500 ರೂಪಾಯಿಗೆ ಅಡುಗೆ ಅನಿಲ, 100 ಯೂನಿಟ್ ಉಚಿತ ವಿದ್ಯುತ್: ರಾಜಸ್ಥಾನ ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ಬಂಪರ್ ಕೊಡುಗೆ
ಜೈಪುರ, ಮೇ 01: ರಾಜಸ್ಥಾನದಲ್ಲಿನ ಕಾಂಗ್ರೆಸ್ ಸರ್ಕಾರ ಜನರಿಗೆ ಬಂಪರ್ ಕೊಡುಗೆ ನೀಡಿದೆ. 500 ರೂಪಾಯಿಗೆ ಅಡುಗೆ ಅನಿಲದ ನಂತರ 100 ಯೂನಿಟ್ ಉಚಿತ ವಿದ್ಯುತ್ ನೀಡಲು ಮುಂದಾಗಿದೆ. ಕರ್ನಾಟಕದಲ್ಲಿ ಭಾರೀ ಯಶಸ್ಸಿಗೆ ಕಾರಣವಾಗಿರುವ ಉಚಿತ ಭಾಗ್ಯ ಯೋಜನೆಗಳನ್ನು ರಾಜಸ್ಥಾನದಲ್ಲಿ ಘೋಷಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಚುನಾವಣಾ ದಾಳವನ್ನು ಉರುಳಿಸಲು ಮುಂದಾಗಿದೆ.
ಪ್ರಸ್ತುತ ರಾಜಸ್ಥಾನದಲ್ಲಿ 500 ರೂಪಾಯಿಗೆ ಅಡುಗೆ ಅನಿಲವನ್ನು ನೀಡಲಾಗುತ್ತಿದೆ. ಈಗ 100 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲು ಮುಖ್ಯಮಂತ್ರಿ ಅಶೋಕ್ ಗೆಹಲೋಟ್ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಸಾರ್ವಜನಿಕರಿಂದ ಭಾರೀ ಬೇಡಿಕೆ ಇತ್ತು ಎಂದು ಗೆಹಲೋಟ್ ಹೇಳಿದ್ದಾರೆ.

'ಹಣದುಬ್ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಹಲವು ದಿನಗಳಂದ ನಾವು ಚರ್ಚೆ ನಡೆಸಿದ್ದೆವು. ಈ ವಿಚಾರವಾಗಿ ಸಾರ್ವಜನಿಕರೊಂದಿಗೆ ಮಾತನಾಡಿದ್ದೆವು. ವಿದ್ಯುತ್ ಬಿಲ್ಗಳಲ್ಲಿ ಸ್ಲ್ಯಾಬ್ವಾರು ವಿನಾಯಿತಿಯಲ್ಲಿ ಸ್ವಲ್ಪ ಬದಲಾವಣೆಯಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು' ಎಂಬುದಾಗಿ ಗೆಹಲೋಟ್ ತಿಳಿಸಿದ್ದಾರೆ.
ತಿಂಗಳ ವಿದ್ಯುತ್ ಬಿಲ್ಗಳಲ್ಲಿ ಹೆಚ್ಚುವರಿ ಶುಲ್ಕದ ಬಗ್ಗೆ ಸಾರ್ವಜನಿಕರಿಂದ ಪ್ರತಿಕ್ರಿಯೆ ಪಡೆಯಲಾಯಿತು. ಮೇ ತಿಂಗಳಿನಲ್ಲಿ, ಅದರ ಆಧಾರದ ಮೇಲೆ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹಿಂದಿಯಲ್ಲಿ ಗೆಹಲೋಟ್ ಟ್ವೀಟ್ ಮಾಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಜ್ಮೀರ್ನಿಂದ ಪಕ್ಷದ ಪ್ರಚಾರವನ್ನು ಪ್ರಾಯೋಗಿಕವಾಗಿ ನಿನ್ನೆ ಪ್ರಾರಂಭಿಸಿದ್ದಾರೆ. ರಾಜ್ಯ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಭ್ರಷ್ಟಾಚಾರ ಹಾಗೂ ಗುಂಪುಗಾರಿಕೆಯ ಬಗ್ಗೆ ಆರೋಪವನ್ನೂ ಮಾಡಿದ್ದರು. ಇದೇ ದಿನದಂದು ಉಚಿತ ವಿದ್ಯುತ್ ಘೋಷಣೆ ಮಾಡುವ ಮೂಲಕ ಪ್ರಧಾನಿಗೆ ಟಕ್ಕರ್ ಕೊಡುವ ಯತ್ನವನ್ನು ರಾಜಸ್ಥಾನ ಸರ್ಕಾರ ಮಾಡಿದೆ.
ಗೆಹಲೋಟ್ ಅವರು ಅಡುಗೆ ಅನಿಲದ ಮೇಲೆ ಭಾರೀ ಸಬ್ಸಿಡಿಯನ್ನು ನೀಡುವುದಾಗಿ ಡಿಸೆಂಬರ್ನಲ್ಲಿ ಭರವಸೆ ನೀಡಿದ್ದರು. ಡಿಸೆಂಬರ್ ನಂತರ ರಾಜಸ್ಥಾನದಲ್ಲಿ ಅಡುಗೆ ಅನಿಲವು ₹ 500 ಕ್ಕೆ ದೊರೆಯುತ್ತಿದೆ. ಪ್ರತಿ ವರ್ಷಕ್ಕೆ 12 ಸಿಲಿಂಡರ್ಗಳನ್ನು ಖರೀದಿಸಬಹುದು.
ಕಳೆದ ವರ್ಷ ಸರ್ಕಾರವು ಸರ್ಕಾರಿ ಆಸ್ಪತ್ರೆಗಳಲ್ಲಿ ₹ 25 ಲಕ್ಷದವರೆಗೆ ಉಚಿತ ವೈದ್ಯಕೀಯ ಸೌಲಭ್ಯಗಳನ್ನು ನೀಡುವ ಮೆಗಾ ಆರೋಗ್ಯ ವಿಮಾ ಯೋಜನೆಯನ್ನು ಸಹ ಪ್ರಾರಂಭಿಸಿತ್ತು. ಸಾಮಾಜಿಕ ಭದ್ರತಾ ಯೋಜನೆಯಡಿ ಕನಿಷ್ಠ ಮಾಸಿಕ ಪಿಂಚಣಿಯನ್ನೂ ₹ 1,000ಕ್ಕೆ ಹೆಚ್ಚಿಸಲಾಗಿದೆ.
ದೆಹಲಿ ಮತ್ತು ಪಂಜಾಬ್ನಲ್ಲಿ ಎಎಪಿಗೆ ಭಾರೀ ಚುನಾವಣಾ ಲಾಭ ನೀಡಿದ ಉಚಿತ ನೀರು ಮತ್ತು ವಿದ್ಯುತ್ ಭರವಸೆ ಕರ್ನಾಟಕದಲ್ಲಿಯೂ ಕಾಂಗ್ರೆಸ್ಗೆ ಕೆಲಸ ಮಾಡಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications