ವೈರಲ್ ಆಯ್ತು ಪ್ರಿಯಾಂಕಾ ನೀಡಿದ್ದ ಆಜಾನ್ ಬಗೆಗಿನ ಹೇಳಿಕೆ ವಿಡಿಯೋ
2016ರಲ್ಲಿ ಪ್ರಿಯಾಂಕಾ ಚೋಪ್ರಾ ಅಭಿನಯದ ಜೈ ಗಂಗಾಜಲ್ ಎಂಬ ಚಿತ್ರ ಬಿಡುಗಡೆಯಾಗಿತ್ತು. ಆ ಚಿತ್ರದ ಬಿಡುಗಡೆಗೂ ಮುನ್ನ ಆ ಚಿತ್ರದ ಪ್ರಚಾರಕ್ಕಾಗಿ ಭೋಪಾಲ್ ಗೆ ಆಗಮಿಸಿದ್ದಾಗ ನೀಡಿದ್ದ ಹೇಳಿಕೆಯ ವಿಡಿಯೋ ಅದು.
ನವದೆಹಲಿ, ಏಪ್ರಿಲ್ 19: ಮುಸ್ಲಿಮರ ಪ್ರಾರ್ಥನಾ ಕರೆ (ಆಜಾನ್) ಬಗ್ಗೆ ಟ್ವೀಟ್ ಮಾಡಿ ಹಿಂದಿ ಗಾಯಕ ಸೋನು ನಿಗಂ ವಿವಾದಕ್ಕೀಡಾದ ಬೆನ್ನಲ್ಲೇ ಕಳೆದ ವರ್ಷ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಆಜಾನ್ ಬಗ್ಗೆ ನೀಡಿದ್ದ ಹೇಳಿಕೆಯುಳ್ಳ ವಿಡಿಯೋವೊಂದು ಈಗ ವೈರಲ್ ಆಗಿದೆ.
2016ರಲ್ಲಿ ಪ್ರಿಯಾಂಕಾ ಚೋಪ್ರಾ ಅಭಿನಯದ 'ಜೈ ಗಂಗಾಜಲ್' ಎಂಬ ಚಿತ್ರ ಬಿಡುಗಡೆಯಾಗಿತ್ತು. ಆ ಚಿತ್ರದ ಬಿಡುಗಡೆಗೂ ಮುನ್ನ ಆ ಚಿತ್ರದ ಪ್ರಚಾರಕ್ಕಾಗಿ ಭೋಪಾಲ್ ಗೆ ಆಗಮಿಸಿದ್ದ ಪ್ರಿಯಾಂಕಾ ಚೋಪ್ರಾ ಪ್ರೇಕ್ಷಕರೊಂದಿಗೆ ಸಂವಾದ ನಡೆಸಿದ್ದರು. ಆ ಸಂವಾದದ ವಿಡಿಯೋ ತುಣುಕು ಅದು.

ಆಗ, ಅವರಿಗೆ 'ನಿಮ್ಮ ದಿನಚರಿಯಲ್ಲಿ ನಿಮಗಿಷ್ಟವಾಗುವ ಸಮಯ ಯಾವುದು?' ಎಂದು ಕೇಳಿದರು. ಇದಕ್ಕೆ ಉತ್ತರಿಸಿದ್ದ ಪ್ರಿಯಾಂಕಾ ಚೋಪ್ರಾ, ''ನಮ್ಮ ಮನೆಯ ಆಸುಪಾಸಿನಲ್ಲಿ ಸುಮಾರು 6 ಮಸೀದಿಗಳಿವೆ. ನಾನು ಪ್ರತಿದಿನ ಶೂಟಿಂಗ್ ಮುಗಿಸಿ ಸಂಜೆ ಮನೆಗೆ ಹೋದಾಗ ಈ ಆರೂ ಮಸೀದಿಗಳಿಂದ ಪ್ರಾರ್ಥನೆಯ ಕೂಗು (ಆಜಾನ್) ಕೇಳಿಬರುತ್ತದೆ. ತಕ್ಷಣವೇ ನಾನು ನನ್ನ ಮನೆಯಲ್ಲಿ ನೆಲದ ಮೇಲೆ ಕುಳಿತು ಪ್ರಾರ್ಥಿಸುತ್ತೇನೆ. ನನಗದು ಖುಷಿ ಕೊಡುವ ವಿಚಾರ'' ಎಂದು ಹೇಳಿದ್ದಾರೆ.
ಕೆಲ ದಿನಗಳ ಹಿಂದೆ, ಹಿಂದಿ ಗಾಯಕ ಸೋನು ನಿಗಂ ಅವರು, ''ನಾನು ಮುಸ್ಲಿಮನಲ್ಲ. ಹಾಗಾಗಿ, ಆಜಾನ್ ಕೂಗಿಗೆ ನಾನು ಏಕೆ ಬೆಳ್ಳಂಬೆಳಗ್ಗೆ ಏಳಬೇಕು? ಧಾರ್ಮಿಕವಾಗಿ ಹೀಗೆ ಇತರರಿಗೆ ತೊಂದರೆ ನೀಡುವ ಸಂಸ್ಕೃತಿ ಯಾವಾಗ ಮುಗಿಯುತ್ತದೋ ಕಾಣೆ'' ಎಂದು ಟ್ವೀಟ್ ಮಾಡಿ ವಿವಾದಕ್ಕೀಡಾಗಿದ್ದಾರೆ.
ಅವರ ವಿವಾದವು ರಾಷ್ಟ್ರಮಟ್ಟದಲ್ಲಿ ಆಜಾನ್ ಬೇಕೇ, ಬೇಡವೇ ಎಂಬುದರ ಬಗ್ಗೆ ಪರ ಹಾಗೂ ವಿರೋಧಗಳು ಬರುತ್ತಿವೆ. ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಈ ಹಿನ್ನೆಲೆಯಲ್ಲಿ, ಪ್ರಿಯಾಂಕಾ ಅವರ ಆಜಾನ್ ಪರವಾಗಿನ ಈ ಹೇಳಿಕೆ ಈಗ ಮತ್ತೆ ಚಾಲ್ತಿಗೆ ಬಂದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications