ಪ್ರೈಮ್ ಟೈಮ್ನಲ್ಲಿ 4 ಸಹಾಯವಾಣಿ ಪ್ರಸಾರ ಮಾಡಲು ಸೂಚನೆ
ನವದೆಹಲಿ, ಮೇ 31: ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಇಂದು ಎಲ್ಲಾ ಖಾಸಗಿ ಟೆಲಿವಿಶನ್ ವಾಹಿನಿಗಳಿಗೆ ಸಲಹಾ ಸೂಚಿಯನ್ನು ನೀಡಿದ್ದು ಅದರಲ್ಲಿ ಈ ಕೆಳಗಿನ ರಾಷ್ಟ್ರೀಯ ಸಹಾಯವಾಣಿ ಸಂಖ್ಯೆಗಳ ಬಗ್ಗೆ ಜಾಗೃತಿಯನ್ನು ಮೂಡಿಸಲು ವಿಶೇಷವಾಗಿ ಪ್ರೈಮ್ ಟೈಮ್ನಲ್ಲಿ ಕಾಲಬದ್ಧ ಮಧ್ಯಂತರಗಳಲ್ಲಿ ಆಗಾಗ ಟಿಕ್ಕರ್ (ಸೂಕ್ತ ಲಯಬದ್ಧ ಸದ್ದು) ಅಥವಾ ಸೂಕ್ತ ಕಂಡ ರೀತಿಯಲ್ಲಿ ಸಹಾಯವಾಣಿ ಸಂಖ್ಯೆಗಳನ್ನು ಪ್ರದರ್ಶಿಸಬೇಕು ಎಂದು ಹೇಳಿದೆ.
1075: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ಸಹಾಯವಾಣಿ ಸಂಖ್ಯೆ
1098: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಮಕ್ಕಳ ಸಹಾಯವಾಣಿ ಸಂಖ್ಯೆ.
14567: ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಸಚಿವಾಲಯದ ಹಿರಿಯ ನಾಗರಿಕರ ಸಹಾಯವಾಣಿ ಸಂಖ್ಯೆ.
(ಎನ್.ಸಿ.ಟಿ. ದೆಹಲಿ, ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ)

08046110007: ಮಾನಸಿಕ ಬೆಂಬಲಕ್ಕಾಗಿ ನಿಮ್ಹಾನ್ಸ್ ಸಹಾಯವಾಣಿ ಸಂಖ್ಯೆ.
ನಾಗರಿಕರ ಉಪಯೋಗಕ್ಕಾಗಿ ಸರಕಾರವು ಈ ರಾಷ್ಟ್ರೀಯ ಸಹಾಯವಾಣಿ ಸಂಖ್ಯೆಗಳನ್ನು ರೂಪಿಸಿ ಪ್ರಚಾರಪಡಿಸುತ್ತಿದೆ.
ಕಳೆದ ಕೆಲವು ತಿಂಗಳಿನಿಂದ ಸರಕಾರವು ವಿವಿಧ ಸಲಕರಣೆಗಳು ಮತ್ತು ಮಾಧ್ಯಮ ವೇದಿಕೆಗಳ ಮೂಲಕ ಜಾಗೃತಿಯನ್ನು ಮೂಡಿಸುತ್ತಿದೆ. ಮುದ್ರಣ, ಟಿ.ವಿ., ರೇಡಿಯೋ ಸಾಮಾಜಿಕ ಮಾಧ್ಯಮಗಳು ಇತ್ಯಾದಿಗಳ ಮೂಲಕ ಮೂರು ಸಂಕೀರ್ಣ ವಿಷಯಗಳಾದ -ಕೋವಿಡ್ ಚಿಕಿತ್ಸಾ ಶಿಷ್ಟಾಚಾರ, ಕೋವಿಡ್ ಸಮುಚಿತ ವರ್ತನೆ ಮತ್ತು ಲಸಿಕಾಕರಣಗಳ ಬಗ್ಗೆ ಜಾಗೃತಿಯನ್ನು ಮೂಡಿಸುತ್ತಿದೆ ಎಂಬುದನ್ನು ಸಲಹಾಸೂಚಿಯು ಪ್ರಮುಖವಾಗಿ ಪ್ರಸ್ತಾಪಿಸಿದೆ.
ಸಲಹಾಸೂಚಿಯು ಸಾಂಕ್ರಾಮಿಕದ ವಿರುದ್ಧದ ಸರಕಾರದ ಹೋರಾಟದ ಪ್ರಯತ್ನಗಳಿಗೆ ಪೂರಕವಾಗಿ ಖಾಸಗಿ ಟಿ.ವಿ. ವಾಹಿನಿಗಳು ಪ್ರಮುಖವಾದ ಪಾತ್ರವನ್ನು ವಹಿಸಿರುವುದನ್ನು ಶ್ಲಾಘಿಸಿದೆ. ಜನತೆಯಲ್ಲಿ ಸಾಂಕ್ರಾಮಿಕದ ಬಗ್ಗೆ ಜಾಗೃತಿ ಮೂಡಿಸಿದ್ದಲ್ಲದೆ ಮೇಲ್ಕಾಣಿಸಿದ ಮೂರು ವಿಷಯಗಳ ಬಗ್ಗೆಯೂ ಜನತೆಗೆ ತಿಳಿಯಪಡಿಸಿವೆ ಎಂದಿರುವ ಸಲಹಾ ಸೂಚಿಯು ಈ ನಿಟ್ಟಿನಲ್ಲಿ ಖಾಸಗಿ ಟಿ.ವಿ. ವಾಹಿನಿಗಳು ನಾಲ್ಕು ರಾಷ್ಟ್ರೀಯ ಮಟ್ಟದ ಸಹಾಯವಾಣಿ ಸಂಖ್ಯೆಗಳ ಬಗ್ಗೆ ಜಾಗೃತಿಯನ್ನು ಮೂಡಿಸುವಂತೆ ಮನವಿ ಮಾಡಿದೆ. (ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಪ್ರಕಟಣೆ)
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications