ಮಾಫಿಯಾಗಳ ಪೈಶಾಚಿಕ ಕೃತ್ಯಕ್ಕೆ ಮತ್ತೊಬ್ಬ ಪತ್ರಕರ್ತ ಬಲಿ
ಭೋಪಾಲ್, ಹೂ.22: ಸಮಾಜವಾದಿ ಪಕ್ಷದ ಶಾಸಕ ರಾಮಮೂರ್ತಿ ವರ್ಮ ವಿರುದ್ಧ ಫೇಸ್ಬುಕ್ನಲ್ಲಿ ಬರೆದ ತಪ್ಪಿಗೆ ಪತ್ರಕರ್ತನೊಬ್ಬನನ್ನು ಸಜೀವ ದಹನ ಮಾಡಿದ ಘಟನೆ ಬೆನ್ನಲ್ಲೆ ಮಧ್ಯಪ್ರದೇಶದಲ್ಲಿ ಮರಳು ಮಾಫಿಯಾದವರು ಪತ್ರಕರ್ತನೊಬ್ಬನನ್ನು ಬಲಿ ತೆಗೆದುಕೊಂಡಿದ್ದಾರೆ.
ರಿಯಲ್ ಎಸ್ಟೇಟ್ ದಂಧೆ, ಮರಳು ಮಾಫಿಯಾ, ಭೂ ಹಗರಣ ವಿರುದ್ಧ ಕೋರ್ಟ್ ಕೇಸೊಂದನ್ನು ಹಿಂಪಡೆಯಲು ಪತ್ರಕರ್ತ 40 ವರ್ಷದ ಸಂದೀಪ್ ಕೊಥಾರಿ ನಿರಾಕರಿಸಿದ್ದಕ್ಕೆ ಅವರ ಪ್ರಾಣಕ್ಕೆ ಎರವಾಗಿದೆ. [ಶಾಸಕನ ವಿರುದ್ಧ ದನಿ ಎತ್ತಿದ ಪತ್ರಕರ್ತನ ಸುಟ್ಟು ಕೊಂದರೇ?]
ಹಿಂದಿ ಪತ್ರಿಕೆಯೊಂದರ ವರದಿಗಾರರಾಗಿರುವ ಸಂದೀಪ್ರನ್ನು ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯ ಕಟಂಗಿ ಎಂಬಲ್ಲಿಂದ ಶುಕ್ರವಾರ ಅಪಹರಿಸಲಾಗಿತ್ತು. ಇದಾದ ಎರಡು ದಿನಗಳಲ್ಲಿ ಮಹಾರಾಷ್ಟ್ರದ ನಾಗ್ಪುರದ ಬುಟಿಬೊರಿ ಅರಣ್ಯ ಪ್ರದೇಶದ ಬಳಿ ಇರುವ ರೈಲ್ವೆ ಹಳಿಗಳ ಬಳಿ ಶವವಾಗಿ ಪತ್ತೆಯಾಗಿದ್ದಾರೆ.

ಸಂದೀಪ್ ಅವರ ದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಾದ ವಿಶಾಲ್ ತಂಡಿ, ಬ್ರಿಜೇಶ್ ದುಹರ್ವಾಲ್, ರಾಕೇಶ್ ನರ್ಸವಾಣಿ ಅವರು ಚಿಟ್ ಫಂಡ್ ಕಂಪನಿಗಳನ್ನು ನಡೆಸುತ್ತಿದ್ದು, ಅಕ್ರಮ ಮರಳು ದಂಧೆಯಲ್ಲೂ ಶಾಮೀಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರಪ್ರದೇಶದಲ್ಲಿ ಇತ್ತೀಚೆಗಷ್ಟೇ ಪತ್ರಕರ್ತ ಜಗೇಂದ್ರ ಸಿಂಗ್ರನ್ನು ಸಜೀವವಾಗಿ ದಹಿಸಿ ಹತ್ಯೆ ಮಾಡಲಾಗಿತ್ತು. ಶಾಸಕ ರಾಮಮೂರ್ತಿ ಅಕ್ರಮ ಗಣಿಗಾರಿಕೆ, ಭೂ ಕಬಳಿಕೆಗಳ ಮುಂತಾದ ಭ್ರಷ್ಟಾಚಾರ ಕೃತ್ಯಗಳನ್ನು ನಡೆಸಿದ ಆರೋಪವಿದೆ.
ಈ ಬಗ್ಗೆ ಪತ್ರಿಕೆಗಳಿಗೆ ಜಗೇಂದ್ರ ಸಿಂಗ್ ವರದಿ ಮಾಡಿದ ತಪ್ಪಿಗೆ ಅವರನ್ನು ಕೊಲ್ಲಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಿತ್ತು.ಈಗ ಪೆಸ್ ಕ್ಲಬ್ ಆಫ್ ಇಂಡಿಯಾ ಮನವಿ ಸ್ವೀಕರಿಸಿದ ಸುಪ್ರೀಂಕೋರ್ಟ್, ಉತ್ತರಪ್ರದೇಶ ಹಾಗೂ ಮಧ್ಯಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications