3 ದಶಕಗಳ ನಂತರ ಶ್ರೀನಗರದಲ್ಲಿ ಶಿಯಾ ಸಮುದಾಯದಿಂದ ಮೊಹರಂ ಮೆರವಣಿಗೆ!
ಶ್ರೀನಗರ, , ಜುಲೈ. 27: ಸುಮಾರು ಮೂರು ದಶಕಗಳ ನಂತರ ಶಿಯಾ ಸಮುದಾಯದವರು ಗುರುವಾರ ಶ್ರೀನಗರದ ಸಾಂಪ್ರದಾಯಿಕ ಮಾರ್ಗದ ಲಾಲ್ ಚೌಕ್ ಪ್ರದೇಶದ ಮೂಲಕ ಹಾದುಹೋಗುವ ಮೊಹರಂ ಮೆರವಣಿಗೆಯನ್ನು ನಡೆಸಿದ್ದಾರೆ. ಮೆರವಣಿಗೆಯಲ್ಲಿ ಬಿಗಿ ಭದ್ರತೆಯ ನಡುವೆ ನೂರಾರು ಜನರು ಭಾಗವಹಿಸಿದ್ದರು.
ಆಡಳಿತವು ಬುಧವಾರ ಮೆರವಣಿಗೆಗೆ ಎರಡು ಗಂಟೆಗಳ ಕಾಲ ಅಂದರೆ ಗುರುವಾರ ಬೆಳಗ್ಗೆ 6 ರಿಂದ 8 ರವರೆಗೆ ಅನುಮತಿ ನೀಡಿತ್ತು. ಗುರುಬಜಾರ್ನಿಂದ ದಾಲ್ಗೇಟ್ ಮಾರ್ಗವಾಗಿ ಧ್ವಜಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಶಾಂತಿಯುತವಾಗಿ ಮೆರವಣಿಗೆ ನಡೆಸಿದ್ದಾರೆ. "ಇಂದಿನ ಮೆರವಣಿಗೆ ಶಾಂತಿಯುತವಾಗಿತ್ತು" ಎಂದು ಶ್ರೀನಗರ ಡೆಪ್ಯುಟಿ ಕಮಿಷನರ್ ಐಜಾಜ್ ಅಸದ್ ಹೇಳಿದ್ದಾರೆ. ಮೆರವಣಿಗೆ ನಡೆಸಲು ಸಹಾಯ ನೀಡಿದ ಭದ್ರತಾ ಏಜೆನ್ಸಿಗಳು ಮತ್ತು ಸ್ಥಳೀಯ ಸ್ವಯಂಸೇವಕರಿಗೆ ಧನ್ಯವಾದ ಹೇಳಿದ್ದಾರೆ.

ಗುರುಬಜಾರ್ನಲ್ಲಿ 8 ನೇ ದಿನದ ಮೆರವಣಿಗೆಗಾಗಿ ಬೆಳಗ್ಗೆ 5.30 ರ ಸುಮಾರಿಗೆ ಜನರು ಜಮಾಯಿಸಿದ್ದರು. ಇಂದಿನ ಮೆರವಣಿಗೆ ಶಾಂತಿಯುವಾಗಿದ್ದ ಕಾರಣ ಶನಿವಾರದಂದು ಪ್ರಮುಖವಾದ 10 ನೇ ದಿನದ ಮೆರವಣಿಗೆಗೆ ಆಡಳಿತವು ಅವಕಾಶ ನೀಡುತ್ತದೆ ಎಂದು ಹಲವರು ಆಶಿಸಿದ್ದಾರೆ. ಇತ್ತ, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಬೀದಿ ಹಿಂಸಾಚಾರ ಕೊನೆಗೊಂಡಿದೆ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಶಾಂತಿಯ ಯುಗ ಉದಯಿಸಿದೆ ಎಂದು ಹೇಳಿದ್ದು, ಮೊಹರಂ ಮೆರವಣಿಗೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ.
"ದಶಕಗಳ ನಂತರ ಇಂದು 8 ನೇ ಮೊಹರಂ ಮೆರವಣಿಗೆ ಶ್ರೀನಗರದಲ್ಲಿ ಶಾಂತಿಯುತವಾಗಿ ಮುಕ್ತಾಯವಾಗಿದೆ ಎಂದು ಹೇಳಲು ನನಗೆ ಸಂತೋಷವಾಗಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಯಾವುದೇ ರಾಜಕೀಯ ಮಾಡುವುದು ತಪ್ಪು" ಎಂದು ಸೂಫಿಸಂ ಕುರಿತು ಸಮಾವೇಶವನ್ನು ಉದ್ದೇಶಿಸಿ ಹೇಳಿದ್ದಾರೆ. ಮೂರು ಹಂತದ ಭದ್ರತೆಯನ್ನು ಒದಗಿಸಲಾಗಿದೆ ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

