25 ವರ್ಷಗಳ ನಂತರ ಸಿಕ್ಕಿಂಗೆ ಸಿಕ್ಕಿದ ಹೊಸ ಸಿಎಂ; ವಾರದಲ್ಲಿ ಎರಡು ರಜಾ ಮೊದಲ ಘೋಷಣೆ
ಇಪ್ಪತ್ತೈದು ವರ್ಷಗಳ ನಂತರ ಸಿಕ್ಕಿಂಗೆ ಮುಖ್ಯಮಂತ್ರಿ ಬದಲಾಗಿದ್ದಾರೆ. ಪ್ರೇಮ್ ಸಿಂಗ್ ತಮಾಂಗ್ ರನ್ನು ಪಿ.ಎಸ್.ಗೋಲೆ ಅಂತಲೂ ಕರೆಯುತ್ತಾರೆ. ಅವರು ಸಿಕ್ಕಿಂನ ಆರನೇ ಮುಖ್ಯಮಂತ್ರಿಯಾಗಿ ಸೋಮವಾರ ಅಧಿಕಾರ ಸ್ವೀಕರಿಸಿದರು. ರಾಜಧಾನಿ ಗ್ಯಾಂಗ್ಟಕ್ ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಗಂಗಾಪ್ರಸಾದ್ ಪ್ರಮಾಣ ವಚನ ಬೋಧಿಸಿದರು.
ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ ಕಳೆದ ಇಪ್ಪತ್ತೈದು ವರ್ಷದಿಂದ ಸಿಕ್ಕಿಂನಲ್ಲಿ ಜಯ ಗಳಿಸುತ್ತಿತ್ತು. ಪವನ್ ಚಾಮ್ಲಿಂಗ್ ಇಪ್ಪತ್ತೈದು ವರ್ಷದಿಂದ ಮುಖ್ಯಮಂತ್ರಿ ಆಗಿದ್ದರು. ಆ ಮೂಲಕ ಭಾರತದ ಯಾವುದೇ ರಾಜ್ಯದಲ್ಲಿ ಆತಿ ದೀರ್ಘಾವಧಿಗೆ, ಅಂದರೆ 8,932 ದಿನ ಅಧಿಕಾರದಲ್ಲಿ ಇದ್ದರು.
ಪ್ರೇಮ್ ಸಿಂಗ್ ಅಧಿಕಾರ ಸ್ವೀಕರಿಸಿದ ತಕ್ಷಣ ಸಿಕ್ಕಿನ ರಾಜ್ಯ ಸರಕಾರಿ ನೌಕರರಿಗೆ ವಾರಕ್ಕೆ ಐದು ದಿನಗಳ ಕೆಲಸ ಹಾಗೂ ಎರಡು ದಿನ (ಶನಿವಾರ ಹಾಗೂ ಭಾನುವಾರ) ರಜಾ ಘೋಷಿಸಿದ್ದಾರೆ. ಇದಕ್ಕೂ ಮುನ್ನ ಪ್ರತಿ ತಿಂಗಳ ಎರಡನೇ ಶನಿವಾರ ಮಾತ್ರ ಸರಕಾರಿ ನೌಕರರಿಗೆ ರಜಾ ಇರುತ್ತಿತ್ತು.

ಮುಖ್ಯಮಂತ್ರಿಯೂ ಸೇರಿದ ಹಾಗೆ ಯಾರೂ ದುಬಾರಿ ವಾಹನದಲ್ಲಿ ಪ್ರಯಾಣ ಮಾಡುವುದಿಲ್ಲ. ಕೆಂಪು ದೀಪದ ಕಾರು ಬಳಸುವುದಿಲ್ಲ ಎಂದು ಹೊಸ ಮುಖ್ಯಮಂತ್ರಿ ಹೇಳಿದ್ದಾರೆ. ಮುಖ್ಯಮಂತ್ರಿ ಹೊರತುಪಡಿಸಿ ಹನ್ನೊಂದು ಸದಸ್ಯರು ಸಂಪುಟದಲ್ಲಿ ಇದ್ದಾರೆ. ಉದ್ಯೋಗ ಸೃಷ್ಟಿ, ಆರೋಗ್ಯ ವಲಯ, ಮೂಲಸೌಕರ್ಯ ಅಭಿವೃದ್ಧಿ ನಮ್ಮ ಸರಕಾರದ ಆದ್ಯತೆ ಎಂದು ಸಿಎಂ ತಿಳಿಸಿದ್ದಾರೆ.
ಸಿಕ್ಕಿಂ ಕ್ರಾಂತಿ ಮೋರ್ಚಾ (ಎಸ್ ಕೆಎಂ) ಅಧ್ಯಕ್ಷರಾದ ಗೋಲೆ ಇನ್ನು ಆರು ತಿಂಗಳ ಒಳಗೆ ಎಂಎಲ್ ಎ ಆಗಿ ಆಯ್ಕೆ ಆದರಷ್ಟೇ ಮುಖ್ಯಮಂತ್ರಿ ಆಗಿ ಮುಂದುವರಿಯಲು ಸಾಧ್ಯ. ಅವರು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಹಣಕಾಸು ದುರುಪಯೋಗ ಆರೋಪದಡಿ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ಆಗಿತ್ತು. 1994 ಮತ್ತು 1999ರ ಆ ವೇಳೆ ಅವರು ಪವನ್ ಚಾಮ್ಲಿಂಗ್ ಸರಕಾರದಲ್ಲಿ ಮಂತ್ರಿ ಆಗಿದ್ದರು.
ಒಟ್ಟು 32 ಸದಸ್ಯ ಬಲದ ಸಿಕ್ಕಿಂ ವಿಧಾನ ಸಭೆಯಲ್ಲಿ ಎಸ್ ಕೆಎಂ 17 ಸ್ಥಾನ ಗಳಿಸಿದ್ದರೆ, ಎಸ್ ಡಿಎಫ್ 15 ಸ್ಥಾನದಲ್ಲಿ ಜಯಿಸಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications