ಪ್ರಫುಲ್ ಖೋಡಾ ಪಟೇಲ್ ವಿರುದ್ಧ ಲಕ್ಷದ್ವೀಪದಲ್ಲಿ ಪ್ರತಿಭಟನೆ
ಹೊಸ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರ ನಿರಂಕುಶವಾದಿ ನಡೆಯನ್ನು ವಿರೋಧಿಸಿ ಲಕ್ಷದ್ವೀಪದಲ್ಲಿ ಪ್ರತಿಭಟನೆ ಶುರುವಾಗಿದೆ.
ಪ್ರಫುಲ್ ಖೋಡಾ ಪಟೇಲ್ ಅವರ ನಡೆಯಿಂದ ಸ್ಥಳೀಯ ಸಂಸ್ಕೃತಿ ಹಾಗೂ ಶಾಂತಿ ಹಾಳಾಗಲಿದೆ ಎಂದು ಸ್ಥಳೀಯ ನಾಯಕರು ಆರೋಪಿಸಿದ್ದಾರೆ. ಮುಂಬರುವ ದಿನಗಳಲ್ಲಿ ರಾಜೀನಾಮೆ ನೀಡುವವರ ಸಂಖ್ಯೆ ಹೆಚ್ಚಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ವಿರೋಧ ಪಕ್ಷವು #SaveLakshadweepಎನ್ನುವ ಶೀರ್ಷಿಕೆಯಲ್ಲಿ ಸಹಿಯನ್ನು ಸಂಗ್ರಹ ಮಾಡುತ್ತಿದೆ, ಜತೆಗೆ ಪ್ರತಿಭಟನೆ ಹಮ್ಮಿಕೊಂಡಿದೆ. ಲಕ್ಷದ್ವೀಪ ಬಿಜೆಪಿಗೆ ಹಿನ್ನಡೆಯುಂಟಾಗಿದ್ದು ಕನಿಷ್ಟ 8 ಮಂದಿ ಪದಾಧಿಕಾರಿಗಳು ಪಕ್ಷವನ್ನು ತೊರೆದಿದ್ದಾರೆ.

ಇಬ್ಬರೂ ನಾಯಕರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಲಕ್ಷದ್ವೀಪದಲ್ಲಿ ಉಂಟಾಗಿರುವ ಸಮಸ್ಯೆಯನ್ನು ಮುಸ್ಲಿಂ ಸಂಘಟನೆಗಳು ಹಾಗೂ ಕೇರಳದಲ್ಲಿನ ಎಡಪಕ್ಷಗಳು ಸೃಷ್ಟಿಸಿವೆ ಎಂದು ಹೇಳಿದ್ದಾರೆ. "ಪಟೇಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿಯ ಕನಸುಗಳನ್ನು ಲಕ್ಷದ್ವೀಪದಲ್ಲಿ ಜಾರಿಗೊಳಿಸಲು ಯತ್ನಿಸುತ್ತಿದ್ದಾರೆ" ಎಂದು ಅಬ್ದುಲ್ಲಾ ಕುಟ್ಟಿ ಹೇಳಿದ್ದಾರೆ.
ಮಾಜಿ ರಾಜ್ಯ ಉಪಾಧ್ಯಕ್ಷ ಎಂಸಿ ಮುತ್ತುಕೋಯ, ಖಜಾಂಚಿ ಬಿ.ಶುಕ್ಕೋರ್, ಬಿಜೆವೈಎಂ ನ ಮಾಜಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಹಸೀಮ್ ರಾಜೀನಾಮೆ ನೀಡಿರುವ ನಾಯಕರ ಪೈಕಿ ಪ್ರಮುಖರಾಗಿದ್ದಾರೆ
ಜನವಿರೋಧಿ ಆಡಳಿತದ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಪ್ರತಿಕ್ರಿಯೆಯನ್ನು ನೀಡದೇ ಇರುವುದರ ಬಗ್ಗೆ ಗಮನ ಸೆಳೆಯುವುದಕ್ಕಾಗಿ ರಾಜೀನಾಮೆ ನೀಡಿರುವುದಾಗಿ ಸ್ಥಳೀಯ ಬಿಜೆಪಿ ನಾಯಕರು ಹೇಳಿದ್ದಾರೆ.
ಲಕ್ಷದ್ವೀಪದಲ್ಲಿ ಬಿಜೆಪಿ ನಾಯಕರು ರಾಜೀನಾಮೆ ನೀಡುತ್ತಿರುವುದು ಕೇರಳದ ಬಿಜೆಪಿ ನಾಯಕರಿಗೂ ಸಂಘಟನಾತ್ಮಕ ದೃಷ್ಟಿಯಿಂದ ಉಂಟಾಗಿರುವ ಬಹುದೊಡ್ಡ ಹಿನ್ನಡೆಯಾಗಿದೆ. ರಾಷ್ಟ್ರೀಯ ಉಪಾಧ್ಯಕ್ಷ ಎಪಿ ಅಬ್ದುಲ್ಲಾ ಕುಟ್ಟಿ ಲಕ್ಷದ್ವೀಪದ ಉಸ್ತುವಾರಿಯಾಗಿದ್ದು, ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ಗೂ ಇದು ಹಿನ್ನೆಡೆಯಾಗಿದೆ.
-
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications