'ಮೊಬೈಲ್ ಸಿಮ್ ಗೆ ಆಧಾರ ಜೋಡಣೆ ಕಡ್ಡಾಯ’ ಸುಪ್ರಿಂ ಆದೇಶ
ನವದೆಹಲಿ, ಜೂನ್ 6: ಮೊಬೈಲ್ ಸಿಮ್ ದುರುಪಯೋಗ ತಡೆಗಟ್ಟಲು ಸಿಮ್ ಬಳಕೆದಾರರ ವಿವರಗಳ ಜತೆ ಆಧಾರ್ ಸಂಖ್ಯೆ ಜೋಡಣೆ ಮಾಡುವಂತೆ ಸುಪ್ರಿಂ ಕೋರ್ಟ್ ನಿರ್ದೇಶನ ನೀಡಿದೆ. ವರ್ಷದೊಳಗೆ ಈ ಜೋಡಣೆ ಮುಗಿಸುವಂತೆ ಕೇಂದ್ರ ಸರಕಾರಕ್ಕೆ ಸೂಚಿಸಿದೆ.
ಈ ನಿರ್ದೇಶನದ ಬೆನ್ನಲ್ಲೇ ಮೊಬೈಲ್ ಸೇವಾ ಕಂಪೆನಿಗಳು ತಮ್ಮ ತಮ್ಮ ಗ್ರಾಹಕರಿಗೆ ಸಿಮ್ ಜತೆ ಆಧಾರ್ ಜೋಡಣೆ ಮಾಡುವಂತೆ ಸಂದೇಶಗಳನ್ನು ಕಳುಹಿಸುತ್ತಿವೆ. ಇದಕ್ಕಾಗಿ ಹತ್ತಿರದ ರಿಟೇಲರನ್ನು ಸಂಪರ್ಕಿಸಿ ಎಂದು ಅವು ಗ್ರಾಹಕರನ್ನು ಕೋರಿಕೊಂಡಿವೆ.[ಆನ್ ಲೈನ್ ನಲ್ಲಿ ಪ್ಯಾನ್ಗೆ ಆಧಾರ್ ಜೋಡಿಸುವುದು ಹೇಗೆ?]

ಆಧಾರ್ ಜೋಡನೆ ಮಾಡುವುದು ಹೇಗೆ?
ಈ ಜೋಡಣೆ ನಿಯಮ ಎಲ್ಲ ಪೋಸ್ಟ್ ಪೇಯ್ಡ್ ಮತ್ತು ಪ್ರೀಪೇಯ್ಡ್ ಸಿಮ್ ಬಳಕೆದಾರರಿಗೆ ಅನ್ವಯವಾಗಲಿದೆ. ಬಯೋಮೆಟ್ರಿಕ್ ಮೇಷಿನ್ ಹೊಂದಿರುವ ಸಮೀಪದ ಮೊಬೈಲ್ ಅಂಗಡಿಗಳಿಗೆ ತೆರಳಿ ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡಬಹುದಾಗಿದೆ.
ಕಳೆದ ವಾರ ಮೊಬೈಲ್ ಸಿಮ್ ದುರ್ಬಳಕೆ ತಡೆಗೆ ಏನೇನು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ವಿವರಗಳನ್ನು ಸುಪ್ರಿಂ ಕೋರ್ಟ್ ಕೇಂದ್ರ ಸರಕಾರದ ಬಳಿ ಕೇಳಿಕೊಂಡಿತ್ತು. ಅದರಂತೆ ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ನೇತೃತ್ವದ ತ್ರಿಸದಸ್ಯ ಪೀಠ ಆಧಾರ್ ಜೋಡಣೆಯ ಆದೇಶ ನೀಡಿದೆ. ಒಂದು ವರ್ಷದೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಬೇಕು ಎಂದು ಕೋರ್ಟ್ ಸ್ಪಷ್ಟ ಸೂಚನೆ ನೀಡಿದೆ.[ಪಾಕಿಸ್ತಾನಿ ಪ್ರಜೆಗಳಿಗೆ ಆಧಾರ್ ಮಾಡಿಸಲು ನೆರವಾದ ಬೆಂಗಳೂರಿನ ವೈದ್ಯೆ!]
ಇನ್ನು ರೀಚಾರ್ಜ್ ವೇಳೆಯೂ ಅರ್ಜಿ ತುಂಬಿ ಆಧಾರ್ ಜೋಡನೆ ಮಾಡಲು ಗ್ರಾಹಕರಿಗೆ ಅವಕಾಶ ಕಲ್ಪಿಸುವಂತೆ ಕೇಂದ್ರ ಸರಕಾರಕ್ಕೆ ಸರ್ವೋಚ್ಚ ನ್ಯಾಯಾಲಯ ಸೂಚನೆ ನೀಡಿದೆ. ಜತೆಗೆ ಸಿಮ್ ಕಾರ್ಡ್ ಗಳ ದುರ್ಬಳಕೆ ತಡೆಯಲು ಪ್ರತ್ಯೇಕ ನೀತಿ ಜಾರಿಗೆ ತರುವಂತೆಯೂ ಹೇಳಿದೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications