ಪ್ರವಾಹದ ನಂತರ ಶಬರಿಮಲೆ ಓಪನ್: ಅಯ್ಯಪ್ಪ ಮಾಲಾಧಾರಿಗಳಿಗೆ ಮಹತ್ವದ ಟಿಪ್ಸ್
ಕಂಡುಕೇಳರಿಯದ ಮಳೆ, ಪ್ರವಾಹ, ಭೂಕುಸಿತದಿಂದ ತತ್ತರಿಸಿ ಹೋಗಿದ್ದ ಕೇರಳ ಮತ್ತೆ ಸಹಜಸ್ಥಿತಿಗೆ ಮರಳುತ್ತಿದೆ. ಆಗಸ್ಟ್ ತಿಂಗಳಲ್ಲಿ ಸುರಿದ ಕುಂಭದ್ರೋಣ ಮಳೆಯಿಂದ ಮುಚ್ಚಲಾಗಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯವನ್ನು ಮತ್ತೆ ಭಾನುವಾರ (ಸೆ 16) ಸಂಜೆಯಿಂದ ತೆರೆಯಲಾಗಿದೆ.
ಪಶ್ಚಿಮ ಘಟ್ಟದಲ್ಲಿರುವ ಪುರಾಣಪ್ರಸಿದ್ದ ಶಬರಿಮಲೆ ದೇವಸ್ಥಾನವನ್ನು, ಮಲಯಾಳಂ ತಿಂಗಳ ಮೊದಲ ದಿನ ಕನ್ನಿಮಾಸ ಪೂಜೆಯನ್ನು, ದೇವಾಲಯದ ಪ್ರಧಾನ ಅರ್ಚಕ ಕಂಡರಾರು ರಾಜೀವಾರು ನೆರವೇರಿಸುವ ಮೂಲಕ, ದೇವಸ್ಥಾನದ ಬಾಗಿಲನ್ನು ತೆರೆಯಲಾಗಿದೆ
ಸೋಮವಾರದಿಂದ ನೇವ್ಯಾಭಿಷೇಕಂ, ಉದಯಸ್ಥಾಮನ, ಪಡಿಪೂಜೆ ಸೇರಿದಂತೆ ದೈನಂದಿನ ಪೂಜಾ ಪದ್ದತಿ ಆರಂಭವಾಗಿದೆ. ದೇವಸ್ಥಾನದ ಸಂಪ್ರದಾಯದಂತೆ, ಶುಕ್ರವಾರದಿಂದ (ಸೆ 21) ಮತ್ತೆ ದೇವಾಲಯವನ್ನು ಮುಚ್ಚಲಾಗುವುದು.
ಆಗಸ್ಟ್ ತಿಂಗಳ ಮಧ್ಯಭಾಗದಿಂದ ಸೆಪ್ಟಂಬರ್ 16ನೇ ತಾರೀಕಿನವರೆಗೆ, ಭಾರೀ ಮಳೆ ಮತ್ತು ಅದರಿಂದಾದ ತೊಂದರೆಯಿಂದಾಗಿ, ದೇವಸ್ಥಾನದಲ್ಲಿ ದೈನಂದಿನ ಪೂಜೆಗಳು ನಡೆದಿರಲಿಲ್ಲ. ಭಕ್ತರಿಗೆ ಕೆಲವೊಂದು ಪ್ರಮುಖ ಮಾಹಿತಿಯಿಂತಿದೆ:

> ಭಾರೀ ಮಳೆಯಿಂದ ತ್ರಿವೇಣಿ ಸೇತುವೆ ಕೊಚ್ಚಿ ಹೋಗಿರುವುದರಿಂದ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದೆ.
> ಮನ್ನಾರಕುಳಂಜಿ- ಪಂಪಾ ರಸ್ತೆಯ ಸುಮಾರು ಏಳು ಕಡೆ ಭೂಕುಸಿತ ಮುಂದುವರಿದಿದ್ದು, ದುರಸ್ಥಿ ಕಾಮಗಾರಿ ನಡೆಯುತ್ತಿದೆ.
> ಚಾಳಕಾಯಂ - ಪಂಪಾ ನಡುವೆ ಎರಡು ಕಡೆ ರಸ್ತೆ ತೀರಾ ಹದೆಗೆಟ್ಟಿದ್ದು, ಈ ಭಾಗದಲ್ಲಿ ಜಾಗರೂಕತೆಯಿಂದ ವಾಹನ ಚಲಾಯಿಸಲು ಸೂಚಿಸಲಾಗಿದೆ.
ಕೇರಳ, ಕೊಡಗು ಪ್ರವಾಹಕ್ಕೆ 'ಸೋಮಾಲಿ ಜೆಟ್' ಕಾರಣ: ಸ್ಫೋಟಕ ಮಾಹಿತಿ
> ಪಂಪಾ ಬಳಿಯ ವಾಹನ ಪಾರ್ಕಿಂಗ್ ಸ್ಥಳದ ಬಲಭಾಗದಲ್ಲಿ ಆಗಾಗ ಭೂಕುಸಿತ ಇನ್ನೂ ಮುಂದುವರಿದ್ದು, ಆ ಜಾಗದಲ್ಲಿ ಪಾರ್ಕಿಂಗ್ ಮಾಡದಂತೆ ಸೂಚಿಸಲಾಗಿದೆ.
> ಭಕ್ತರಿಗೆ ತ್ರಿವೇಣಿ ಸೇತುವೆಯ ಮೂಲಕ ಆಗಮಿಸಿ, ನಿಲಯಕ್ಕಲ್ ವರೆಗೆ ವಾಹನ ಪಾರ್ಕಿಂಗಿಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ಕೇರಳ ಸಾರಿಗೆ ಬಸ್ ವ್ಯವಸ್ಥೆಯಿದೆ.
> ಸನ್ನಿಧಾನಕ್ಕೆ ತ್ರಿವೇಣಿ ಸೇತುವೆಯ ಮೂಲಕ ಹೋಗಬೇಕಾಗಿದ್ದು, ಮಳೆಯಿಂದ ಪಂಪಾ ನದಿಯಿಂದ ಬಂದ ಮರಳುಗಳನ್ನು ತೆರವುಗೊಳಿಸುವ ಕೆಲಸ ನಡೆಯುತ್ತಿದೆ.
> ಪಂಪಾ ನದಿಯ ಬಳಿ ಯಾವುದೇ ಅಂಗಡಿ ಮುಂಗಟ್ಟುಗಳು ಇನ್ನೂ ತೆರೆಯಲು ಅನುಮತಿ ನೀಡಿಲ್ಲ. ಭಕ್ತರು ಕುಡಿಯುವ ನೀರು, ಆಹಾರದ ವ್ಯವಸ್ಥೆಯನ್ನು ಮಾಡಿಕೊಂಡು ಬರಬೇಕು.
> ಯಾವುದೇ ಕಾರಣಕ್ಕೆ ಪಂಪಾನದಿಯಲ್ಲಿ ಭಕ್ತರು ಸ್ನಾನ ಮಾಡುವಂತಿಲ್ಲ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications