟೇ ಅಲ್ಲಿಗೆ ಭೇಟಿ ನೀಡಿದ್ದಾರೆ, ಸ್ಥಳೀಯ ಪರಿಸರ ಸಂಸ್ಕೃತಿಯನ್ನು ಅರಿಯುವ ಕೆಲಸ ಮಾಡಲೇ ಇಲ್ಲ.
ಆಡಳಿತಾಧಿಕಾರಿ ಸ್ಥಾನದಿಂದ ಪ್ರಫುಲ್ ಪಟೇಲ್ ಅವರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಿರುವ ಎನ್ಸಿಪಿ ಮುಖಂಡರೂ ಆದ ಫೈಜಲ್, ಕರಡು ಮಸೂದೆಗಳಿಗೆ ಎಲ್ಲಾ ಕ್ಷೇತ್ರಗಳಿಂದ ವಿರೋಧ ವ್ಯಕ್ತವಾಗಿದೆ. ಸ್ಥಳೀಯ ಬಿಜೆಪಿ ಮುಖಂಡರೂ ಅವರ ವಿರುದ್ಧ ಇದ್ದಾರೆ ಎಂದರು.
ಸ್ಥಳೀಯರು ಮತ್ತು ಮುಖಂಡರ ಅಭಿಪ್ರಾಯವನ್ನು ಪಡೆಯದೇ ಪಟೇಲ್ ಅವರು ಏಕಪಕ್ಷೀಯ ತೀರ್ಮಾನ ತೆಗೆದುಕೊಳ್ಳುತ್ತಿದ್ದಾರೆ ಎಂದು ದೂರಿದ ಅವರು, ದಿನೇಶ್ವರ ಶರ್ಮಾ ಅವರ ನಿಧನದ ಬಳಿಕ ಕಳೆದ ವರ್ಷ ಡಿಸೆಂಬರ್ನಲ್ಲಿ ಪಟೇಲ್ ಅವರಿಗೆ ಆಡಳಿತಾಧಿಕಾರಿ ಜವಾಬ್ದಾರಿ ನೀಡಲಾಗಿತ್ತು.

ಕೇಂದ್ರ ಸರ್ಕಾರ ತರಲು ಉದ್ದೇಶಿಸಿರುವ ಲಕ್ಷದ್ವೀಪ ಅಭಿವೃದ್ಧಿ ನಿಯಂತ್ರಣ ಪ್ರಾಧಿಕಾರ ಮತ್ತು ಲಕ್ಷದ್ವೀಪ ಸಮಾಜವಿರೋಧಿ ಚಟುವಟಿಕೆ ನಿಯಂತ್ರಣ ಕಾಯ್ದೆ ಕುರಿತಂತೆ ಸ್ಥಳೀಯವಾಗ ನಿವಾಸಿಗಳಲ್ಲಿಆತಂಕ ವ್ಯಕ್ತವಾಗಿದೆ ಎಂದರು.
ವಿವಾದಕ್ಕೆ ಕಾರಣವಾದ ಅಂಶಗಳು
-ಮುಸ್ಲಿಂ ಸಮುದಾಯ ಅಧಿಕವಾಗಿರುವ ಲಕ್ಷದ್ವೀಪದಲ್ಲಿ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ಜಾರಿಗೆ ತಂದಿರುವ ನೀತಿ ವಿವಾದಕ್ಕೆ ಕಾರಣವಾಗಿದೆ
-ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಗೋ ಮಾಂಸ ಮಾರಾಟ ನಿಷೇಧ
-ಅಪರಾಧ ಪ್ರಕರಣ ಕಡಿಮೆ ಇರುವ ದ್ವೀಪದಲ್ಲಿ ಗೂಂಡಾ ಕಾಯ್ದೆ ಜಾರಿ
-ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಪಂಚಾಯತ್ ಆಕಾಂಕ್ಷಿಗಳಿಗೆ ಅನರ್ಹಗೊಳಿಸಬೇಕು
-ಅಭಿವೃದ್ಧಿ ಯೋಜನೆಗಳಿಗಾಗಿ ಖಾಸಗಿಯವರಿಂದ ಭೂಮಿ ವಶಪಡಿಸಿಕೊಳ್ಳಲು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ
-ಲಕ್ಷದ್ವೀಪಾಭಿವೃದ್ಧಿ ಪ್ರಾಧಿಕಾರ 2021 ರಚನೆ
-ಲಕ್ಷದ್ವೀಪದಲ್ಲಿ ಮದ್ಯ ಮಾರಾಟ ನಿಷೇಧ ತೆರವು
-ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications