ಟ್ವಿಟ್ಟರ್ ಸ್ವಚ್ಛತಾ ಅಭಿಯಾನ, ಹಿಂಬಾಲಕರನ್ನು ಕಳೆದುಕೊಂಡ ಮೋದಿ
Recommended Video

ಬೆಂಗಳೂರು, ಜುಲೈ 13: ನಕಲಿ ಹಾಗೂ ಸ್ವಯಂಚಾಲಿತ ಖಾತೆಗಳ ವಿರುದ್ಧ ಸ್ವಚ್ಛತಾ ಅಭಿಯಾನ ಆರಂಭಿಸಿರುವ ಟ್ವಿಟ್ಟರ್ ಅನೇಕ ಶಂಕಾಸ್ಪದ ಖಾತೆಗಳನ್ನು ರದ್ದುಗೊಳಿಸಿದೆ. ಟ್ವಿಟ್ಟರ್ ನ ಈ ಕ್ರಮದಿಂದಾಗಿ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಅನೇಕ ಹಿಂಬಾಲಕರನ್ನು ಕಳೆದುಕೊಂಡಿದ್ದಾರೆ.
ಹಲವಾರು ಟ್ವಿಟ್ಟರ್ ಬಳಕೆದಾರರು ತಮ್ಮ ಹಿಂಬಾಲಕರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಅನೇಕ ವಾಮಮಾರ್ಗವನ್ನು ಅನುಸರಿಸಿದ್ದಾರೆ. ಹೀಗಾಗಿ, ಗಣ್ಯರು ಸೇರಿದಂತೆ ಅನೇಕರ ಖಾತೆಗೆ ನಕಲಿ ಖಾತೆಗಳ ಸಂಖ್ಯೆಯೂ ಇದೆ ಎಂಬ ಆರೋಪ ಕೇಳಿಬಂದಿತ್ತು.
ವಿಶೇಷವಾಗಿ ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು, ಪಕ್ಷದ ಅಧಿಕೃತ ಖಾತೆಗೆ ಅನೇಕ ನಕಲಿ ಖಾತೆಗಳು ಜೋಡಣೆಯಾಗುವುದನ್ನು ತಡೆಗಟ್ಟಲು ಇಲ್ಲಿ ತನಕ ಟ್ವಿಟ್ಟರ್ ವಿಫಲವಾಗಿತ್ತು. ಆದರೆ, ಈಗ ಉದ್ಯಮಿಗಳು ಹಾಗೂ ಮನರಂಜನಾ ಕ್ಷೇತ್ರದ ಗಣ್ಯರ ಟ್ವಿಟ್ಟರ್ ಖಾತೆಗಳನ್ನು ದುರ್ಬಳಕೆ ತಡೆಗಟ್ಟಲು ಟ್ವಿಟ್ಟರ್ ಕ್ರಮ ಜರುಗಿಸುತ್ತಿದೆ.
ಟ್ವಿಟ್ಟರ್ ಈ ಕ್ರಮದಿಂದಾಗಿ ಹಲವರ ಹಿಂಬಾಲಕರ ಸಂಖ್ಯೆ ಕಡಿಮೆಯಾಗಲಿದೆ. ಆದರೆ, ಇದರಿಂದ ನಿಖರವಾದ ಅನುಯಾಯಿಗಳ ಸಂಖ್ಯೆ ತಿಳಿಯಲಿದೆ ಎಂದು ಟ್ವಿಟ್ಟರ್ ಹೇಳಿದೆ. ಕೀಹೋಲ್ ಡೇಟಾ ಸಂಸ್ಥೆ ಪ್ರಕಾರ, ಜನಪ್ರಿಯ ಖಾತೆಗಳ ಸರಾಸರಿ ಶೇ2ರಷ್ಟು ಹಿಂಬಾಲಕರು ಕಡಿಮೆಯಾಗಲಿದೆ.

ಲಕ್ಷಾಂತರ ಹಿಂಬಾಲಕರನ್ನು ಕಳೆದುಕೊಂಡ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು 284,746 ಹಿಂಬಾಲಕರನ್ನು ಕಳೆದುಕೊಂಡಿದ್ದಾರೆ ಎಂದು ನ್ಯೂಸ್ 18 ವರದಿ ಮಾಡಿದೆ. ಪ್ರಧಾನಿ ಮೋದಿ ಸುಮಾರು 43 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸುಮಾರು 17,000 ನಕಲಿ ಹಿಂಬಾಲಕರನ್ನು ಕಳೆದುಕೊಂಡಿದ್ದಾರೆ.

ಶಶಿ ತರೂರ್
ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರು ಟ್ವಿಟ್ಟರ್ ನಲ್ಲಿ ಸಕ್ರಿಯರಾಗಿರುತ್ತಾರೆ. ಟ್ವಿಟ್ಟರ್ ಅಭಿಯಾನದಿಂದಾಗಿ ಶಶಿ ಅವರು ಕಳೆದ 24 ಗಂಟೆಗಳಲ್ಲಿ ಸುಮಾರು 151,509 ಹಿಂಬಾಲಕರನ್ನು ಕಳೆದುಕೊಂಡಿದ್ದಾರೆ

ಅಮಿತ್ ಶಾ
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು 33,363 ಹಿಂಬಾಲಕರನ್ನು ಕಳೆದುಕೊಂಡಿದ್ದಾರೆ.

ಅರವಿಂದ್ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸುಮಾರು 91,555 ಹಿಂಬಾಲಕರನ್ನು ಕಳೆದುಕೊಂಡಿದ್ದಾರೆ.

ಡೊನಾಲ್ಡ್ ಟ್ರಂಪ್
ಸುಮಾರು 53.4 ಮಿಲಿಯನ್ ಹಿಂಬಾಲಕರನ್ನು ಹೊಂದಿರುವ ವಿಶ್ವದ ಅಗ್ರಗಣ್ಯ ಟ್ವಿಟ್ಟರ್ ಖಾತೆದಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸುಮಾರು 100,000 ಹಿಂಬಾಲಕರನ್ನು ಕಳೆದುಕೊಂಡಿದ್ದಾರೆ.

ಬರಾಕ್ ಒಬಾಮಾ
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರು 104 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದು, ಸುಮಾರು 400,000 ಹಿಂಬಾಲಕರನ್ನು ಕಳೆದುಕೊಂಡಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications