ಜೋಶಿಮಠದಂತೆ ಉತ್ತರ ಪ್ರದೇಶದ ಈ ನಗರದಲ್ಲೂ ಕಾಣಿಸಿಕೊಳ್ಳುತ್ತಿವೆ ಬಿರುಕುಗಳು: ಇದೇನಿದು ಹೊಸ ಅಪಾಯ?
ಲಖನೌ, ಜನವರಿ 11: ಉತ್ತರಾಖಂಡ್ನ ಜೋಶಿಮಠ ಪ್ರದೇಶದಲ್ಲಿ ಭೂಮಿ ಕುಸಿಯುತ್ತಿರುವ ಭೀತಿಯ ನಡುವೆಯೇ ಅಲಿಗಢದ ಕನ್ವರಿಗಂಜ್ ಪ್ರದೇಶದಲ್ಲಿ ಕೆಲವು ಮನೆಗಳಲ್ಲಿ ಹಠಾತ್ ಬಿರುಕು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
'ಕಳೆದ ಹಲವಾರು ದಿನಗಳಿಂದ ನಮ್ಮ ಕೆಲವು ಮನೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಇದರಿಂದ ನಾವು ಭಯಭೀತರಾಗಿದ್ದೇವೆ. ಈ ಬಗ್ಗೆ ದೂರು ನೀಡಿದ್ದೇವೆ. ಆದರೆ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಕೇವಲ ಭರವಸೆ ನೀಡುತ್ತಿದ್ದಾರೆ. ಮನೆಗಳು ಕುಸಿದು ಬೀಳುವ ಆತಂಕವಿದೆ' ಎಂದು ಸ್ಥಳೀಯರೊಬ್ಬರು ಶಶಿ ಹೇಳಿದರು.
ಸ್ಥಳೀಯರ ಪ್ರಕಾರ, ಸರ್ಕಾರದಿಂದ ಸ್ಮಾರ್ಟ್ ಸಿಟಿ ಯೋಜನೆಯಡಿ ಪೈಪ್ಲೈನ್ ಹಾಕಲಾಗಿದ್ದು, ಈಗ ಅದು ಸೋರಿಕೆಯಾಗುತ್ತಿದೆ. ಇದು ಬಿರುಕುಗಳ ಬೆಳವಣಿಗೆಗೆ ಕಾರಣವಾಗಿದೆ ಎಂದು ವರದಿಯಾಗಿದೆ.

'ಇದು ಸಂಭವಿಸುತ್ತಿರುವುದು ಮೂರ್ನಾಲ್ಕು ದಿನಗಳಿಂದ. ನಾವು ಈ ಘಟನೆಯ ಬಗ್ಗೆ ಇಲಾಖೆಗೆ ತಿಳಿಸಿದ್ದೇವೆ. ಆದರೆ ಇದುವರೆಗೆ ಯಾವುದೇ ನೆರವು ನೀಡಿಲ್ಲ. ನಾವು ಭಯಭೀತರಾಗಿ ಬದುಕುತ್ತಿದ್ದೇವೆ' ಎಂದು ಸ್ಥಳೀಯರಾದ ಅಫ್ಶಾ ಮಶ್ರೂರ್ ಹೇಳಿದ್ದಾರೆ.
ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ರಾಕೇಶ್ ಕುಮಾರ್ ಯಾದವ್ ಅವರು ಈ ಬಗ್ಗೆ ಗಮನ ಹರಿಸಿದ್ದು, ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
'ಕನ್ವರಿಗಂಜ್ ಪ್ರದೇಶದಲ್ಲಿ ಕೆಲವು ಮನೆಗಳಲ್ಲಿ ಬಿರುಕುಗಳು ಕಂಡುಬಂದಿವೆ ಎಂಬ ಮಾಹಿತಿ ನಮಗೆ ಬಂದಿದೆ. ಈ ವಿಷಯ ಇನ್ನೂ ಪೂರ್ಣ ಗಮನಕ್ಕೆ ಬಂದಿಲ್ಲ. ನಾವು ಈಗ ನಮ್ಮ ತಂಡವನ್ನು ಸ್ಥಳಕ್ಕೆ ಕಳುಹಿಸುತ್ತೇವೆ ಮತ್ತು ನಗರಸಭೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು' ಯಾದವ್ ಭರವಸೆ ನೀಡಿದ್ದಾರೆ.

ಉತ್ತರಾಖಂಡದ ಜೋಶಿಮಠದಲ್ಲಿ ಬಿರುಕು ಬಿಟ್ಟಿರುವ ಹಾಗೂ ತೀವ್ರವಾಗಿ ಹಾನಿಗೀಡಾಗಿರುವ ಕಟ್ಟಡಗಳನ್ನು ಇಂದಿನಿಂದ ನೆಲಸಮಗೊಳಿಸಿ ಅಕ್ಕಪಕ್ಕದ ಕಟ್ಟಡಗಳ ರಕ್ಷಣೆಗೆ ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೋಶಿಮಠವನ್ನು 'ಅಪಾಯ', 'ಬಫರ್' ಮತ್ತು 'ಸಂಪೂರ್ಣವಾಗಿ ಸುರಕ್ಷಿತ' ಎಂಬ ಮೂರು ವಲಯಗಳಾಗಿ ವಿಂಗಡಿಸಲಾಗಿದೆ. ಇದು ಭೂಮಿಯ ಕುಸಿತ ಅಥವಾ ನೆಲದ ಮೇಲ್ಮೈ ಮುಳುಗುವಿಕೆಯ ಅಪಾಯದ ಪ್ರಮಾಣವನ್ನು ಆಧರಿಸಿದೆ.

ಮುಳುಗುತ್ತಿರುವ ಜೋಶಿಮಠದಲ್ಲಿ ಒಟ್ಟು 678 ಕಟ್ಟಡಗಳು ಬಿರುಕು ಬಿಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚು ಹಾನಿಗೊಳಗಾದವುಗಳನ್ನು ಕೆಡವಲಾಗುತ್ತದೆ.
ಅಪಾಯದ ವಲಯದಲ್ಲಿರುವ ಹಲವಾರು ಮನೆಗಳಲ್ಲದೆ, ಎರಡು ಹೋಟೆಲ್ಗಳು - ಮೌಂಟ್ ವ್ಯೂ ಮತ್ತು ಮಲಾರಿ ಇನ್ಗಳನ್ನು ಸಹ ಕೆಡವಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications