ಗುಲಾಂ ನಬಿ ಅಜಾದ್ ಬಳಿಕ 5000 ಕಾಂಗ್ರೆಸ್ ಕಾರ್ಯಕರ್ತರು ರಾಜೀನಾಮೆಗೆ ಸಿದ್ಧ
ನವದೆಹಲಿ, ಸೆಪ್ಟೆಂಬರ್ 01: ಕಾಂಗ್ರೆಸ್ ಪಕ್ಷದ ಹಿರಿಯ ಸದಸ್ಯರಲ್ಲಿ ಒಬ್ಬರಾಗಿದ್ದ ಜಮ್ಮು ಮತ್ತು ಕಾಶ್ಮೀರದ ಖ್ಯಾತ ರಾಜಕಾರಣಿ ಗುಲಾಂ ನಬಿ ಆಜಾದ್ ಅವರು ಪಕ್ಷದ ಎಲ್ಲಾ ಹುದ್ದೆಗಳು ಮತ್ತು ಸದಸ್ಯತ್ವಗಳಿಗೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ನ ಸುಮಾರು 5000 ಕಾರ್ಯಕರ್ತರು ರಾಜೀನಾಮೆಗೆ ಸಿದ್ಧವಾಗಿದ್ದಾರೆ ಎನ್ನಲಾಗಿದೆ.
ಇದೀಗ, ಕಾಂಗ್ರೆಸ್ನಿಂದ ಆತುರದ ನಿರ್ಗಮನದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ತನ್ನದೇ ಆದ ರಾಜಕೀಯ ಪಕ್ಷವನ್ನು ರಚಿಸುವ ಪ್ರಕ್ರಿಯೆಯಲ್ಲಿರುವ ಆಜಾದ್ ಅವರನ್ನು ಬೆಂಬಲಿಸಿ ದೇಶಾದ್ಯಂತ 5,000 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುದ್ದಿ ವರದಿಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರ ಮತ್ತು ಇತರ ಹಲವಾರು ರಾಜ್ಯಗಳ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಸ್ವತಃ ಪಕ್ಷಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ. ಇವರು ಹೆಚ್ಚಾಗಿ ಗುಲಾಂ ನಬಿ ಆಜಾದ್ ಅವರಿಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇದು ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಕಾಂಗ್ರೆಸ್ಗೆ ದೊಡ್ಡ ಹೊಡೆತವನ್ನು ಉಂಟುಮಾಡಿದೆ. 2023 ರಲ್ಲಿ ಜಮ್ಮು ಮತ್ತು ಕಾಶ್ಮೀರ ಚುನಾವಣೆಗಳು ನಡೆಯಲಿವೆ. ಗುಲಾಂ ನಬಿ ಆಜಾದ್ ಅವರ ನಿರ್ಗಮನದೊಂದಿಗೆ ಪಕ್ಷಕ್ಕೆ ಭಾರೀ ಹೊಡೆತ ಬೀಳಲಿದೆ.

ಅಲ್ಲದೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಭೂಪಿಂದರ್ ಸಿಂಗ್ ಹೂಡಾ ಇತ್ತೀಚೆಗೆ ಆಜಾದ್ ಅವರನ್ನು ಭೇಟಿ ಮಾಡಿರುವುದು ಹರಿಯಾಣ ಕಾಂಗ್ರೆಸ್ನಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. ರಾಹುಲ್ ಗಾಂಧಿ ಮತ್ತು ಅವರ ನಾಯಕತ್ವವನ್ನು ಬಹಿರಂಗವಾಗಿ ಟೀಕಿಸಿ, ಅವರನ್ನು "ಬಾಲಿಶ" ಮತ್ತು "ಅಪ್ರಬುದ್ಧ" ಎಂದು ಕರೆದು ಪಕ್ಷವನ್ನು ತೊರೆದಿದ್ದರಿಂದ ಆಜಾದ್ ಅವರೊಂದಿಗಿನ ಹೂಡಾ ಅವರ ಭೇಟಿಯು ವಿವಾದಾತ್ಮಕವಾಗಿ ಕಂಡು ಬಂದಿದೆ.
ಆನಂದ್ ಶರ್ಮಾ, ಭೂಪಿಂದರ್ ಸಿಂಗ್ ಹೂಡಾ ಮತ್ತು ಪೃಥ್ವಿರಾಜ್ ಚವಾಣ್ ಅವರು ಬುಧವಾರ ಗುಲಾಂ ನಬಿ ಆಜಾದ್ ಅವರನ್ನು ಭೇಟಿಯಾದ ಕೆಲವು ಕಾಂಗ್ರೆಸ್ ನಾಯಕರು. ಪಕ್ಷದ ಇತರ ನಾಯಕರು ಪಕ್ಷ ಮತ್ತು ಗಾಂಧಿ ಕುಟುಂಬಕ್ಕೆ ಅವರ ನಿಷ್ಠೆಯ ಬಗ್ಗೆ ಪ್ರಶ್ನೆಗಳನ್ನು ಎತ್ತುವಂತೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕಿ ಕುಮಾರಿ ಸೆಲ್ಜಾ ಅವರು ಹೂಡಾ ಅವರ ಈ ಕ್ರಮವು ಪಕ್ಷಕ್ಕೆ ಗೊಂದಲ ಉಂಟು ಮಾಡಿದೆ ಹಾಗೂ ನಿರಾಶೆಗೊಳಿಸಿದೆ ಎಂದು ಹೇಳಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ಅವರು, ಭೂಪಿಂದರ್ ಹೂಡಾ ಅವರು ಪಕ್ಷವನ್ನು ತೊರೆದಾಗ ಅಲ್ಲಿಗೆ ಹೋಗಿ ಗುಲಾಂ ನಬಿ ಆಜಾದ್ ಅವರನ್ನು ಭೇಟಿಯಾಗಿದ್ದರು. ಅಲ್ಲದೆ ನಾಯಕತ್ವವನ್ನು ದೂಷಿಸಿದರು. ನಮ್ಮ ನಾಯಕರ ವಿರುದ್ಧ ವೈಯಕ್ತಿಕ ಟೀಕೆಗಳನ್ನು ಸಹ ಮಾಡಿದ್ದಾರೆ, ಪಕ್ಷದ ಕಾರ್ಯಕರ್ತರನ್ನು ನಿರಾಶೆಗೊಳಿಸಿದ್ದಾರೆ. ಅವರನ್ನು ಗೊಂದಲಗೊಳಿಸಿದ್ದಾರೆ ಎಂದು ನಾನು ಹೇಳಿದ್ದೇನೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications