ಐಎನ್ಎಕ್ಸ್ ಮೀಡಿಯಾ ಪ್ರಕರಣ, ಪಿ. ಚಿದಂಬರಂ ವಿಚಾರಣೆ ಸಾಧ್ಯತೆ
ನವದೆಹಲಿ, ಮಾರ್ಚ್ 2: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂರನ್ನು ಸಿಬಿಐ ಪ್ರಶ್ನೆ ಮಾಡುವ ಸಾಧ್ಯತೆ ಇದೆ. ಸದ್ಯ ಸಿಬಿಐ ಕಾರ್ತಿ ಚಿದಂಬರಂರನ್ನು ವಿಚಾರಣೆ ನಡೆಸುತ್ತಿದ್ದು ಮುಂದಿನ ದಿನಗಳಲ್ಲಿ ಮಾಜಿ ಹಣಕಾಸು ಸಚಿವರಿಗೂ ಸಮನ್ಸ್ ಜಾರಿ ಮಾಡುವ ಸಾಧ್ಯತೆ ಇದೆ.
ಈ ವಾರದ ಆರಂಭದಲ್ಲಿ ಕಾರ್ತಿ ಚಿದಂಬರಂರನ್ನು ಸಿಬಿಐ ಬಂಧಿಸಿತ್ತು. ಮತ್ತು ಗುರುವಾರ ಅವರನ್ನು ಐದು ದಿನಗಳ ಸಿಬಿಐ ಕಸ್ಟಡಿಗೆ ನೀಡಲಾಗಿತ್ತು. ಇದೀಗ ಸಿಬಿಐ ಕಾರ್ತಿ ಚಿದಂಬರಂರನ್ನು ತೀವ್ರ ವಿಚಾರಣೆ ನಡೆಸುತ್ತಿದೆ.
ವಿದೇಶಿ ಹೂಡಿಕೆ ಉತ್ತೇಜನ ಮಂಡಳಿಯ ಅಂಗೀಕಾರ ಪಡೆದುಕೊಳ್ಳಲು ಕಾರ್ತಿ ಚಿದಂಬರಂ ತಮ್ಮ ತಂದೆಯ ಕಚೇರಿಯ ಪ್ರಭಾವವನ್ನು ಬಳಸಿಕೊಂಡಿದ್ದಾರೆ ಎಂಬ ಆರೋಪಗಳಿವೆ. ಜತೆಗೆ ಇಂದ್ರಾಣಿ ಮುಖರ್ಜಿ ಮತ್ತು ಪೀಟರ್ ಮುಖರ್ಚಿ ಚಿದಂಬರಂರನ್ನು ಭೇಟಿಯಾಗಿದ್ದಾಗ ತಮ್ಮ ಮಗನಿಗೆ ಸಹಾಯ ಮಾಡುವಂತೆ ಹೇಳಿದ್ದರು ಎಂದು 'ಇಡಿ' ವರದಿಯನ್ನೂ ಸಲ್ಲಿಸಿದೆ.

ಈ ಹಿನ್ನಲೆಯಲ್ಲಿ 'ಒನ್ಇಂಡಿಯಾ'ಗೆ ಪ್ರತಿಕ್ರಿಯೆ ನೀಡಿರುವ ಸಿಬಿಐ ಅಧಿಕಾರಿಗಳು, "ಎಲ್ಲಾ ದಾಖಲೆಗಳನ್ನೂ ಪರಿಶೀಲನೆ ನಡೆಸಲಾಗುತ್ತಿದೆ. ಒಂದೊಮ್ಮೆ ಅನುಮಾನಗಳು ಮೂಡಿದಲ್ಲಿ ಪರಿಹರಿಸಲು ಚಿದಂಬರಂರನ್ನೂ ಪ್ರಶ್ನೆ ಮಾಡಬಹುದು. ಆದರೆ ಈ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಸದ್ಯಕ್ಕೆ ಮಾರ್ಚ್ 5ರವರೆಗೆ ನಮ್ಮ ವಶದಲ್ಲಿರುವ ಕಾರ್ತಿ ಚಿದಂಬರಂ ವಿಚಾರಣೆ ನಡೆಸುತ್ತಿದ್ದೇವೆ," ಎಂದು ಹೇಳಿದ್ದಾರೆ.
ಕಾರ್ತಿ ಚಿದಂಬರಂರನ್ನು ಅವರ ಲೆಕ್ಕಪರಿಶೋಧಕ ಭಾಸ್ಕರ ರಾಮನ್ ಜತೆ ಮುಖಾಮುಖಿ ಪ್ರಶ್ನೆ ಮಾಡಲಾಗುತ್ತದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ. ಭಾಸ್ಕರ್ ರಾಮನ್ ಕಾರ್ತಿ ಚಿದಂಬರಂರ ಎಲ್ಲಾ ಆರ್ಥಿಕ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications