ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ, ಕೇರಳ ಬಳಿಕ ಈಗ ಆಂಧ್ರ, ತೆಲಂಗಾಣದಲ್ಲಿ ಪ್ರವಾಹ ಭೀತಿ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 21: ಕೇರಳ, ಕೊಡಗು ಭಾಗದಲ್ಲಿ ಪ್ರವಾಹವನ್ನು ಕಂಡಾಗಿದೆ ಇದೀಗ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲೂ ಭೀಕರ ಪ್ರವಾಹ ಎದುರಾಗುವ ಎಲ್ಲಾ ಸಾಧ್ಯಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕೇರಳ, ಕೊಡಗು ಬಳಿಕ ಆಂಧ್ರದಲ್ಲಿ ಮಳೆ ಆರಂಭವಾಗಿದ್ದು, ಈಗಾಗಲೇ 100 ಮಿಲಿಮೀಟರ್‌ಗೂ ಅಧಿಕ ಮಳೆಯಾಗಿದೆ. ನೈಋತ್ಯ ಮುಂಗಾರು ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಹೆಚ್ಚಾಗಿದೆ, ರಾಯಲ್‌ಸೀಮಾ ಪ್ರದೇಶದಲ್ಲಿ ಅಷ್ಟಾಗಿ ಪ್ರಭಾವ ಗೋಚರಿಸುತ್ತಿಲ್ಲ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸಿಎಫ್ ​​​ಟಿಆರ್​ಐನಿಂದ ನೆರೆ ಸಂತ್ರಸ್ತರಿಗೆ ರುಚಿಯಾದ ಪೌಷ್ಟಿಕಾಂಶ ಆಹಾರ ಪೂರೈಕೆಸಿಎಫ್ ​​​ಟಿಆರ್​ಐನಿಂದ ನೆರೆ ಸಂತ್ರಸ್ತರಿಗೆ ರುಚಿಯಾದ ಪೌಷ್ಟಿಕಾಂಶ ಆಹಾರ ಪೂರೈಕೆ

ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರ ಪ್ರದೇಶ, ಒಡಿಶಾ ಹಾಗೂ ವಿದರ್ಭಾದಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಸೋಮವಾರ ಹಾಗೂ ಮಂಗಳವಾರ ಖಮ್ಮಮ್‌, ಭೂಪಲ್‌ಪಲ್ಲಿ, ಸೂರ್ಯಪೇಟೆ, ಅಡಿಲಾಬಾದ್‌, ನಿಜಾಮಾಬಾದ್‌, ನಲಗೊಂಡ, ಕಾಮರೆಡ್ಡಿ ಹಾಗೂ ಮೇದಕ್‌ ಪ್ರದೇಶದಲ್ಲಿ ಭಾರಿ ಮಳೆಯಾಗಿದೆ.

ಕೊಡಗನ್ನು ಮತ್ತೆ ಕಟ್ಟುವುದು ಸರ್ಕಾರದ ಸದ್ಯದ ಸವಾಲುಕೊಡಗನ್ನು ಮತ್ತೆ ಕಟ್ಟುವುದು ಸರ್ಕಾರದ ಸದ್ಯದ ಸವಾಲು

After Kerala and Karnataka, Andhra and Telangana in flood situation

ತೆಲಂಗಾಣ ಹಾಗೂ ಆಂಧ್ರ ಕರಾವಳಿ ಭಾಗದಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದ್ದು, ಆಗಸ್ಟ್ 22ರಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಮೆಡ್‌ಚಾಲ್‌, ಕಾಪ್ರಾ, ಮಲ್ಕಜ್‌ಗಿರಿ, ಪ್ರದೇಶದಲ್ಲಿ ಭಾರಿ ಮಳೆಯಾಗಿದೆ.

English summary
More than 100 millimeter of rain in Coastal Andhra Pradesh and North Telangana has created flood situation in many parts. After Karnataka and Kerala another state was in trouble with south western monsoon this year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X