ಮದುವೆ ಪಾವಿತ್ರ್ಯ ಉಳಿಯಲು ಅಕ್ರಮ ಸಂಬಂಧವನ್ನು ಅಪರಾಧವೆಂದು ಪರಿಗಣಿಸಿ
Recommended Video

ನವದೆಹಲಿ, ಜುಲೈ 11: ಅಕ್ರಮ ಸಂಬಂಧದ ಪ್ರಕರಣಗಳನ್ನು ತಪ್ಪು ಎಂದೇ ಪರಿಗಣಿಸಬೇಕು. ಹೀಗೆ ಮಾಡುವುದರಿಂದ ಮದುವೆಯ ಪಾವಿತ್ರ್ಯ ಉಳಿಯುತ್ತದೆ ಎಂದು ಕೇಂದ್ರ ಸರಕಾರವು ಬುಧವಾರ ಸುಪ್ರೀಂ ಕೋರ್ಟ್ ಗೆ ಹೇಳಿದೆ.
ಪತ್ನಿಯನ್ನು ಹೊರತುಪಡಿಸಿ ಇತರ ಮಹಿಳೆ ಜತೆಗೆ ಲೈಂಗಿಕ ಸಂಬಂಧ ಹೊಂದಿದ್ದರೆ ಐಪಿಸಿ ಸೆಕ್ಷನ್ 497ರ ಅಡಿಯಲ್ಲಿ ಪುರುಷನದು ಮಾತ್ರ ಅಪರಾಧವಾಗುತ್ತದೆ. ಸೆಕ್ಷನ್ 497 ಜಾರಿಗೆ ತಂದಿದ್ದು ಮದುವೆಯ ಪವಿತ್ರ ಸಂಬಂಧವನ್ನು ರಕ್ಷಿಸುವ ಸಲುವಾಗಿ. ಅದರಲ್ಲೇನಾದರೂ ಬದಲಾವಣೆ ತಂದುಬಿಟ್ಟರೆ ಮದುವೆ ಬಾಂಧವ್ಯಕ್ಕೆ ಕುತ್ತು ತಂದಂತೆ ಆಗುತ್ತದೆ ಎಂದು ಅಭಿಪ್ರಾಯ ಪಟ್ಟಿದೆ.
ವಿವಾಹಿತ ಪುರುಷನ ಮತ್ತೊಬ್ಬ ವ್ಯಕ್ತಿಯ ಪತ್ನಿ ಜತೆಗೆ ಒಪ್ಪಿಗೆಯ ಲೈಂಗಿಕ ಸಂಬಂಧವನ್ನು ಇರಿಸಿಕೊಂಡರೆ ಅದಕ್ಕೆ ಐಪಿಸಿ ಅಡಿಯಲ್ಲಿ ಪುರುಷನಿಗೆ ಮಾತ್ರ ಇರುವ ಶಿಕ್ಷೆಯ ಬಗ್ಗೆ, 157 ವರ್ಷದ ಹಳೆಯ ಲಿಂಗ ಅಸಮಾನತೆ ವಿಚಾರದ ಸಾಂವಿಧಾನಿಕ ಮಾನ್ಯತೆ ಪರಿಶೀಲಿಸಲು ಕಳೆದ ಡಿಸೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿತ್ತು.

ಪ್ರಕರಣಗಳಲ್ಲಿ ಗಂಡು- ಹೆಣ್ಣು ಇಬ್ಬರನ್ನೂ ಸಮಾನವಾಗಿ ಜವಾಬ್ದಾರಿ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಗೆ ಕೇಂದ್ರ ಸರಕಾರ ಅಫಿಡವಿಟ್ ಸಲ್ಲಿಸಿತ್ತು.
ಸೆಕ್ಷನ್ 497ರ ಪ್ರಕಾರ, ಯಾವುದೇ ಪುರುಷ ಮತ್ತೊಬ್ಬ ಪುರುಷನ ಪತ್ನಿಯ ಜತೆ ಒಪ್ಪಿಗೆಯ ಲೈಂಗಿಕ ಸಂಬಂಧ ಹೊಂದಿದ್ದರೆ ಅದು ಅತ್ಯಾಚಾರ ಆಗುವುದಿಲ್ಲ. ಅದನ್ನು ವ್ಯಭಿಚಾರ ಎಂದು ಪರಿಗಣಿಸಲಾಗುತ್ತದೆ. ಈ ಅಪರಾದಕ್ಕೆ ಐದು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಅಥವಾ ದಂಡ ಅಥವಾ ಜೈಲು ಶಿಕ್ಷೆ ಮತ್ತು ದಂಡ ಎರಡೂ ವಿಧಿಸಬಹುದು. ಅಂಥ ಸಂದರ್ಭಗಳಲ್ಲಿ ಮಹಿಳೆಯನ್ನು ತಪ್ಪಿಗೆ ಪ್ರೋತ್ಸಾಹಿಸಿದ್ದಕ್ಕೆ ಶಿಕ್ಷಿಸಲು ಸಾಧ್ಯವಿಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications