ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಸಮುದಾಯ ಪ್ರಸರಣ
ನವದೆಹಲಿ, ಅಕ್ಟೋಬರ್.18: ಭಾರತದ ಹಲವು ಪ್ರದೇಶಗಳಲ್ಲಿ ಕೊರೊನಾವೈರಸ್ ಎಂಬ ಸಾಂಕ್ರಾಮಿಕ ಪಿಡುಗು ಸಮುದಾಯದ ಮಟ್ಟದಲ್ಲಿ ಹರಡುತ್ತಿದೆ. ಕಳೆದ 9 ತಿಂಗಳಿನಲ್ಲಿ ಮೊದಲ ಬಾರಿಗೆ ಕೇಂದ್ರ ಸರ್ಕಾರವು ಈ ಬಗ್ಗೆ ಒಪ್ಪಿಕೊಂಡಿದೆ.
"ಸಂಡೇ ಸಂವಾದ" ಕಾರ್ಯಕ್ರಮದ ಆರನೇ ಆವೃತ್ತಿಯಲ್ಲಿ ಅಧಿಕಾರಿಗಳ ಜೊತೆಗೆ ನಡೆಸಿದ ಸುದೀರ್ಘ ಚರ್ಚೆ ಬಳಿಕ ಕೇಂದ್ರ ಸಚಿವ ಡಾ.ಹರ್ಷವರ್ಧನ್ ಮಾತನಾಡಿದರು. ಪಶ್ಚಿಮ ಬಂಗಾಳದಲ್ಲಿ ಕೊವಿಡ್-19 ಸಮುದಾಯದ ಮಟ್ಟದಲ್ಲಿ ಹರಡುತ್ತಿದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು.
ಪಶ್ಚಿಮ ಬಂಗಾಳದ ಕೆಲವು ಪ್ರದೇಶಗಳಲ್ಲಿ ಹಾಗೂ ದೇಶದ ವಿವಿಧ ರಾಜ್ಯಗಳು ಮತ್ತು ಜಿಲ್ಲೆಗಳಲ್ಲಿ ಹೆಚ್ಚಿನ ಜನದಟ್ಟಣೆಯುಳ್ಳ ಸ್ಥಳಗಳಲ್ಲಿ ಕೊರೊನಾವೈರಸ್ ಸೋಂಕು ಸಮುದಾಯದ ಮಟ್ಟದಲ್ಲಿ ಹರಡುತ್ತಿದೆ. ಆದರೆ ಈ ಪರಿಸ್ಥಿತಿ ದೇಶದ ಎಲ್ಲ ರಾಜ್ಯಗಳು ಮತ್ತು ಸ್ಥಳಗಳಲ್ಲೂ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

ಕೊವಿಡ್-19 ಹರಡುವಿಕೆ ಹಂತಗಳ ಬಗ್ಗೆ ಮಾಹಿತಿ:
ಕಳೆದ 9 ತಿಂಗಳಿನಲ್ಲಿ ಕೊರೊನಾವೈರಸ್ ಸೋಂಕಿನ "ಸಮುದಾಯ ಪ್ರಸರಣ"ದ ಬಗ್ಗೆ ಕೇಂದ್ರ ಸರ್ಕಾರವು ಯಾವುದೇ ಕಾರಣಕ್ಕೂ ಒಪ್ಪಿಕೊಂಡಿರಲಿಲ್ಲ. ಇದೀಗ ಏಕಾಏಕಿಯಾಗಿ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆ ಆಗುತ್ತಿದ್ದು, ಈ ಬಗ್ಗೆ ಕೇರಳ ಮತ್ತು ನವದೆಹಲಿಯ ಆಮ್ ಆದ್ಮಿ ಸರ್ಕಾರವು ಮಾತನಾಡುತ್ತಿದೆ. ಪಶ್ಚಿಮ ಬಂಗಾಳ ಸರ್ಕಾರವು ಇದೀಗ ಸಮುದಾಯ ಪ್ರಸರಣದ ಬಗ್ಗೆ ಮಾತನಾಡುತ್ತಿದ್ದು, ಇದು ಮೂರನೇ ಹಂತದ ಹರಡುವಿಕೆಯಾಗಿದೆ. ನಾಲ್ಕನೇ ಹಂತದಲ್ಲಿ ಕೊವಿಡ್-19 ಸಾಂಕ್ರಾಮಿಕ ಪಿಡುಗು ಎಂದು ಗುರುತಿಸಿಕೊಳ್ಳಲಾಗುತ್ತದೆ. ಇನ್ನು, ಮೊದಲ ಹಂತದಲ್ಲಿ ಕೊವಿಡ್-19 ಸೋಂಕನ್ನು ಆಮದು ಮಾಡಿಕೊಂಡಿದ್ದು, ಮತ್ತು ಎರಡನೇ ಹಂತದಲ್ಲಿ ಸ್ಥಳೀಯ ಮಟ್ಟದಲ್ಲಿ ಸೋಂಕು ಪ್ರಸರಣ ಸಂಭವಿಸಿರುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.
ಕೊವಿಡ್-19 ನಿಯಮಗಳನ್ನು ಸಡಿಲಗೊಳಿಸಿದ್ದು, ಮುಂದಿನ ಒಂದು ತಿಂಗಳಿನಲ್ಲೇ ಕನಿಷ್ಠ 26 ಲಕ್ಷ ಕೊರೊನಾವೈರಸ್ ಪ್ರಕರಣಗಳು ಪತ್ತೆಯಾಗುವ ಸಾಧ್ಯತೆಯಿದೆ. ಭಾರತವು ಪ್ರಸ್ತುತ ಅಂದಾಜು 135 ಕೋಟಿಗೂ ಅಧಿಕ ಜನಸಂಖ್ಯೆಯನ್ನು ಹೊಂದಿದೆ. ಈ ಪೈಕಿ ಶೇ.30ರಷ್ಟು ಜನರಲ್ಲಿ ಮಾತ್ರ ರೋಗ ನಿರೋಧಕ ಶಕ್ತಿ ವೃದ್ಧಿಯಾಗಿದೆ. ಉಳಿದಂತೆ ಶೇ.70ರಷ್ಟು ಜನರು ಇತ್ಯಾದಿ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದಾರೆ ಎಂದು ತಜ್ಞರ ಸಮಿತಿಯು ತಿಳಿಸಿದೆ.
ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಚಿತ್ರಣ:
ಭಾರತದಲ್ಲಿ ಒಂದೇ ದಿನ 61,871 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 74,94,552ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1033 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 1,14,031ಕ್ಕೆ ಏರಿಕೆಯಾಗಿದೆ. ಭಾರತದಾದ್ಯಂತ 65,97,210 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 7,83,311 ಸಕ್ರಿಯ ಪ್ರಕರಣಗಳಿವೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications