ತೀರ್ಪಿನ ನಂತರ ದಯಾಮರಣದ ಅರ್ಜಿ ಸ್ವೀಕರಿಸಿದ ಮೊದಲ ವಕೀಲೆ
ಕಾನ್ಪುರ, ಮಾರ್ಚ್ 22: ದಯಾಮರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ತೀರ್ಪಿಗೆ ಸಂಬಂಧಿಸಿದಂತೆ ಮೊದಲ ಅರ್ಜಿಯನ್ನು ಉತ್ತರ ಪ್ರದೇಶದ ಕಾನ್ಪುರದ ವಕೀಲೆಯೊಬ್ಬರು ಪಡೆದಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಗೌರವಪೂರ್ವಕವಾಗಿ ಸಾಯುವ ಹಕ್ಕು ಪ್ರತಿ ವ್ಯಕ್ತಿಗೂ ಇದೆ ಎನ್ನುವ ಮೂಲಕ, ಮಾ.9 ರಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಪರೋಕ್ಷ ದಯಾಮರಣಕ್ಕಾಗಿ ಯಾವುದೇ ವ್ಯಕ್ತಿಯ ಕುಟುಂಬಸ್ಥರಿ ಅರ್ಜಿ ಸಲ್ಲಿಸಿ, ಕೋರ್ಟ್ ಮೆಟ್ಟಿಲೇರಿದರೆ ಆ ಪ್ರಕರಣದ ಸತ್ಯಾಸತ್ಯತೆಯನ್ನು ಕೂಲಂಕಷವಾಗಿ ಪರಿಶೀಲಿಸಲು ಕೋರ್ಟ್ ವೈದ್ಯಕೀಯ ತಂಡವೊಂದನ್ನು ರಚಿಸಬೇಕು. ಮತ್ತು ವೈದ್ಯರ ಸಲಹೆಯ ಮೇರೆಗೆ ವ್ಯಕ್ತಿಗೆ ಯಾವುದೇ ವೈದ್ಯಕೀಯ ಚಿಕಿತ್ಸೆಗಳು ಫಲಿಸುವುದಿಲ್ಲ ಎಂದಾದರೆ ಅಂಥವರಿಗೆ ಪರೋಕ್ಷ ದಯಾಮರಣ ನೀಡಬಹುದು ಎಂದು ಕೋರ್ಟು ಹೇಳಿತ್ತು.
ದಯಾ ಮರಣದ ಬಗ್ಗೆ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು
ಈ ಮಹತ್ವದ ತೀರ್ಪು ಹೊರಬಿದ್ದ ಕೆಲವೇ ದಿನಗಳಲ್ಲಿ ವ್ಯಕ್ತಿಯೊಬ್ಬರ ಕುಟುಂಬಸ್ಥರು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಮುಂದಿನ ಕಾರ್ಯವಿಧಾನಗಳ ಕುರಿತು ಕೋರ್ಟು ಚಿಂತಿಸಲಿದೆ.