ಎಐಸಿಸಿಗೆ ಹೊಸ ಅಧ್ಯಕ್ಷರ ನೇಮಕ ಯಾವಾಗ?: ಕಾಂಗ್ರೆಸ್ಸಿನ ಜಿ-23 ನಾಯಕರ ಪ್ರಶ್ನೆ
ನವದೆಹಲಿ, ಮಾರ್ಚ್ 11: ಪಂಚರಾಜ್ಯ ಚುನಾವಣೆ ಫಲಿತಾಂಶಗಳು ಹೊರ ಬೀಳುತ್ತಿದ್ದಂತೆ ಕಾಂಗ್ರೆಸ್ ವಲಯದಲ್ಲಿ ರಾಜಕೀಯ ಬೆಳವಣಿಕೆಗಳು ಚುರುಕು ಪಡೆದುಕೊಳ್ಳುತ್ತಿವೆ. ಎಐಸಿಸಿಗೆ ಹೊಸ ಅಧ್ಯಕ್ಷರ ನೇಮಕ ಯಾವಾಗ ಎಂಬ ಪ್ರಶ್ನೆಗೆ ಮತ್ತೆ ಮುನ್ನಲೆಗೆ ಬಂದಿದೆ.
ಐದು ರಾಜ್ಯಗಳಲ್ಲಿನ ಹೀನಾಯ ಸೋಲು ರಾಷ್ಟ್ರೀಯ ಪಕ್ಷ ಎನಿಸಿಕೊಂಡಿರುವ ಕಾಂಗ್ರೆಸ್ ವಲಯದ ನಾಯಕರ ನಿದ್ದೆ ಕೆಡಿಸಿದೆ. ಅದರಲ್ಲೂ ತುರ್ತು ಎಐಸಿಸಿ ನಾಯಕರ ಸಭೆ ಕರೆಯುವಂತೆ ಜಿ-23 ಸದಸ್ಯರು ಒತ್ತಾಯಿಸುತ್ತಿದ್ದಾರೆ.
'ಜಿ 23' ಅಥವಾ ಕಾಂಗ್ರೆಸ್ ವಲಯದಲ್ಲಿಯೇ ಗುರುತಿಸಿಕೊಂಡಿರುವ 23 ಭಿನ್ನಮತೀಯರ ಗುಂಪು ತುರ್ತು ಎಐಸಿಸಿ ಸಭೆಗೆ ಕರೆಯುವಂತೆ ಕೇಳಿಕೊಂಡಿದೆ. ಅಲ್ಲದೇ ಇತ್ತೀಚಿನ ಚುನಾವಣಾ ಸೋಲಿನ ಜವಾಬ್ದಾರಿ ಮತ್ತು ತಪ್ಪುಗಳನ್ನು ಸರಿಪಡಿಸಬೇಕಾಗಿದೆ ಎಂದು ಹೇಳಿದೆ.

ಜಿ-23 ಸದಸ್ಯರ ಸಭೆಯ ಗುರಿ ಏನಾಗಿತ್ತು?:
ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ, ಪಂಜಾಬ್ ಮತ್ತು ಮಣಿಪುರದಲ್ಲಿ ಪಕ್ಷ ಎದುರಿಸಿದ ಮುಖಭಂಗದ ಹಿಂದಿನ ಕಾರಣವನ್ನು ಕಂಡುಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ತುರ್ತು ಎಐಸಿಸಿ ಸಭೆ ಕರೆಯುವಂತೆ ಜಿ-23 ಸದಸ್ಯರು ಒತ್ತಾಯಿಸಿದ್ದಾರೆ. ಆ ಮೂಲಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ರಚನೆ, ಇತ್ತೀಚಿನ ಚುನಾವಣಾ ಸೋಲಿನ ಹೊಣೆಗಾರಿಕೆ ಮತ್ತು ಸಾಂಸ್ಥಿಕ ಚುನಾವಣೆಗಳನ್ನು ಪೂರ್ಣಗೊಳಿಸುವುದರ ಬಗ್ಗೆ ಚರ್ಚೆ ನಡೆಸಬೇಕಿದೆ.
ಇದರ ಮಧ್ಯೆ ಕಾಂಗ್ರೆಸ್ ಸಂಸದ ಕಪಿಲ್ ಸಿಬಲ್ ಮತ್ತು ಮನೀಶ್ ತಿವಾರಿ ಶುಕ್ರವಾರ ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರ ನಿವಾಸದಲ್ಲಿ ಸಭೆ ನಡೆಸಿದರು. ಮೂಲಗಳ ಪ್ರಕಾರ, ಅವರು ಪಕ್ಷದ ಕಳಪೆ ಪ್ರದರ್ಶನ ಮತ್ತು ಭವಿಷ್ಯದ ಕಾರ್ಯತಂತ್ರದ ಬಗ್ಗೆ ಚರ್ಚಿಸಿದರು.
ಪಂಜಾಬ್ ನೆಲದಲ್ಲೂ ಕುರ್ಚಿ ಕಳೆದುಕೊಂಡ ಕಾಂಗ್ರೆಸ್:
ಫೆಬ್ರವರಿ ತಿಂಗಳಿನಲ್ಲಿ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳ ಪೈಕಿ ಪಂಜಾಬ್ ರಾಜ್ಯವೊಂದರಲ್ಲಿ ಈ ಮೊದಲೇ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಆದರೆ ಈಗ ಕೈಯಲ್ಲಿದ್ದ ರಾಜ್ಯವನ್ನೂ ಕಳೆದುಕೊಳ್ಳುವ ಮೂಲಕ ಕಾಂಗ್ರೆಸ್ ಖಾಲಿ ಕೈ ಆಗಿದೆ. ಪಂಜಾಬ್ ಕಾಂಗ್ರೆಸ್ಸಿನಲ್ಲಿ ಆಗಿರುವ ಆಂತರಿಕ ಕಿತ್ತಾಟ ಹಾಗೂ ತಾವೇ ಮಾಡಿಕೊಂಡ ಎಡವಟ್ಟುಗಳಿಂದ ಪಕ್ಷಕ್ಕೆ ಇಂದು ಇಂಥ ಸ್ಥಿತಿ ಎದುರಾಗಿದೆ. ಇಂಥ ತಪ್ಪುಗಳನ್ನು ಗುರುತಿಸುವ ಹಾಗೂ ಭವಿಷ್ಯದಲ್ಲಿ ಪಕ್ಷವನ್ನು ಮುನ್ನಡೆಸುವ ನಿಟ್ಟಿನಲ್ಲಿ ಸೂಕ್ತ ಅಧ್ಯಕ್ಷರನ್ನು ಕೂಡಲೇ ನೇಮಿಸುವುದಕ್ಕೆ ಜಿ-23 ಸದಸ್ಯರು ಈಗ ಒತ್ತಾಯಿಸುತ್ತಿದ್ದಾರೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications