ಮೆಲುದನಿಯ 'ಗಾಯಕ'ನನ್ನು ಅಟ್ಟಿದ ಸೇನೆ 'ಹುಲಿಗಳು'
ಪುಣೆ, ಏ.23: ಮೆಲುದನಿಯ ಪಾಕಿಸ್ತಾನ ಗಾಯಕ ಆತೀಫ್ ಅಸ್ಲಮ್ ಗಾನಗೋಷ್ಠಿಯನ್ನು ನಿಲ್ಲುಸುವಂತೆ ಶಿವ ಸೇನಾ ಹುಲಿಗಳು ಕೊನೆಗೂ ಯಶಸ್ವಿಯಾಗಿವೆ.
ಇದೇ ಆತೀಫ್ ಅಸ್ಲಮ್ ಬಾಲಿವುಡ್ ನಲ್ಲಿ ಅನೇಕ ಹಾಡುಗಳನ್ನು ಹಾಡಿ ಜನಪ್ರಿಯರಾಗಿದ್ದ ಕಿವಿ ಮುಚ್ಚಿ ಕುಳಿತ್ತಿದ್ದ ಸೇನೆಯ ಹುಲಿಗಳು ಈಗ ಮಾತ್ರ ಆರ್ಭಟಿಸಿವೆ. ದೇಶ ಮೊದಲು ಆಮೇಲೆ ಕಲೆ, ಕಲಾವಿದ ಎಂಬ ಡೈಲಾಗ್ ಬೆದರಿದ ಆಯೋಜಕರ ಬಾಯಲ್ಲಿ ಹೇಳಿಸಿದ್ದಾರೆ.
ಪುಣೆಯ ಹಡಪ್ಸರ್ ನಲ್ಲಿ ಏಪ್ರಿಲ್ 25ರಂದು ನಡೆಯಬೇಕಿದ್ದ ಪಾಪ್ ಗಾಯಕ ಅತೀಫ್ ಅಸ್ಲಮ್ ಲೈವ್ ಮ್ಯೂಸಿಕ್ ಕಾರ್ಯಕ್ರಮ ರದ್ದಾಗಿದೆ. ಮ್ಯೂಸಿಕ್ ಶೋ ಟಿಕೆಟ್ ಖರೀದಿಸಿದ್ದ ಅಭಿಮಾನಿಗಳಿಗೆ ದುಡ್ಡು ವಾಪಸ್ ಮಾಡಲಾಗುತ್ತದೆ ಎಂದು ಆಯೋಜಕರಾದ ಸಂಜಯ್ ಸಾಠೆ ಅವರು ಎನ್ ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ನಮ್ಮ ರಾಷ್ಟ್ರಕ್ಕೆ ಮೊದಲು ಆದ್ಯತೆ, ದೇಶ ಮೊದಲು ನಂತರ ಕಲಾವಿದ, ಶಿವಸೇನೆ ಸಂಸ್ಥಾಪಕ ದಿವಂಗತ ಬಾಳಾ ಸಾಹೇಬ್ ಠಾಕ್ರೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆಯುತ್ತಿದ್ದೇವೆ ಎಂದು ಸಂಜಯ್ ಹೇಳಿದ್ದಾರೆ.
ಶಿವಸೇನೆಯ ಶಾಸಕ ಮಹಾದೇವ್ ಬಾಬರ್ ಅವರು ಮಾತನಾಡಿ, ಪಾಕಿಸ್ತಾನದ ಮತ್ತು ಅಲ್ಲಿಂದ ಬರುವ ಕಲಾವಿದರನ್ನು ಶಿವಸೇನೆ ವಿರೋಧಿಸುವಲ್ಲಿ ಅರ್ಥವಿದೆ. ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘಿಸಿ, ಸದಾಕಾಲ ಭಾರತದ ಮೇಲೆ ಗುಂಡಿನ ದಾಳಿ ನಡೆಸಿ ನಮ್ಮ ಬೆನ್ನಿಗೆ ಚೂರಿ ಇರಿಯುವ ದೇಶದ ಕಲಾವಿದರನ್ನು ಕರೆದು ತಂದು ಆದರ ಆತಿಥ್ಯ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
-
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Asha Bhosle: ಆಶಾ ಭೋಸ್ಲೆಗೆ 16ನೇ ವರ್ಷದಲ್ಲೇ ಮದುವೆ, 2ನೇ ಮದುವೆಯಲ್ಲೂ ಸಂಕಷ್ಟ - ಕಾರಣವೇನು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle: ಸಂಗೀತ ಜಗತ್ತಿಗೆ ಆಶಾ ಭೋಸ್ಲೆ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
US-Iran Talks: ಪಾಕ್ ನೆಲದಲ್ಲಿ 21 ಗಂಟೆಗಳ ಸಂಧಾನ ಮಾತುಕತೆ ವಿಫಲ: ಹೆಚ್ಚಿದ ಯುದ್ಧ ಭೀತಿ- ಪ್ರಮುಖಾಂಶಗಳು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ












Click it and Unblock the Notifications