30 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಮೊಹರಂನ 8ನೇ ದಿನದ ಮೆರವಣಿಗೆಗೆ ಈ ಮಾರ್ಗದಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ ಮೆರವಣಿಗೆಗೆ ಅನುಮತಿ ನೀಡಬೇಕೆಂದು ಶಿಯಾ ಸಮುದಾಯದಿಂದ ಕಳೆದ ಕೆಲವು ವರ್ಷಗಳಿಂದ ಬೇಡಿಕೆ ಇತ್ತು, ಸರ್ಕಾರ ನಿರ್ಧಾರ ತೆಗೆದುಕೊಂಡ ನಂತರ ನಾವು ಅದಕ್ಕೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡಿದ್ದೇವೆ ಎಂದು ವಿಜಯ್ ಕುಮಾರ್ ಹೇಳಿದ್ದಾರೆ.
ಕಳೆದ 32-33 ವರ್ಷಗಳಿಂದ ಮೊಹರಂ ಮೆರವಣಿಗೆಗೆ ಅವಕಾಶವಿರಲಿಲ್ಲ ಎಂದು ಕಾಶ್ಮೀರದ ವಿಭಾಗೀಯ ಆಯುಕ್ತ ವಿ ಕೆ ಭಿದುರಿ ಬುಧವಾರ ಹೇಳಿದ್ದಾರೆ. ಮೆರವಣಿಗೆಗೆ ಅನುಮತಿ ನೀಡುವ ಆಡಳಿತದ ನಿರ್ಧಾರವು "ಐತಿಹಾಸಿಕ ಹೆಜ್ಜೆ" ಎಂದು ಹೇಳಿರುವ ಅವರು, ಕಾರ್ಯಕ್ರಮ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಆಡಳಿತವು ಇತರ ವಿಷಯಗಳ ಬಗ್ಗೆ ಇದೇ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೊಹರಂ ಮೆರವಣಿಗೆಗೆ ಅನುಮತಿ ನೀಡುವ ಸರ್ಕಾರದ ನಿರ್ಧಾರವನ್ನು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಸ್ವಾಗತಿಸಿದ್ದಾರೆ. "ನಾವು ಈ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದೇ ಸಮಯದಲ್ಲಿ, ಸರ್ಕಾರವು ಇತರ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ನಾವು ಭಾವಿಸುತ್ತೇವೆ. ಮಿರ್ವೈಜ್ ಉಮರ್ ಫಾರೂಕ್ ಧಾರ್ಮಿಕ ಮುಖಂಡರಾಗಿದ್ದು ಅವರನ್ನು ಬಿಡುಗಡೆ ಮಾಡಬೇಕು. ಜಾಮಿಯಾ ಮಸೀದಿಯಲ್ಲಿ ಯಾವುದೇ ನಿರ್ಬಂಧಗಳಿಲ್ಲದೆ ಪ್ರಾರ್ಥನೆಗೆ ಅವಕಾಶ ನೀಡಬೇಕು ಮತ್ತು ಈದ್ ಪ್ರಾರ್ಥನೆ ಮಾಡಲು ಈದ್ಗಾದಲ್ಲಿ ಅನುಮತಿಮ ನೀಡಬೇಕು" ಎಂದು ಒಮರ್ ಅಬ್ದುಲ್ಲಾ ಪಿಟಿಐಗೆ ತಿಳಿಸಿದ್ದಾರೆ.
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ












Click it and Unblock the Notifications