ಎಲ್ ಪಿಜಿ ನಂತರ, ಸೀಮೆ ಎಣ್ಣೆ ಮೇಲಿನ ಸಬ್ಸಿಡಿ ತೆರವಿಗೆ ನಿರ್ಧಾರ
ಸೀಮೆ ಎಣ್ಣೆ ಮೇಲಿನ ಸಹಾಯ ಧನ ಹಿಂಪಡೆಯಲು ಕೇಂದ್ರ ಸರ್ಕಾರ ನಿರ್ಧಾರ. ಇದಕ್ಕೆ ಪೂರಕವಾಗಿ ಪ್ರತಿ ಹದಿನೈದು ದಿನಗಳಿಗೊಮ್ಮೆ ಸೀಮೆ ಎಣ್ಣೆ ಬೆಲೆ ಏರಿಕೆ. ಪ್ರತಿ ಲೀಟರಿಗೆ 25 ಪೈಸೆಯಂತೆ ಹೆಚ್ಚಿಸಲು ನಿರ್ಧಾರ.
ನವದೆಹಲಿ, ಆಗಸ್ಟ್ 3: ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಮೇಲಿನ ಸಬ್ಸಿಡಿಯನ್ನು ಶೀಘ್ರವೇ ಸಂಪೂರ್ಣವಾಗಿ ತೆಗೆದು ಹಾಕುವ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ, ಸೀಮೆ ಎಣ್ಣೆಯ ಮೇಲಿರುವ ಸಬ್ಸಿಡಿಯನ್ನೂ ತೆಗೆದು ಹಾಕಲು ನಿರ್ಧರಿಸಿದೆ.
ಇತ್ತೀಚಿನ ವರ್ಷಗಲ್ಲಿ ತೈಲೋದ್ಯಮದ ವ್ಯವಹಾರವು ಷೇರುಪೇಟೆಯ ಮೇಲೆ ಹೆಚ್ಚಾಗಿ ಅವಲಂಬಿತವಾಗಿರುವುದರಿಂದ, ಸಬ್ಸಿಡಿ ಹಾಗೂ ಇನ್ನಿತರ ಸವಲತ್ತುಗಳು ಈ ಕ್ಷೇತ್ರದ ಖಾಸಗಿ ಕಂಪನಿಗಳ ಸುಗಮ ವಹಿವಾಟಿಗೆ ತೊಂದರೆ ಉಂಟು ಮಾಡಿದೆ.
ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಬರುವ ಆದಾಯವೂ ಸರಿಯಾಗಿ ಬರುತ್ತಿಲ್ಲವಾದ್ದರಿಂದ, ಸಬ್ಸಿಡಿಗಳನ್ನು ಹಂತ ಹಂತವಾಗಿ ತೆಗೆದುಹಾಕಲು ನಿರ್ಧರಿಸಲಾಗಿದೆ. ಇದಲ್ಲದೆ, ಜನರಿಗೆ ಈಗ ಅಡುಗೆ ಅನಿಲ ಸಿಲಿಂಡರ್ ಹಾಗೂ ಸೀಮೆ ಎಣ್ಣೆಗಳನ್ನು ಪೂರ್ತಿಯಾಗಿ ಸಬ್ಸಿಡಿ ರಹಿತ ದರಗಳಲ್ಲಿ ಕೊಳ್ಳುವ ಶಕ್ತಿಯೂ ಬಂದಿರುವುದರಿಂದ ಸಬ್ಸಿಡಿ ತೆಗೆದು ಹಾಕುವ ನಿರ್ಧಾರಕ್ಕೆ ಬಂದಿರುವುದಾಗಿ ಈಗಾಗಲೇ ಕೇಂದ್ರ ಸರ್ಕಾರ ತಿಳಿಸಿದೆ.

ಸೀಮೆಎಣ್ಣೆಯ ಸಬ್ಸಿಡಿಯನ್ನು ಹಂತಹಂತವಾಗಿ ತೆಗೆಯುವ ಉದ್ದೇಶದಿಂದಲೇ ಇನ್ನು ಮುಂದೆ ಪ್ರತಿ 15 ದಿನಕ್ಕೊಮ್ಮೆ ಪ್ರತಿ ಲೀಟರ್ ಸೀಮೆ ಎಣ್ಣೆ ಬೆಲೆಯನ್ನು 25 ಪೈಸೆಯಂತೆ ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications