ಅಸಲಿಗೆ ಅಯೋಧ್ಯೆಯಲ್ಲಿ ಕರಸೇವಕರನ್ನು ಪ್ರಚೋದಿಸಿದ್ದು ಅಡ್ವಾಣಿಯಲ್ಲ, ನಾನು
ಬಾಬ್ರಿ ಮಸೀದಿ ಧ್ವಂಸದ ವಿದ್ಯಮಾನದಲ್ಲಿ ಕರಸೇವಕರನ್ನು ಪ್ರಚೋದಿಸಿದ್ದು ನಾವೇ ಹೊರತು, ಅಡ್ವಾಣಿ ಅಥವಾ ಮುರುಳಿ ಮನೋಹರ್ ಜೋಶಿ ಅಲ್ಲ ಎಂದು ಮಾಜಿ ಬಿಜೆಪಿ ಸಂಸದರೊಬ್ಬರು ಹೇಳಿಕೆ ನೀಡಿದ್ದಾರೆ.
ನವದೆಹಲಿ, ಏ 22: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸುಪ್ರೀಂಕೋರ್ಟ್ ಮರುಜೀವ ನೀಡಿದ ಹಿನ್ನಲೆಯಲ್ಲಿ, ಅಂದಿನ ಘಟನೆಯನ್ನು ಮೆಲುಕು ಹಾಕಿಕೊಂಡಿರುವ ಮಾಜಿ ಬಿಜೆಪಿ ಸಂಸದರೊಬ್ಬರು, ಕರಸೇವಕರನ್ನು ಪ್ರಚೋದಿಸಿದ್ದು ಅಡ್ವಾಣಿಯಲ್ಲ ಬದಲಿಗೆ ನಾನು ಎಂದಿದ್ದಾರೆ.
ಮಾಜಿ ಬಿಜೆಪಿ ಸಂಸದ ರಾಂ ವಿಲಾಸ್ ವೇದಾಂತಿ ಈ ಬಗ್ಗೆ ಮಾತನಾಡುತ್ತಾ, ಅಂದು ಕರಸೇವಕರನ್ನು ಜೈಶ್ರೀರಾಮ್ ಎಂದು ಪ್ರಚೋದಿಸಿದ್ದು ನಾನೇ ಹೊರತು, ಅಡ್ವಾಣಿಯಲ್ಲ. ವಿವಾದಿತ ಪೂಜಾಕೇಂದ್ರ ಧ್ವಂಸ ಮಾಡಲು ನಾನು ಮತ್ತು ಪರಿವಾರದ ಇತರ ಮುಖಂಡರೇ ಕರಸೇವಕರನ್ನು ಹುರಿದುಂಬಿಸಿದ್ದು ಎಂದು ರಾಂ ವಿಲಾಸ್ ಹೇಳಿದ್ದಾರೆ. (ಅಡ್ವಾಣಿ ವಿರುದ್ದ ಮೋದಿ ಕುತಂತ್ರದ ಫಲ)

ಶುಕ್ರವಾರ ( ಏ21) ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇದಾಂತಿ, ಹೇಗಾದರೂ ಮಾಡಿ ಅದನ್ನು ಕೆಡವಿ ಎಂದು ಕರಸೇವಕರನ್ನು ಪ್ರಚೋದಿಸುತ್ತಾ ಹುರಿದುಂಬಿಸುತ್ತಿದ್ದೆವು. ಈ ವಿಷಯಕ್ಕೆ ಸಂಬಂಧಿಸಿದಂತೆ ನಾನು ಗಲ್ಲುಶಿಕ್ಷೆ ಅನುಭವಿಸಲೂ ಸಿದ್ದನಾಗಿದ್ದೇನೆಂದು ವೇದಾಂತಿ ಹೇಳಿದ್ದಾರೆ.
ಬಾಬ್ರಿ ಮಸೀದಿ ಧ್ವಂಸ ವಿಚಾರದಲ್ಲಿ ಅಡ್ವಾಣಿಯಾಗಲಿ, ಮುರುಳಿ ಮನೋಹರ ಜೋಶಿಯ ಪಾತ್ರ ಇದರಲ್ಲಿಲ್ಲ. ನಾನು, ಅಶೋಕ್ ಸಿಂಘಾಲ್, ಮಹಾಂತ ಆದಿತ್ಯನಾಥ್ ಮುಂತಾದವರು ಕರಸೇವಕರನ್ನು ಪ್ರಚೋದಿಸಿದ್ದು ಎಂದು ವೇದಾಂತಿ ಹೇಳಿದ್ದಾರೆ.
25ವರ್ಷಗಳ ಹಿಂದಿನ ಘಟನೆಯ ಬಗ್ಗೆ ಮಾತನಾಡುತ್ತಿದ್ದ ವೇದಾಂತಿ, ಡಿಸೆಂಬರ್ 6, 1992ರಂದು ಅಡ್ವಾಣಿ ಮತ್ತು ಜೋಶಿ ಕರಸೇವಕರನ್ನು ಮಸೀದಿಯಿಂದ ಕೆಳಗಿಳಿಯಿರಿ ಎಂದು ಕೇಳಿಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ.
ಕೇಸಿಗೆ ಕೋರ್ಟ್ ಮರುಜೀವ ನೀಡಿದ ಹಿನ್ನಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸುತ್ತಿದ್ದ ಅಡ್ವಾಣಿಯವರ ಮಾಜಿ ಆಪ್ತ ಸುಧೀಂದ್ರ ಕುಲ್ಕರ್ಣಿ, ಬಿಜೆಪಿ ಮುಖಂಡರು ಬಾಬ್ರಿ ಮಸೀದಿ ಧ್ವಂಸ ಮಾಡಬೇಡಿ ಎಂದು ಕರಸೇವಕರ ಮನವೊಲಿಸುತ್ತಿದ್ದರು. ಅಡ್ವಾಣಿಗೂ ಬಾಬ್ರಿ ಮಸೀದಿ ಧ್ವಂಸಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಕುಲ್ಕರ್ಣಿ ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications