ಪ್ರಧಾನಿ ಮೋದಿ ವಿರುದ್ಧ ವ್ಯಕ್ತಿಗತ ನಿಂದನೆ ಬಿಡಿ: ಕಾಂಗ್ರೆಸ್ ಮುಖಂಡ ಸಿಂಘ್ವಿ
ನವದೆಹಲಿ, ಆಗಸ್ಟ್ 23: ಕಾಂಗ್ರೆಸ್ಸಿನ ಹಿರಿಯ ನಾಯಕರ ಜೈರಾಮ್ ರಮೇಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲಿಸಿ ಹೇಳಿಕೆ ನೀಡಿದ ಬಳಿಕ ಮತ್ತೊಬ್ಬ ಹಿರಿಯ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರು ಮೋದಿ ಪರ ಟ್ವೀಟ್ ಮಾಡಿದ್ದಾರೆ.
"2014 ರಿಂದ 2019 ರವರೆಗೆ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಎಲ್ಲಾ ಕೆಲಸಗಳನ್ನೂ ತೆಗಳುವುದಕ್ಕೆ ಬರುವುದಿಲ್ಲ. ಹಾಗೊಮ್ಮೆ ಅವರು ಯಾವ ಉತ್ತಮ ಕೆಲಸವನ್ನೂ ಮಾಡಿಲ್ಲ ಎಂದಾಗಿದ್ದರೆ ಮತದಾರರು ಈ ಪ್ರಮಾಣದಲ್ಲಿ ಅವರ ಕೈ ಹಿಡಿಯುತ್ತಿರಲಿಲ್ಲ" ಎಂದು ಜೈರಾಮ್ ರಮೇಶ್ ಹೇಳಿದ್ದರು.
Always said demonising #Modi wrong. No only is he #PM of nation, a one way opposition actually helps him. Acts are always good, bad & indifferent—they must be judged issue wise and nt person wise. Certainly, #ujjawala scheme is only one amongst other good deeds. #Jairamramesh
— Abhishek Singhvi (@DrAMSinghvi) August 23, 2019
ಅಭಿಷೇಕ್ ಮನು ಸಿಂಘ್ವಿ ಅವರು ಟ್ವೀಟ್ ಮಾಡಿ, "ಪ್ರಧಾನಿ ಮೋದಿ ಅವರನ್ನು ವ್ಯಕ್ತಿಗತವಾಗಿ ನಿಂದಿಸುವುದು ಸರಿಯಲ್ಲ, ಅವರು ರಾಷ್ಟ್ರದ ಪ್ರಧಾನಿಯಾಗಿದ್ದು, ಪ್ರತಿ ನಡೆಯಲ್ಲೂ ಉತ್ತಮ, ಕಳಪೆ, ವಿರೋಧಗಳಿರುತ್ತವೆ, ಆದರೆ ಅದನ್ನು ವ್ಯಕ್ತಿಗತವಾಗಿ ನೋಡದೆ, ವಿಷಯಾಧಾರಿತವಾಗಿ ವಿಮರ್ಶಿಸಬೇಕಾಗಿದೆ. ಜೈರಾಮ್ ರಮೇಶ್ ಹೇಳಿದ್ದರಲ್ಲಿ ಅರ್ಥವಿದೆ. ಮೋದಿ ಅವರ ಉಜ್ವಲ ಯೋಜನೆ ನಿಜಕ್ಕೂ ಉತ್ತಮ ಕಾರ್ಯ" ಎಂದಿದ್ದಾರೆ.

ರಮೇಶ್ ಹೇಳಿದ್ದೇನು?: ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಎಲ್ಲಾ ಬಾರಿಯೂ ಋಣಾತ್ಮಕವಾಗಿಯೇ ನೋಡುವುದಕ್ಕೆ ಬರುವುದಿಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
Very true sir.Nation building is an ongoing process carried on by successive Govts.Hope Mr.Modi & team also realise this.Instead of trying 2 diminish Pt. Nehru they shd accept his & Congress’s immense contribution & carry it 4ward. Criticisms shd be on policies, not personalities https://t.co/Rrr5RXYeyH
— Sharmistha Mukherjee (@Sharmistha_GK) August 23, 2019
"ನಾನೇನು ಯಾರೋ ಮೋದಿಯನ್ನು ಹೊಗಳಬೇಕು ಎಂದು ಹೇಳುತ್ತಿಲ್ಲ. ಆದರೆ ಅವರು ಸರ್ಕಾರದಲ್ಲಿತಂದಿರುವ ಕೆಲವು ಬದಲಾವಣೆಯನ್ನು ಗಮನಿಸಬೇಕು" ಎಮದು ಹೇಳುತ್ತಿದ್ದೇನೆ ಎಂದು ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ್ ಹೇಳಿದರು.
"ಮೋದಿಯವರು ಮಾಡಿದ್ದೆಲ್ಲವನ್ನೂ ಋಣಾತ್ಮಕವಾಗಿಯೇ ನೋಡುವ ಅಗತ್ಯವಿಲ್ಲ. ಅವರ ಆಡಳಿತ ಸಂಪೂರ್ಣ ವಿಭಿನ್ನ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನೇ ನೋಡಿ. ಅದು ಎಷ್ಟು ಯಶಸ್ವಿಯಾಗಿದೆ!" ಎಂದು ಜೈರಾಮ್ ರಮೇಶ್ ಶ್ಲಾಘಿಸಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications