ಪ್ರವಾಹದ ನಂತರ ಶಬರಿಮಲೆ ಓಪನ್: ಅಯ್ಯಪ್ಪ ಮಾಲಾಧಾರಿಗಳಿಗೆ ಮಹತ್ವದ ಟಿಪ್ಸ್
ಕಂಡುಕೇಳರಿಯದ ಮಳೆ, ಪ್ರವಾಹ, ಭೂಕುಸಿತದಿಂದ ತತ್ತರಿಸಿ ಹೋಗಿದ್ದ ಕೇರಳ ಮತ್ತೆ ಸಹಜಸ್ಥಿತಿಗೆ ಮರಳುತ್ತಿದೆ. ಆಗಸ್ಟ್ ತಿಂಗಳಲ್ಲಿ ಸುರಿದ ಕುಂಭದ್ರೋಣ ಮಳೆಯಿಂದ ಮುಚ್ಚಲಾಗಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯವನ್ನು ಮತ್ತೆ ಭಾನುವಾರ (ಸೆ 16) ಸಂಜೆಯಿಂದ ತೆರೆಯಲಾಗಿದೆ.
ಪಶ್ಚಿಮ ಘಟ್ಟದಲ್ಲಿರುವ ಪುರಾಣಪ್ರಸಿದ್ದ ಶಬರಿಮಲೆ ದೇವಸ್ಥಾನವನ್ನು, ಮಲಯಾಳಂ ತಿಂಗಳ ಮೊದಲ ದಿನ ಕನ್ನಿಮಾಸ ಪೂಜೆಯನ್ನು, ದೇವಾಲಯದ ಪ್ರಧಾನ ಅರ್ಚಕ ಕಂಡರಾರು ರಾಜೀವಾರು ನೆರವೇರಿಸುವ ಮೂಲಕ, ದೇವಸ್ಥಾನದ ಬಾಗಿಲನ್ನು ತೆರೆಯಲಾಗಿದೆ
ಸೋಮವಾರದಿಂದ ನೇವ್ಯಾಭಿಷೇಕಂ, ಉದಯಸ್ಥಾಮನ, ಪಡಿಪೂಜೆ ಸೇರಿದಂತೆ ದೈನಂದಿನ ಪೂಜಾ ಪದ್ದತಿ ಆರಂಭವಾಗಿದೆ. ದೇವಸ್ಥಾನದ ಸಂಪ್ರದಾಯದಂತೆ, ಶುಕ್ರವಾರದಿಂದ (ಸೆ 21) ಮತ್ತೆ ದೇವಾಲಯವನ್ನು ಮುಚ್ಚಲಾಗುವುದು.
ಆಗಸ್ಟ್ ತಿಂಗಳ ಮಧ್ಯಭಾಗದಿಂದ ಸೆಪ್ಟಂಬರ್ 16ನೇ ತಾರೀಕಿನವರೆಗೆ, ಭಾರೀ ಮಳೆ ಮತ್ತು ಅದರಿಂದಾದ ತೊಂದರೆಯಿಂದಾಗಿ, ದೇವಸ್ಥಾನದಲ್ಲಿ ದೈನಂದಿನ ಪೂಜೆಗಳು ನಡೆದಿರಲಿಲ್ಲ. ಭಕ್ತರಿಗೆ ಕೆಲವೊಂದು ಪ್ರಮುಖ ಮಾಹಿತಿಯಿಂತಿದೆ:

> ಭಾರೀ ಮಳೆಯಿಂದ ತ್ರಿವೇಣಿ ಸೇತುವೆ ಕೊಚ್ಚಿ ಹೋಗಿರುವುದರಿಂದ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದೆ.
> ಮನ್ನಾರಕುಳಂಜಿ- ಪಂಪಾ ರಸ್ತೆಯ ಸುಮಾರು ಏಳು ಕಡೆ ಭೂಕುಸಿತ ಮುಂದುವರಿದಿದ್ದು, ದುರಸ್ಥಿ ಕಾಮಗಾರಿ ನಡೆಯುತ್ತಿದೆ.
> ಚಾಳಕಾಯಂ - ಪಂಪಾ ನಡುವೆ ಎರಡು ಕಡೆ ರಸ್ತೆ ತೀರಾ ಹದೆಗೆಟ್ಟಿದ್ದು, ಈ ಭಾಗದಲ್ಲಿ ಜಾಗರೂಕತೆಯಿಂದ ವಾಹನ ಚಲಾಯಿಸಲು ಸೂಚಿಸಲಾಗಿದೆ.
ಕೇರಳ, ಕೊಡಗು ಪ್ರವಾಹಕ್ಕೆ 'ಸೋಮಾಲಿ ಜೆಟ್' ಕಾರಣ: ಸ್ಫೋಟಕ ಮಾಹಿತಿ
> ಪಂಪಾ ಬಳಿಯ ವಾಹನ ಪಾರ್ಕಿಂಗ್ ಸ್ಥಳದ ಬಲಭಾಗದಲ್ಲಿ ಆಗಾಗ ಭೂಕುಸಿತ ಇನ್ನೂ ಮುಂದುವರಿದ್ದು, ಆ ಜಾಗದಲ್ಲಿ ಪಾರ್ಕಿಂಗ್ ಮಾಡದಂತೆ ಸೂಚಿಸಲಾಗಿದೆ.
> ಭಕ್ತರಿಗೆ ತ್ರಿವೇಣಿ ಸೇತುವೆಯ ಮೂಲಕ ಆಗಮಿಸಿ, ನಿಲಯಕ್ಕಲ್ ವರೆಗೆ ವಾಹನ ಪಾರ್ಕಿಂಗಿಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ಕೇರಳ ಸಾರಿಗೆ ಬಸ್ ವ್ಯವಸ್ಥೆಯಿದೆ.
> ಸನ್ನಿಧಾನಕ್ಕೆ ತ್ರಿವೇಣಿ ಸೇತುವೆಯ ಮೂಲಕ ಹೋಗಬೇಕಾಗಿದ್ದು, ಮಳೆಯಿಂದ ಪಂಪಾ ನದಿಯಿಂದ ಬಂದ ಮರಳುಗಳನ್ನು ತೆರವುಗೊಳಿಸುವ ಕೆಲಸ ನಡೆಯುತ್ತಿದೆ.
> ಪಂಪಾ ನದಿಯ ಬಳಿ ಯಾವುದೇ ಅಂಗಡಿ ಮುಂಗಟ್ಟುಗಳು ಇನ್ನೂ ತೆರೆಯಲು ಅನುಮತಿ ನೀಡಿಲ್ಲ. ಭಕ್ತರು ಕುಡಿಯುವ ನೀರು, ಆಹಾರದ ವ್ಯವಸ್ಥೆಯನ್ನು ಮಾಡಿಕೊಂಡು ಬರಬೇಕು.
> ಯಾವುದೇ ಕಾರಣಕ್ಕೆ ಪಂಪಾನದಿಯಲ್ಲಿ ಭಕ್ತರು ಸ್ನಾನ ಮಾಡುವಂತಿಲ್ಲ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications