ಭಾರತ್ ಜೋಡೋ ಯಾತ್ರೆ ಯಶಸ್ವಿ: ಈ ವರ್ಷದ ಕೊನೆಗೆ ಮತ್ತೊಂದು ಯಾತ್ರೆ ನಡೆಸಲಿದೆ ಕಾಂಗ್ರೆಸ್
ಯಾತ್ರೆಯು ಅರುಣಾಚಲ ಪ್ರದೇಶದ ಪಾಸಿಘಾಟ್ನಿಂದ ಆರಂಭಗೊಂಡು 2024ರ ಲೋಕಸಭೆ ಚುನಾವಣೆಗೆ ಮುನ್ನ ಗುಜರಾತ್ನ ಪೋರಬಂದರ್ನಲ್ಲಿ ಅಂತ್ಯಗೊಳ್ಳಲಿದೆ.
ನವದೆಹಲಿ, ಫೆಬ್ರವರಿ. 27: ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆಯ ಯಶಸ್ಸಿನ ನಂತರ, ಪಕ್ಷವು ಹೊಸ ಮೆರವಣಿಗೆಯ ಯೋಜನೆಯನ್ನು ಪ್ರಕಟಿಸಿದೆ. ಈ ಬಾರಿ ಪೂರ್ವದಿಂದ ಪಶ್ಚಿಮಕ್ಕೆ ಯಾತ್ರೆ ತೆರಳಲಿದೆ. ಛತ್ತೀಸ್ಗಢದ ರಾಯ್ಪುರದಲ್ಲಿ ಪಕ್ಷವು ಮೂರು ದಿನಗಳ ಮಹಾಧಿವೇಶನ ಸಮಾರೋಪದಲ್ಲಿ ಈ ನಿರ್ಧಾರ ಘೋಷನೆಯಾಗಿದೆ. ಪಾಸಿಘಾಟ್ನಿಂದ ಪೋರಬಂದರ್ ಯಾತ್ರೆಯು ಈ ವರ್ಷದ ಕೊನೆಯಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ.
ವರದಿಗಳ ಪ್ರಕಾರ ಪಾಸಿಘಾಟ್ನಿಂದ ಪೋರಬಂದರ್ ಯಾತ್ರೆಯು ಅರುಣಾಚಲ ಪ್ರದೇಶದ ಪಾಸಿಘಾಟ್ನಿಂದ ಆರಂಭಗೊಂಡು 2024ರ ಲೋಕಸಭೆ ಚುನಾವಣೆಗೆ ಮುನ್ನ ಗುಜರಾತ್ನ ಪೋರಬಂದರ್ನಲ್ಲಿ ಅಂತ್ಯಗೊಳ್ಳಲಿದೆ. ಆದರೆ, ಈ ಯಾತ್ರೆಯು ಭಾರತ್ ಜೋಡೋ ಯಾತ್ರೆಯ ಸ್ವರೂಪಕ್ಕಿಂತ ಸ್ವಲ್ಪ ಭಿನ್ನವಾಗಿರಬಹುದು ಎಂದು ಪಕ್ಷದ ವಕ್ತಾರ ಜೈರಾಮ್ ರಮೇಶ್ ಹೇಳಿದ್ದಾರೆ.

ಮುಂದಿನ ವಾರಗಳಲ್ಲಿ ಯಾತ್ರೆಯ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಜೈರಾಮ್ ರಮೇಶ್ ಪ್ರಕಾರ ಜೂನ್ ಮೊದಲು ಅಥವಾ ನವೆಂಬರ್ ಮೊದಲು ಯಾತ್ರೆ ಕೈಗೊಳ್ಳಬಹುದು. ಕರ್ನಾಟಕದಲ್ಲಿ ಏಪ್ರಿಲ್ನಲ್ಲಿ ಚುನಾವಣೆ, ಜೂನ್ನಿಂದ ಮಳೆ ಮತ್ತು ನವೆಂಬರ್ನಲ್ಲಿ ಮತ್ತೆ ರಾಜ್ಯ ಚುನಾವಣೆಗಳಿವೆ ಈ ಕಾರಣಗಳಿಂದ ದಿನಾಂಕ ಅದಲು ಬದಲಾಗಬಹದು ಎನ್ನಲಾಗಿದೆ.
"ಯಾತ್ರೆಗಾಗಿ ಬಹಳ ಉತ್ಸಾಹ ಮತ್ತು ಶಕ್ತಿ ಇದೆ. ವೈಯಕ್ತಿಕವಾಗಿಯೂ ಇದು ಬೇಕು ಎಂದು ನಾನು ಭಾವಿಸುತ್ತೇನೆ. ಆದರೆ ಪೂರ್ವ - ಪಶ್ಚಿಮ ಯಾತ್ರೆಯ ಸ್ವರೂಪವು ದಕ್ಷಿಣದಿಂದ ಉತ್ತರಕ್ಕೆ ನಡೆದ ಭಾರತ್ ಜೋಡೋ ಯಾತ್ರೆಯ ಸ್ವರೂಪಕ್ಕಿಂತ ಭಿನ್ನವಾಗಿರಬಹುದು. ಭಾರತ್ ಜೋಡೋ ಯಾತ್ರೆಗಾಗಿ ಸಜ್ಜುಗೊಳಿಸಿದ ಅದೇ ವಿಸ್ತಾರವಾದ ಮೂಲಸೌಕರ್ಯವನ್ನು ಹೊಂದಿಲ್ಲದಿರಬಹುದು, ಕಡಿಮೆ ಪಾದಯಾತ್ರೆಗಳು ಭಾಗವಹಿಸುತ್ತಾರೆ. ಈ ಮಾರ್ಗದಲ್ಲಿ ಕಾಡಾನೆಗಳು ಮತ್ತು ನದಿಗಳು ಹೇರಳವಾಗಿರುವ ಕಾರಣ ಇದು ಬಹು-ಮಾದರಿ ಯಾತ್ರೆಯಾಗಲಿದೆ " ಎಂದು ಪಕ್ಷದ ವಕ್ತಾರ ಜೈರಾಮ್ ರಮೇಶ್ ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆಯ ಮೂಲಕ ಕೈಗೊಂಡ "ತಪಸ್ಯ" ವನ್ನು ಮುಂದುವರಿಸಲು ಪಕ್ಷವು ಹೊಸ ಯೋಜನೆಯನ್ನು ರೂಪಿಸಬೇಕು ಎಂದು ಕಾಂಗ್ರೆಸ್ ಸರ್ವಸದಸ್ಯ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿಯವರು ಹೇಳಿದ್ದಾರೆ. ಅದರಲ್ಲಿ ಇಡೀ ದೇಶದೊಂದಿಗೆ ತಾನೂ ಭಾಗವಹಿಸುವುದಾಗಿಯೂ ಹೇಳಿದ್ದರು. ಕಳೆದ ವರ್ಷ ಸೆಪ್ಟೆಂಬರ್ನಿಂದ ಈ ವರ್ಷದ ಜನವರಿವರೆಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಸುಮಾರು 4,000 ಕಿಮೀ ಉದ್ದದ ಕನ್ಯಾಕುಮಾರಿ - ಕಾಶ್ಮೀರ ಭಾರತ್ ಜೋಡೋ ಯಾತ್ರೆ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮತ್ತು ಶಕ್ತಿ ತುಂಬಿದೆ ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications