ಪೊಲೀಸರಿಗೆ ಮಾಹಿತಿ ನೀಡಿ ದೆಹಲಿಯ ಅಂಗಡಿಯೊಂದರಲ್ಲಿ ಗುಂಡಿನ ದಾಳಿ!
ಹೊಸದಿಲ್ಲಿ ಸೆಪ್ಟೆಂಬರ್ 19: ಬೈಕ್ನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಅಂಗಡಿಯೊಂದರಲ್ಲಿ ಮನಬಂದಂತೆ ಗುಂಡು ಹಾರಿಸಿದ ಘಟನೆ ಪೂರ್ವ ದೆಹಲಿಯ ಹೊಸ ಉಸ್ಮಾನ್ಪುರದಲ್ಲಿ ವರದಿಯಾಗಿದೆ. ಗುಂಡಿನ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ನಲ್ಲಿ ಬಂದ ಮೂವರ ಪೈಕಿ ಇಬ್ಬರು ಬೈಕ್ನಿಂದ ಇಳಿದರು. ಅದರಲ್ಲಿ ಒಬ್ಬರು 3 ಸುತ್ತು ಗುಂಡು ಹಾರಿಸಿದ್ದಾರೆ. ಎರಡು ಗುಂಡುಗಳನ್ನು ಅಂಗಡಿಯ ಮೇಲೆ ಹಾರಿಸಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಅಂಗಡಿ ತೆರೆದಿದ್ದರೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಒಬ್ಬರಿಗೆ ಕೊಂಚ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಪೊಲೀಸರ ಪ್ರಕಾರ ಗುಂಡುಗಳು ಅಂಗಡಿಯ ಮುಂಭಾಗದ ಗಾಜಿನ ಬಾಗಿಲುಗಳಿಗೆ ತಾಗಿವೆ. ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗುವ ಮೊದಲು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ದಾಳಿಯ ಬಗ್ಗೆ ಈಗಾಗಲೇ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಫೈರಿಂಗ್ ಘಟನೆಯ ಬಗ್ಗೆ ಸೆಪ್ಟೆಂಬರ್ 18 ರಂದು ರಾತ್ರಿ 9:45 ಕ್ಕೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಬರುವಷ್ಟರಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
"ಅಂಗಡಿ ಮಾಲೀಕರು ಮತ್ತು ಉದ್ಯೋಗಿಗಳನ್ನು ಪರೀಕ್ಷಿಸಲಾಗುತ್ತಿದೆ" ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳವನ್ನು ಪರಿಶೀಲಿಸಲು ಅಪರಾಧ ತಂಡವನ್ನು ಕರೆಸಲಾಗಿದೆ. ಆರೋಪಿಗಳನ್ನು ಗುರುತಿಸಲು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದ್ದು, ಘಟನೆಯ ಹಿಂದಿನ ಕಾರಣವನ್ನು ಕಂಡುಹಿಡಿಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.












Click it and Unblock the Notifications